Homeಮುಖಪುಟಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ...

ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳಲ್ಲಿ ಬಂಡವಾಳ ಹಿಂಪಡೆತ ಮತ್ತು ಖಾಸಗೀಕರಣದಂತಹ ಯೋಜನೆಗಳಿಗೆ ಒಕ್ಕೂಟ ಸರ್ಕಾರ ಚಾಲನೆ ನೀಡಿದೆ. ಇದರ ಜೊತೆಯಲ್ಲೇ ಈಗ 4 ವರ್ಷಗಳ ಅವಧಿಗೆ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಭೂತ ಸೌಲಭ್ಯಗಳ ಖಾಸಗೀಕರಣದ ಯೋಜನೆಯನ್ನು ಘೋಷಿಸಿದೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಆಸ್ತಿಯನ್ನು ಖಾಸಗಿಯವರು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎನ್ನಲಾಗಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿ ಭಾರತೀಯ ರೈಲ್ವೆ, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿಯನ್ನು ಮುಖ್ಯವಾಗಿ ಖಾಸಗೀಕರಣಗೊಳಿಸಲು ಆಯ್ದೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ 15 ರೈಲ್ವೆ ಸ್ಟೇಡಿಯಂಗಳು, 25 ವಿಮಾನ ನಿಲ್ದಾಣಗಳು ಮತ್ತು 160 ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಳನ್ನು ಖಾಸಗೀಕರಣಗೊಳಿಸಲಾಗುವುದು. ಇದರ ಹೊರತಾಗಿ ರಸ್ತೆ, ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತು ಗ್ಯಾಸ್ ಪೈಪ್ ಲೈನ್‌ಗಳನ್ನೂ ಖಾಸಗೀಕರಣಗೊಳಿಸಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ಬಂದಾಗಿನಿಂದ ದೇಶದ ಆಸ್ತಿಯನ್ನು ಮಾರಾಟ ಮಾಡುವುದು ಮತ್ತು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಸಾಮಾಜಿಕ ಹೋರಾಟಗಾರರು ಬ್ಯಾಂಕ್ ನೌಕರರು, ರೈತರು, ವಿದ್ಯಾರ್ಥಿಗಳು ಈ ಬಗ್ಗೆ ದನಿ ಎತ್ತಿದರೂ ಸರ್ಕಾರ ಮಾತ್ರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಮುಂದುವರೆಸುತ್ತಿದೆ.

ಈಗಾಗಲೇ ಮಾರಾಟವಾಗಿರುವ ಸಂಸ್ಥೆಗಳು

ಏರ್ ಇಂಡಿಯಾ

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI)

ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR)

ಬೆಮೆಲ್

ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT)

ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS)

ಪವನ್ ಹನ್ಸ್ ಲಿಮಿಟೆಡ್

ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML)

ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL)

ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.

ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL)

ಎಚ್‌ಎಲ್‌ಎಲ್ ಲೈಫ್ ಕೇರ್‌

ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC)

ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್

ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL)

ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ)

ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್

ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.

ಮುಂದೆ ಮಾರಲು ಸಿದ್ದಗೊಂಡಿರುವ ಸಂಸ್ಥೆಗಳು

150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಸರ್ಕಾರವು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ.

ಭಾರತೀಯ ರೈಲ್ವೇ

ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC)

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್)

ಪಂಜಾಬ್ ಸಿಂಧ್ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಇಂಡಿಯನ್ ಓವರ್ ಸೀಸ್ ಬ್ಯಾಂಕ್

ಕಲ್ಲಿದ್ದಲು ಗಣಿಗಾರಿಕೆ

ರೈಲ್ವೆ ಸ್ಟೇಡಿಯಂಗಳು

ವಿದ್ಯುತ್ ಪೂರೈಕೆ ವ್ಯವಸ್ಥೆ

BSNL… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.

ಇನ್ನು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15 ಮತ್ತು16 ರಂದು ಪ್ರತಿಭಟನೆ ನಡೆಸಿದೆ.

ಒಕ್ಕೂಟ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎನ್ನುವ ಬಿಜೆಪಿ, ಆ ಅವಧಿಯಲ್ಲಿ ಜನರ ಹಣದಿಂದ ನಿರ್ಮಿಸಿದ ಎಲ್ಲಾ ಆಸ್ತಿಯನ್ನು ತಮ್ಮ ಎರಡು-ಮೂರು ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಾರ್ವಜನಿಕ ಆಸ್ತಿಯ ಅನಾಹುತಕಾರಿ ಮಾರಾಟವನ್ನು ರಾಷ್ಟ್ರದ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾದ ಸಂದರ್ಭದಲ್ಲಿ ಯಾರೂ ಮಾತಾಡುತ್ತಿಲ್ಲ! ಈ ವಿಕ್ಷಿಪ್ತ ಕಾಲದಲ್ಲಿ, ರಾಹುಲ್ ಧ್ವನಿ ಒಂಟಿಯಾಗಿದೆ! ಬ್ಯಾಂಕ್ ಗಳ ಒಟ್ಟುಗೂಡಿಸುವಿಕೆ ಕೂಡಾ ಇದಕ್ಕಾಗಿಯೇ ಮಾಡಿದ್ದ ಹಿಡನ್ ಅಜೆಂಡಾ ಎಂದು ನನಗೆ ಮೊದಲೇ ಅನ್ನಿಸಿದೆ. ಬೆಕ್ಕಿಗೆ ಗಂಟೆ ಕಟ್ಟಬೇಕಾದ ವಿರೋಧ ಪಕ್ಷಗಳು ಬಲಹೀನವಾಗಿವೆ. ದುರ್ಬಲರಾದ ನಾವು, ಧರ್ಮಗ್ಲಾನಿಯ ಸಂದರ್ಭದಲ್ಲಿ ಕೃಷ್ಣ ಬರುವನೆಂದು ಕೈಕಟ್ಟಿ ಕುಳಿತಿದ್ದೇವೆ!

  2. sama vishamategala sangamavidu; adalita paksha halavaru paksha sadashyarannu serisikondu munnadeyuttide; aste satya.
    moovaru mukhya mantrigalu shasakariruvaga adarante halavu dy. mukhya mantrigalalagui karya nirvahisidavar sangama sthalavidu. yella paksha ghanategalannu kapaduva HONE ADALITAPAKSHADDE YIRUTEE ade “VIDHAN SOUDHA KARYA KALAPA VYAPTI> DHANYAVADA>
    Manjanatha Seetharamaiah
    Yestt6ierdaioty 6naot51t 07:d50h ·

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...