Homeಮುಖಪುಟಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ - ಬಿ. ಶ್ರೀಪಾದ ಭಟ್

- Advertisement -
- Advertisement -

ವಿವಾದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು, ವಿ.ವಿ. ಗಳ ಉಪಕುಲಪತಿಗಳನ್ನು ಉದ್ದೇಶಿಸಿ ‘NEP 2020 ಯನ್ನು ಯಾವ ರೀತಿ ಜಾರಿಗೊಳಿಸಬೇಕು, ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳು ಕುರಿತು ಸಿದ್ದತೆ ಮಾಡಿಕೊಳ್ಳಬೇಕೆಂದು’ ಅಕ್ಟೋಬರ್ 20, ರಂದು UGC ಸುತ್ತೋಲೆಯೊಂದನ್ನು ಹೊರಡಿಸಿದೆ.

ಕೊರೊನಾ ಸಾಂಕ್ರಮಿಕದ ಸಂದರ್ಭದಲ್ಲಿ ಸುಗ್ರೀವಾಜ್ಞೆಗಳನ್ನು ಬಳಸಿ ಕೇಂದ್ರ ಸರ್ಕಾರ ರೈತ ಮಸೂದೆಗಳನ್ನು ಜಾರಿಗೊಳಿಸಿತ್ತು. ಇದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಸಹ ಸಂಸತ್ತಿನ ಎರಡು ಸದನಗಳಲ್ಲಿ ಅನುಮೋದಿಸಿದೆ. ಇದೇ ರೀತಿಯಲ್ಲಿ NEP 2020 ಸಹ ವಿವಾದಾತ್ಮಕ ನೀತಿಯಾಗಿದ್ದು ಇದಕ್ಕೆ ಹಲವು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಅದನ್ನು ಕಡೆಗಣಿಸಿ ಕೊರೊನಾ ಸಮಯದಲ್ಲಿ ಜಾರಿಗೊಳಿಸಲು ತಯಾರಿ ನಡೆಸಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಗುರಿಯಾಗಿದೆ.

ಸಂವಿಧಾನದ ಉಲ್ಲಂಘನೆ – ಬಿ. ಶ್ರೀಪಾದ ಭಟ್ ಆರೋಪ

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಶಿಕ್ಷಣ ತಜ್ಞರು ಮತ್ತು ಹೋರಾಟಗಾರರಾದ ಬಿ. ಶ್ರೀಪಾದ ಭಟ್, “ಇದು ಮೇಲ್ನೋಟಕ್ಕೆ ಕಾಣುವಂತೆ ಸಂವಿಧಾನದ ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಸಂವಿಧಾನದ ಶೆಡ್ಯೂಲ್ 7ರ ಅನುಸಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಶಿಕ್ಷಣದ ಕುರಿತಾದ ಯಾವುದೇ ಬಗೆಯ ನೀತಿ, ನಿಯಮಾವಳಿಗಳನ್ನು, ಕಾನೂನು, ಮಾರ್ಗಸೂಚಿಗಳನ್ನು (policies, rules & guidelines) ರೂಪಿಸಲು ರಾಜ್ಯ ಸರಕಾರಗಳಿಗೆ ಸಮಾನ ಅಧಿಕಾರವಿದೆ. ಈಗಿರುವಾಗ NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಭಾರತೀಯ ಸಂವಿದಾನದ ಪರಿಚ್ಚೇದ 246, ಶೆಡ್ಯೂಲ್ 7, ಪಟ್ಟಿ 2, Entry 32ರ ಅನುಸಾರ ವಿಶ್ವವಿದ್ಯಾಲಯಗಳ ಆಡಳಿತವು (governance) ರಾಜ್ಯಗಳ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲದೇ ರಾಜ್ಯ ಸರಕಾರಗಳು NEP ಕುರಿತು ಶಿಕ್ಷಣ ಹಕ್ಕುದಾರರಾದ (stake holders) ಪೋಷಕ ಸಂಘಟನೆ, ವಿದ್ಯಾರ್ಥಿ ಸಂಘಟನೆ, ಶಿಕ್ಷಕ ಸಂಘಟನೆ, ಎಸ್‌ಡಿಎಂಸಿ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ UGC ಚುನಾಯಿತ ರಾಜ್ಯ ಸರಕಾರಗಳನ್ನು ಕಡೆಗಣಿಸಿ ನೇರವಾಗಿ ಉಪಕುಲಪತಿಗಳಿಗೆ ಸುತ್ತೋಲೆ ಹೊರಡಿಸಿ, ಜಾರಿಗೊಳಿಸುವ UGCಯ ಈ ನಡೆ ಸಂವಿಧಾನದ ಗೌರವಕ್ಕೆ ಚ್ಯುತಿ ತಂದಿದೆ ಎಂದು ಎಂದಿದ್ದಾರೆ.

