Homeಮುಖಪುಟಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

ಚರ್ಚೆ ಇಲ್ಲದೇ NEP 2020 ಜಾರಿಗೆ ಮುಂದಾದ ಕೇಂದ್ರ: ಶಿಕ್ಷಣ ತಜ್ಞರ ಆಕ್ರೋಶ

NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ - ಬಿ. ಶ್ರೀಪಾದ ಭಟ್

- Advertisement -
- Advertisement -

ವಿವಾದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು, ವಿ.ವಿ. ಗಳ ಉಪಕುಲಪತಿಗಳನ್ನು ಉದ್ದೇಶಿಸಿ ‘NEP 2020 ಯನ್ನು ಯಾವ ರೀತಿ ಜಾರಿಗೊಳಿಸಬೇಕು, ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳು ಕುರಿತು ಸಿದ್ದತೆ ಮಾಡಿಕೊಳ್ಳಬೇಕೆಂದು’ ಅಕ್ಟೋಬರ್ 20, ರಂದು UGC ಸುತ್ತೋಲೆಯೊಂದನ್ನು ಹೊರಡಿಸಿದೆ.

ಕೊರೊನಾ ಸಾಂಕ್ರಮಿಕದ ಸಂದರ್ಭದಲ್ಲಿ ಸುಗ್ರೀವಾಜ್ಞೆಗಳನ್ನು ಬಳಸಿ ಕೇಂದ್ರ ಸರ್ಕಾರ ರೈತ ಮಸೂದೆಗಳನ್ನು ಜಾರಿಗೊಳಿಸಿತ್ತು. ಇದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಸಹ ಸಂಸತ್ತಿನ ಎರಡು ಸದನಗಳಲ್ಲಿ ಅನುಮೋದಿಸಿದೆ. ಇದೇ ರೀತಿಯಲ್ಲಿ NEP 2020 ಸಹ ವಿವಾದಾತ್ಮಕ ನೀತಿಯಾಗಿದ್ದು ಇದಕ್ಕೆ ಹಲವು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಅದನ್ನು ಕಡೆಗಣಿಸಿ ಕೊರೊನಾ ಸಮಯದಲ್ಲಿ ಜಾರಿಗೊಳಿಸಲು ತಯಾರಿ ನಡೆಸಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಗುರಿಯಾಗಿದೆ.

ಸಂವಿಧಾನದ ಉಲ್ಲಂಘನೆ – ಬಿ. ಶ್ರೀಪಾದ ಭಟ್ ಆರೋಪ

ಈ ಕುರಿತು ಆತಂಕ ವ್ಯಕ್ತಪಡಿಸಿರುವ ಶಿಕ್ಷಣ ತಜ್ಞರು ಮತ್ತು ಹೋರಾಟಗಾರರಾದ ಬಿ. ಶ್ರೀಪಾದ ಭಟ್, “ಇದು ಮೇಲ್ನೋಟಕ್ಕೆ ಕಾಣುವಂತೆ ಸಂವಿಧಾನದ ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಸಂವಿಧಾನದ ಶೆಡ್ಯೂಲ್ 7ರ ಅನುಸಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಶಿಕ್ಷಣದ ಕುರಿತಾದ ಯಾವುದೇ ಬಗೆಯ ನೀತಿ, ನಿಯಮಾವಳಿಗಳನ್ನು, ಕಾನೂನು, ಮಾರ್ಗಸೂಚಿಗಳನ್ನು (policies, rules & guidelines) ರೂಪಿಸಲು ರಾಜ್ಯ ಸರಕಾರಗಳಿಗೆ ಸಮಾನ ಅಧಿಕಾರವಿದೆ. ಈಗಿರುವಾಗ NEP 2020 ಕುರಿತು ಸಂಸತ್ತಿನಲ್ಲಿ, 30 ರಾಜ್ಯಗಳ ವಿಧಾನ ಮಂಡಲಗಳಲ್ಲಿ ಚರ್ಚೆಯಾಗದೇ ಜಾರಿಗೊಳಿಸಲು ಹೊರಟಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಭಾರತೀಯ ಸಂವಿದಾನದ ಪರಿಚ್ಚೇದ 246, ಶೆಡ್ಯೂಲ್ 7, ಪಟ್ಟಿ 2, Entry 32ರ ಅನುಸಾರ ವಿಶ್ವವಿದ್ಯಾಲಯಗಳ ಆಡಳಿತವು (governance) ರಾಜ್ಯಗಳ ವ್ಯಾಪ್ತಿಯಲ್ಲಿ ಬರುತ್ತದೆ. ಅಲ್ಲದೇ ರಾಜ್ಯ ಸರಕಾರಗಳು NEP ಕುರಿತು ಶಿಕ್ಷಣ ಹಕ್ಕುದಾರರಾದ (stake holders) ಪೋಷಕ ಸಂಘಟನೆ, ವಿದ್ಯಾರ್ಥಿ ಸಂಘಟನೆ, ಶಿಕ್ಷಕ ಸಂಘಟನೆ, ಎಸ್‌ಡಿಎಂಸಿ, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ UGC ಚುನಾಯಿತ ರಾಜ್ಯ ಸರಕಾರಗಳನ್ನು ಕಡೆಗಣಿಸಿ ನೇರವಾಗಿ ಉಪಕುಲಪತಿಗಳಿಗೆ ಸುತ್ತೋಲೆ ಹೊರಡಿಸಿ, ಜಾರಿಗೊಳಿಸುವ UGCಯ ಈ ನಡೆ ಸಂವಿಧಾನದ ಗೌರವಕ್ಕೆ ಚ್ಯುತಿ ತಂದಿದೆ ಎಂದು ಎಂದಿದ್ದಾರೆ.

