Homeಮುಖಪುಟಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ - ಬಿ. ಶ್ರೀಪಾದ ಭಟ್

- Advertisement -
- Advertisement -

ವಿವಾದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು, ವಿ.ವಿ. ಗಳ ಉಪಕುಲಪತಿಗಳನ್ನು ಉದ್ದೇಶಿಸಿ ‘NEP 2020 ಯನ್ನು ಯಾವ ರೀತಿ ಜಾರಿಗೊಳಿಸಬೇಕು, ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳು ಕುರಿತು ಸಿದ್ದತೆ ಮಾಡಿಕೊಳ್ಳಬೇಕೆಂದು’ ಅಕ್ಟೋಬರ್ 20, ರಂದು UGC ಸುತ್ತೋಲೆಯೊಂದನ್ನು ಹೊರಡಿಸಿದೆ.

ಕೊರೊನಾ ಸಾಂಕ್ರಮಿಕದ ಸಂದರ್ಭದಲ್ಲಿ ಸುಗ್ರೀವಾಜ್ಞೆಗಳನ್ನು ಬಳಸಿ ಕೇಂದ್ರ ಸರ್ಕಾರ ರೈತ ಮಸೂದೆಗಳನ್ನು ಜಾರಿಗೊಳಿಸಿತ್ತು. ಇದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಸಹ ಸಂಸತ್ತಿನ ಎರಡು ಸದನಗಳಲ್ಲಿ ಅನುಮೋದಿಸಿದೆ. ಇದೇ ರೀತಿಯಲ್ಲಿ NEP 2020 ಸಹ ವಿವಾದಾತ್ಮಕ ನೀತಿಯಾಗಿದ್ದು ಇದಕ್ಕೆ ಹಲವು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಅದನ್ನು ಕಡೆಗಣಿಸಿ ಕೊರೊನಾ ಸಮಯದಲ್ಲಿ ಜಾರಿಗೊಳಿಸಲು ತಯಾರಿ ನಡೆಸಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಗುರಿಯಾಗಿದೆ.

ಸಂವಿಧಾನದ ಉಲ್ಲಂಘನೆ – ಬಿ. ಶ್ರೀಪಾದ ಭಟ್ ಆರೋಪ

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಶಿಕ್ಷಣ ತಜ್ಞರು ಮತ್ತು ಹೋರಾಟಗಾರರಾದ ಬಿ. ಶ್ರೀಪಾದ ಭಟ್, “ಇದು ಮೇಲ್ನೋಟಕ್ಕೆ ಕಾಣುವಂತೆ ಸಂವಿಧಾನದ ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಸಂವಿಧಾನದ ಶೆಡ್ಯೂಲ್ 7ರ ಅನುಸಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಶಿಕ್ಷಣದ ಕುರಿತಾದ ಯಾವುದೇ ಬಗೆಯ ನೀತಿ, ನಿಯಮಾವಳಿಗಳನ್ನು, ಕಾನೂನು, ಮಾರ್ಗಸೂಚಿಗಳನ್ನು (policies, rules & guidelines) ರೂಪಿಸಲು ರಾಜ್ಯ ಸರಕಾರಗಳಿಗೆ ಸಮಾನ ಅಧಿಕಾರವಿದೆ. ಈಗಿರುವಾಗ NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಭಾರತೀಯ ಸಂವಿದಾನದ ಪರಿಚ್ಚೇದ 246, ಶೆಡ್ಯೂಲ್ 7, ಪಟ್ಟಿ 2, Entry 32ರ ಅನುಸಾರ ವಿಶ್ವವಿದ್ಯಾಲಯಗಳ ಆಡಳಿತವು (governance) ರಾಜ್ಯಗಳ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲದೇ ರಾಜ್ಯ ಸರಕಾರಗಳು NEP ಕುರಿತು ಶಿಕ್ಷಣ ಹಕ್ಕುದಾರರಾದ (stake holders) ಪೋಷಕ ಸಂಘಟನೆ, ವಿದ್ಯಾರ್ಥಿ ಸಂಘಟನೆ, ಶಿಕ್ಷಕ ಸಂಘಟನೆ, ಎಸ್‌ಡಿಎಂಸಿ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ UGC ಚುನಾಯಿತ ರಾಜ್ಯ ಸರಕಾರಗಳನ್ನು ಕಡೆಗಣಿಸಿ ನೇರವಾಗಿ ಉಪಕುಲಪತಿಗಳಿಗೆ ಸುತ್ತೋಲೆ ಹೊರಡಿಸಿ, ಜಾರಿಗೊಳಿಸುವ UGCಯ ಈ ನಡೆ ಸಂವಿಧಾನದ ಗೌರವಕ್ಕೆ ಚ್ಯುತಿ ತಂದಿದೆ ಎಂದು ಎಂದಿದ್ದಾರೆ.

