Homeಮುಖಪುಟಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ - ಬಿ. ಶ್ರೀಪಾದ ಭಟ್

- Advertisement -
- Advertisement -

ವಿವಾದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು, ವಿ.ವಿ. ಗಳ ಉಪಕುಲಪತಿಗಳನ್ನು ಉದ್ದೇಶಿಸಿ ‘NEP 2020 ಯನ್ನು ಯಾವ ರೀತಿ ಜಾರಿಗೊಳಿಸಬೇಕು, ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳು ಕುರಿತು ಸಿದ್ದತೆ ಮಾಡಿಕೊಳ್ಳಬೇಕೆಂದು’ ಅಕ್ಟೋಬರ್ 20, ರಂದು UGC ಸುತ್ತೋಲೆಯೊಂದನ್ನು ಹೊರಡಿಸಿದೆ.

ಕೊರೊನಾ ಸಾಂಕ್ರಮಿಕದ ಸಂದರ್ಭದಲ್ಲಿ ಸುಗ್ರೀವಾಜ್ಞೆಗಳನ್ನು ಬಳಸಿ ಕೇಂದ್ರ ಸರ್ಕಾರ ರೈತ ಮಸೂದೆಗಳನ್ನು ಜಾರಿಗೊಳಿಸಿತ್ತು. ಇದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಸಹ ಸಂಸತ್ತಿನ ಎರಡು ಸದನಗಳಲ್ಲಿ ಅನುಮೋದಿಸಿದೆ. ಇದೇ ರೀತಿಯಲ್ಲಿ NEP 2020 ಸಹ ವಿವಾದಾತ್ಮಕ ನೀತಿಯಾಗಿದ್ದು ಇದಕ್ಕೆ ಹಲವು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಅದನ್ನು ಕಡೆಗಣಿಸಿ ಕೊರೊನಾ ಸಮಯದಲ್ಲಿ ಜಾರಿಗೊಳಿಸಲು ತಯಾರಿ ನಡೆಸಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಗುರಿಯಾಗಿದೆ.

ಸಂವಿಧಾನದ ಉಲ್ಲಂಘನೆ – ಬಿ. ಶ್ರೀಪಾದ ಭಟ್ ಆರೋಪ

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಶಿಕ್ಷಣ ತಜ್ಞರು ಮತ್ತು ಹೋರಾಟಗಾರರಾದ ಬಿ. ಶ್ರೀಪಾದ ಭಟ್, “ಇದು ಮೇಲ್ನೋಟಕ್ಕೆ ಕಾಣುವಂತೆ ಸಂವಿಧಾನದ ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಸಂವಿಧಾನದ ಶೆಡ್ಯೂಲ್ 7ರ ಅನುಸಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಶಿಕ್ಷಣದ ಕುರಿತಾದ ಯಾವುದೇ ಬಗೆಯ ನೀತಿ, ನಿಯಮಾವಳಿಗಳನ್ನು, ಕಾನೂನು, ಮಾರ್ಗಸೂಚಿಗಳನ್ನು (policies, rules & guidelines) ರೂಪಿಸಲು ರಾಜ್ಯ ಸರಕಾರಗಳಿಗೆ ಸಮಾನ ಅಧಿಕಾರವಿದೆ. ಈಗಿರುವಾಗ NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಭಾರತೀಯ ಸಂವಿದಾನದ ಪರಿಚ್ಚೇದ 246, ಶೆಡ್ಯೂಲ್ 7, ಪಟ್ಟಿ 2, Entry 32ರ ಅನುಸಾರ ವಿಶ್ವವಿದ್ಯಾಲಯಗಳ ಆಡಳಿತವು (governance) ರಾಜ್ಯಗಳ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲದೇ ರಾಜ್ಯ ಸರಕಾರಗಳು NEP ಕುರಿತು ಶಿಕ್ಷಣ ಹಕ್ಕುದಾರರಾದ (stake holders) ಪೋಷಕ ಸಂಘಟನೆ, ವಿದ್ಯಾರ್ಥಿ ಸಂಘಟನೆ, ಶಿಕ್ಷಕ ಸಂಘಟನೆ, ಎಸ್‌ಡಿಎಂಸಿ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ UGC ಚುನಾಯಿತ ರಾಜ್ಯ ಸರಕಾರಗಳನ್ನು ಕಡೆಗಣಿಸಿ ನೇರವಾಗಿ ಉಪಕುಲಪತಿಗಳಿಗೆ ಸುತ್ತೋಲೆ ಹೊರಡಿಸಿ, ಜಾರಿಗೊಳಿಸುವ UGCಯ ಈ ನಡೆ ಸಂವಿಧಾನದ ಗೌರವಕ್ಕೆ ಚ್ಯುತಿ ತಂದಿದೆ ಎಂದು ಎಂದಿದ್ದಾರೆ.