ಮೊದಲಿಗೆ ಈ ಸುತ್ತೋಲೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಬೇಕು. ಎಲ್ಲ ಪ್ರಜ್ಞಾವಂತರು, ಪ್ರಗತಿಪರ ಸಂಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಇದರ ಕುರಿತು ನಿರಂತರ ಚರ್ಚೆ ನಡೆಸಬೇಕು ಎಂದು ಕರೆ ನೀಡಿರುವ ಅವರು ಸಾರ್ವಜನಿಕ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದಿದ್ದಾರೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?


ನಮ್ಮ ಸಂವಿಧಾನವು ಹೇಳಿರುವ ಸಾಮಾಜಿಕ ನ್ಯಾಯ, ಸಮಾನತೆ, ಪ್ರಜಾಸತ್ತಾತ್ಮಕ ಜಾತ್ಯಾತೀತ ಸಮಾಜವಾದಿ ಗಣತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ನಮಗೆ ಬೇಕಿದೆ. ಆದರೆ ಹಣವಂತರಿಗೆ ಮಾತ್ರ ಶಿಕ್ಷಣ ಸಿಗುವಂತೆ ಮಾಡುವ, ಖಾಸಗೀಕರಣವನ್ನು ಪ್ರೋತ್ಸಾಹಿಸುವ, ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುವ ಈ ಶಿಕ್ಷಣ ನೀತಿ ನಮಗೆ ಬೇಡ ಎಂದು ಕೆವಿಎಸ್‌ ಸಂಚಾಲಕರಾದ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಸಂಸತ್ತಿನಲ್ಲಿ ಈ ಮಸೂದೆ ಚರ್ಚೆಯಾಗದೇ ಅಂಗೀಕರಿಸಿರುವುದೇ ಅಪ್ರಜಾತಂತ್ರಕಾರಿ. ಈ ಕರಡನ್ನು ಸಂಪೂರ್ಣವಾಗಿ ಎಲ್ಲಾ ಭಾಷೆಗಳಲ್ಲಿ ಅನುವಾದಗೊಂಡು ಸಾರ್ವಜನಿಕ ಚರ್ಚೆಗೆ ಬಿಟ್ಟಿಲ್ಲ. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ರಾಜಕೀಯ ಅಜೆಂಡಾವನ್ನು ಜಾರಿಗೊಳಿಸುವುದು ಎನ್‌ಇಪಿ ಜಾರಿಯ ಉದ್ದೇಶವಾಗಿದೆ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿರುವುದರಿಂದ ಈಗಾಗಲೇ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ಸರ್ಕಾರಗಳು ಇದನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿವೆ. ನಾವು ಈ ಕುರಿತು ರಾಜ್ಯದ ವಿರೋಧ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡಿದ್ದೇವೆ. ನಾಡಿನ ಭವಿಷ್ಯವನ್ನು ತೀರ್ಮಾನ ಮಾಡುವ ಈ ನೀತಿ ಎಲ್ಲರ ಅಭಿಪ್ರಾಯ ಒಳಗೊಂಡು ಸಮಗ್ರವಾಗಿರಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಎಸ್‌ಎಫ್‌ಐ ಕಾರ್ಯದರ್ಶಿ ವಾಸುದೇವರೆಡ್ಡಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿದ್ದು ಅವುಗಳನ್ನು ಮರೆಮಾಚುವ ಮತ್ತು ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಅದನ್ನು ಜಾರಿಗೊಳಿಸಲು ಹೊರಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಾಗಾಗಿ ಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ ಎಂದು ಎಸ್.ಐ.ಓ ಸಂಘಟನೆ ಆಗ್ರಹಿಸಿದೆ.


ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

Also Read: NEP 2020: What Hindutva Domination in Education Will Look Like

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...