ಮೊದಲಿಗೆ ಈ ಸುತ್ತೋಲೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕು. ಎಲ್ಲ ಪ್ರಜ್ಞಾವಂತರು, ಪ್ರಗತಿಪರ ಸಂಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಇದರ ಕುರಿತು ನಿರಂತರ ಚರ್ಚೆ ನಡೆಸಬೇಕು ಎಂದು ಕರೆ ನೀಡಿರುವ ಅವರು ಸಾರ್ವಜನಿಕ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?


ನಮ್ಮ ಸಂವಿಧಾನವು ಹೇಳಿರುವ ಸಾಮಾಜಿಕ ನ್ಯಾಯ, ಸಮಾನತೆ, ಪ್ರಜಾಸತ್ತಾತ್ಮಕ ಜಾತ್ಯಾತೀತ ಸಮಾಜವಾದಿ ಗಣತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ನಮಗೆ ಬೇಕಿದೆ. ಆದರೆ ಹಣವಂತರಿಗೆ ಮಾತ್ರ ಶಿಕ್ಷಣ ಸಿಗುವಂತೆ ಮಾಡುವ, ಖಾಸಗೀಕರಣವನ್ನು ಪ್ರೋತ್ಸಾಹಿಸುವ, ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುವ ಈ ಶಿಕ್ಷಣ ನೀತಿ ನಮಗೆ ಬೇಡ ಎಂದು ಕೆವಿಎಸ್‌ ಸಂಚಾಲಕರಾದ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಸಂಸತ್ತಿನಲ್ಲಿ ಈ ಮಸೂದೆ ಚರ್ಚೆಯಾಗದೇ ಅಂಗೀಕರಿಸಿರುವುದೇ ಅಪ್ರಜಾತಂತ್ರಕಾರಿ. ಈ ಕರಡನ್ನು ಸಂಪೂರ್ಣವಾಗಿ ಎಲ್ಲಾ ಭಾಷೆಗಳಲ್ಲಿ ಅನುವಾದಗೊಂಡು ಸಾರ್ವಜನಿಕ ಚರ್ಚೆಗೆ ಬಿಟ್ಟಿಲ್ಲ. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ರಾಜಕೀಯ ಅಜೆಂಡಾವನ್ನು ಜಾರಿಗೊಳಿಸುವುದು ಎನ್‌ಇಪಿ ಜಾರಿಯ ಉದ್ದೇಶವಾಗಿದೆ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿರುವುದರಿಂದ ಈಗಾಗಲೇ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ಸರ್ಕಾರಗಳು ಇದನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿವೆ. ನಾವು ಈ ಕುರಿತು ರಾಜ್ಯದ ವಿರೋಧ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡಿದ್ದೇವೆ. ನಾಡಿನ ಭವಿಷ್ಯವನ್ನು ತೀರ್ಮಾನ ಮಾಡುವ ಈ ನೀತಿ ಎಲ್ಲರ ಅಭಿಪ್ರಾಯ ಒಳಗೊಂಡು ಸಮಗ್ರವಾಗಿರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಎಸ್‌ಎಫ್‌ಐ ಕಾರ್ಯದರ್ಶಿ ವಾಸುದೇವರೆಡ್ಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿದ್ದು ಅವುಗಳನ್ನು ಮರೆಮಾಚುವ ಮತ್ತು ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಅದನ್ನು ಜಾರಿಗೊಳಿಸಲು ಹೊರಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಾಗಾಗಿ ಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ ಎಂದು ಎಸ್.ಐ.ಓ ಸಂಘಟನೆ ಆಗ್ರಹಿಸಿದೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

Also Read: NEP 2020: What Hindutva Domination in Education Will Look Like

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...