Homeಮುಖಪುಟಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ...

ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳಲ್ಲಿ ಬಂಡವಾಳ ಹಿಂಪಡೆತ ಮತ್ತು ಖಾಸಗೀಕರಣದಂತಹ ಯೋಜನೆಗಳಿಗೆ ಒಕ್ಕೂಟ ಸರ್ಕಾರ ಚಾಲನೆ ನೀಡಿದೆ. ಇದರ ಜೊತೆಯಲ್ಲೇ ಈಗ 4 ವರ್ಷಗಳ ಅವಧಿಗೆ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಭೂತ ಸೌಲಭ್ಯಗಳ ಖಾಸಗೀಕರಣದ ಯೋಜನೆಯನ್ನು ಘೋಷಿಸಿದೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಆಸ್ತಿಯನ್ನು ಖಾಸಗಿಯವರು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎನ್ನಲಾಗಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿ ಭಾರತೀಯ ರೈಲ್ವೆ, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿಯನ್ನು ಮುಖ್ಯವಾಗಿ ಖಾಸಗೀಕರಣಗೊಳಿಸಲು ಆಯ್ದೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ 15 ರೈಲ್ವೆ ಸ್ಟೇಡಿಯಂಗಳು, 25 ವಿಮಾನ ನಿಲ್ದಾಣಗಳು ಮತ್ತು 160 ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಳನ್ನು ಖಾಸಗೀಕರಣಗೊಳಿಸಲಾಗುವುದು. ಇದರ ಹೊರತಾಗಿ ರಸ್ತೆ, ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತು ಗ್ಯಾಸ್ ಪೈಪ್ ಲೈನ್‌ಗಳನ್ನೂ ಖಾಸಗೀಕರಣಗೊಳಿಸಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ಬಂದಾಗಿನಿಂದ ದೇಶದ ಆಸ್ತಿಯನ್ನು ಮಾರಾಟ ಮಾಡುವುದು ಮತ್ತು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಸಾಮಾಜಿಕ ಹೋರಾಟಗಾರರು ಬ್ಯಾಂಕ್ ನೌಕರರು, ರೈತರು, ವಿದ್ಯಾರ್ಥಿಗಳು ಈ ಬಗ್ಗೆ ದನಿ ಎತ್ತಿದರೂ ಸರ್ಕಾರ ಮಾತ್ರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಮುಂದುವರೆಸುತ್ತಿದೆ.

ಈಗಾಗಲೇ ಮಾರಾಟವಾಗಿರುವ ಸಂಸ್ಥೆಗಳು

ಏರ್ ಇಂಡಿಯಾ

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI)

ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR)

ಬೆಮೆಲ್

ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT)

ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS)

ಪವನ್ ಹನ್ಸ್ ಲಿಮಿಟೆಡ್

ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML)

ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL)

ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.

ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL)

ಎಚ್‌ಎಲ್‌ಎಲ್ ಲೈಫ್ ಕೇರ್‌

ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC)

ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್

ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL)

ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ)

ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್

ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.

ಮುಂದೆ ಮಾರಲು ಸಿದ್ದಗೊಂಡಿರುವ ಸಂಸ್ಥೆಗಳು

150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಸರ್ಕಾರವು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ.

ಭಾರತೀಯ ರೈಲ್ವೇ

ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC)

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್)

ಪಂಜಾಬ್ ಸಿಂಧ್ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಇಂಡಿಯನ್ ಓವರ್ ಸೀಸ್ ಬ್ಯಾಂಕ್

ಕಲ್ಲಿದ್ದಲು ಗಣಿಗಾರಿಕೆ

ರೈಲ್ವೆ ಸ್ಟೇಡಿಯಂಗಳು

ವಿದ್ಯುತ್ ಪೂರೈಕೆ ವ್ಯವಸ್ಥೆ

BSNL… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.

ಇನ್ನು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15 ಮತ್ತು16 ರಂದು ಪ್ರತಿಭಟನೆ ನಡೆಸಿದೆ.

ಒಕ್ಕೂಟ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎನ್ನುವ ಬಿಜೆಪಿ, ಆ ಅವಧಿಯಲ್ಲಿ ಜನರ ಹಣದಿಂದ ನಿರ್ಮಿಸಿದ ಎಲ್ಲಾ ಆಸ್ತಿಯನ್ನು ತಮ್ಮ ಎರಡು-ಮೂರು ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಾರ್ವಜನಿಕ ಆಸ್ತಿಯ ಅನಾಹುತಕಾರಿ ಮಾರಾಟವನ್ನು ರಾಷ್ಟ್ರದ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾದ ಸಂದರ್ಭದಲ್ಲಿ ಯಾರೂ ಮಾತಾಡುತ್ತಿಲ್ಲ! ಈ ವಿಕ್ಷಿಪ್ತ ಕಾಲದಲ್ಲಿ, ರಾಹುಲ್ ಧ್ವನಿ ಒಂಟಿಯಾಗಿದೆ! ಬ್ಯಾಂಕ್ ಗಳ ಒಟ್ಟುಗೂಡಿಸುವಿಕೆ ಕೂಡಾ ಇದಕ್ಕಾಗಿಯೇ ಮಾಡಿದ್ದ ಹಿಡನ್ ಅಜೆಂಡಾ ಎಂದು ನನಗೆ ಮೊದಲೇ ಅನ್ನಿಸಿದೆ. ಬೆಕ್ಕಿಗೆ ಗಂಟೆ ಕಟ್ಟಬೇಕಾದ ವಿರೋಧ ಪಕ್ಷಗಳು ಬಲಹೀನವಾಗಿವೆ. ದುರ್ಬಲರಾದ ನಾವು, ಧರ್ಮಗ್ಲಾನಿಯ ಸಂದರ್ಭದಲ್ಲಿ ಕೃಷ್ಣ ಬರುವನೆಂದು ಕೈಕಟ್ಟಿ ಕುಳಿತಿದ್ದೇವೆ!

  2. sama vishamategala sangamavidu; adalita paksha halavaru paksha sadashyarannu serisikondu munnadeyuttide; aste satya.
    moovaru mukhya mantrigalu shasakariruvaga adarante halavu dy. mukhya mantrigalalagui karya nirvahisidavar sangama sthalavidu. yella paksha ghanategalannu kapaduva HONE ADALITAPAKSHADDE YIRUTEE ade “VIDHAN SOUDHA KARYA KALAPA VYAPTI> DHANYAVADA>
    Manjanatha Seetharamaiah
    Yestt6ierdaioty 6naot51t 07:d50h ·

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...