ಮೊದಲಿಗೆ ಈ ಸುತ್ತೋಲೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕು. ಎಲ್ಲ ಪ್ರಜ್ಞಾವಂತರು, ಪ್ರಗತಿಪರ ಸಂಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಇದರ ಕುರಿತು ನಿರಂತರ ಚರ್ಚೆ ನಡೆಸಬೇಕು ಎಂದು ಕರೆ ನೀಡಿರುವ ಅವರು ಸಾರ್ವಜನಿಕ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?


ನಮ್ಮ ಸಂವಿಧಾನವು ಹೇಳಿರುವ ಸಾಮಾಜಿಕ ನ್ಯಾಯ, ಸಮಾನತೆ, ಪ್ರಜಾಸತ್ತಾತ್ಮಕ ಜಾತ್ಯಾತೀತ ಸಮಾಜವಾದಿ ಗಣತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ನಮಗೆ ಬೇಕಿದೆ. ಆದರೆ ಹಣವಂತರಿಗೆ ಮಾತ್ರ ಶಿಕ್ಷಣ ಸಿಗುವಂತೆ ಮಾಡುವ, ಖಾಸಗೀಕರಣವನ್ನು ಪ್ರೋತ್ಸಾಹಿಸುವ, ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುವ ಈ ಶಿಕ್ಷಣ ನೀತಿ ನಮಗೆ ಬೇಡ ಎಂದು ಕೆವಿಎಸ್‌ ಸಂಚಾಲಕರಾದ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಸಂಸತ್ತಿನಲ್ಲಿ ಈ ಮಸೂದೆ ಚರ್ಚೆಯಾಗದೇ ಅಂಗೀಕರಿಸಿರುವುದೇ ಅಪ್ರಜಾತಂತ್ರಕಾರಿ. ಈ ಕರಡನ್ನು ಸಂಪೂರ್ಣವಾಗಿ ಎಲ್ಲಾ ಭಾಷೆಗಳಲ್ಲಿ ಅನುವಾದಗೊಂಡು ಸಾರ್ವಜನಿಕ ಚರ್ಚೆಗೆ ಬಿಟ್ಟಿಲ್ಲ. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ರಾಜಕೀಯ ಅಜೆಂಡಾವನ್ನು ಜಾರಿಗೊಳಿಸುವುದು ಎನ್‌ಇಪಿ ಜಾರಿಯ ಉದ್ದೇಶವಾಗಿದೆ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿರುವುದರಿಂದ ಈಗಾಗಲೇ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ಸರ್ಕಾರಗಳು ಇದನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿವೆ. ನಾವು ಈ ಕುರಿತು ರಾಜ್ಯದ ವಿರೋಧ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡಿದ್ದೇವೆ. ನಾಡಿನ ಭವಿಷ್ಯವನ್ನು ತೀರ್ಮಾನ ಮಾಡುವ ಈ ನೀತಿ ಎಲ್ಲರ ಅಭಿಪ್ರಾಯ ಒಳಗೊಂಡು ಸಮಗ್ರವಾಗಿರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಎಸ್‌ಎಫ್‌ಐ ಕಾರ್ಯದರ್ಶಿ ವಾಸುದೇವರೆಡ್ಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿದ್ದು ಅವುಗಳನ್ನು ಮರೆಮಾಚುವ ಮತ್ತು ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಅದನ್ನು ಜಾರಿಗೊಳಿಸಲು ಹೊರಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಾಗಾಗಿ ಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ ಎಂದು ಎಸ್.ಐ.ಓ ಸಂಘಟನೆ ಆಗ್ರಹಿಸಿದೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

Also Read: NEP 2020: What Hindutva Domination in Education Will Look Like

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...