ಮೊದಲಿಗೆ ಈ ಸುತ್ತೋಲೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕು. ಎಲ್ಲ ಪ್ರಜ್ಞಾವಂತರು, ಪ್ರಗತಿಪರ ಸಂಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಇದರ ಕುರಿತು ನಿರಂತರ ಚರ್ಚೆ ನಡೆಸಬೇಕು ಎಂದು ಕರೆ ನೀಡಿರುವ ಅವರು ಸಾರ್ವಜನಿಕ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?


ನಮ್ಮ ಸಂವಿಧಾನವು ಹೇಳಿರುವ ಸಾಮಾಜಿಕ ನ್ಯಾಯ, ಸಮಾನತೆ, ಪ್ರಜಾಸತ್ತಾತ್ಮಕ ಜಾತ್ಯಾತೀತ ಸಮಾಜವಾದಿ ಗಣತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ನಮಗೆ ಬೇಕಿದೆ. ಆದರೆ ಹಣವಂತರಿಗೆ ಮಾತ್ರ ಶಿಕ್ಷಣ ಸಿಗುವಂತೆ ಮಾಡುವ, ಖಾಸಗೀಕರಣವನ್ನು ಪ್ರೋತ್ಸಾಹಿಸುವ, ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುವ ಈ ಶಿಕ್ಷಣ ನೀತಿ ನಮಗೆ ಬೇಡ ಎಂದು ಕೆವಿಎಸ್‌ ಸಂಚಾಲಕರಾದ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಸಂಸತ್ತಿನಲ್ಲಿ ಈ ಮಸೂದೆ ಚರ್ಚೆಯಾಗದೇ ಅಂಗೀಕರಿಸಿರುವುದೇ ಅಪ್ರಜಾತಂತ್ರಕಾರಿ. ಈ ಕರಡನ್ನು ಸಂಪೂರ್ಣವಾಗಿ ಎಲ್ಲಾ ಭಾಷೆಗಳಲ್ಲಿ ಅನುವಾದಗೊಂಡು ಸಾರ್ವಜನಿಕ ಚರ್ಚೆಗೆ ಬಿಟ್ಟಿಲ್ಲ. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ರಾಜಕೀಯ ಅಜೆಂಡಾವನ್ನು ಜಾರಿಗೊಳಿಸುವುದು ಎನ್‌ಇಪಿ ಜಾರಿಯ ಉದ್ದೇಶವಾಗಿದೆ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿರುವುದರಿಂದ ಈಗಾಗಲೇ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ಸರ್ಕಾರಗಳು ಇದನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿವೆ. ನಾವು ಈ ಕುರಿತು ರಾಜ್ಯದ ವಿರೋಧ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡಿದ್ದೇವೆ. ನಾಡಿನ ಭವಿಷ್ಯವನ್ನು ತೀರ್ಮಾನ ಮಾಡುವ ಈ ನೀತಿ ಎಲ್ಲರ ಅಭಿಪ್ರಾಯ ಒಳಗೊಂಡು ಸಮಗ್ರವಾಗಿರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಎಸ್‌ಎಫ್‌ಐ ಕಾರ್ಯದರ್ಶಿ ವಾಸುದೇವರೆಡ್ಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿದ್ದು ಅವುಗಳನ್ನು ಮರೆಮಾಚುವ ಮತ್ತು ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಅದನ್ನು ಜಾರಿಗೊಳಿಸಲು ಹೊರಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಾಗಾಗಿ ಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ ಎಂದು ಎಸ್.ಐ.ಓ ಸಂಘಟನೆ ಆಗ್ರಹಿಸಿದೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

Also Read: NEP 2020: What Hindutva Domination in Education Will Look Like

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....