Homeಮುಖಪುಟಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ...

ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳಲ್ಲಿ ಬಂಡವಾಳ ಹಿಂಪಡೆತ ಮತ್ತು ಖಾಸಗೀಕರಣದಂತಹ ಯೋಜನೆಗಳಿಗೆ ಒಕ್ಕೂಟ ಸರ್ಕಾರ ಚಾಲನೆ ನೀಡಿದೆ. ಇದರ ಜೊತೆಯಲ್ಲೇ ಈಗ 4 ವರ್ಷಗಳ ಅವಧಿಗೆ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಭೂತ ಸೌಲಭ್ಯಗಳ ಖಾಸಗೀಕರಣದ ಯೋಜನೆಯನ್ನು ಘೋಷಿಸಿದೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಆಸ್ತಿಯನ್ನು ಖಾಸಗಿಯವರು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎನ್ನಲಾಗಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿ ಭಾರತೀಯ ರೈಲ್ವೆ, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿಯನ್ನು ಮುಖ್ಯವಾಗಿ ಖಾಸಗೀಕರಣಗೊಳಿಸಲು ಆಯ್ದೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ 15 ರೈಲ್ವೆ ಸ್ಟೇಡಿಯಂಗಳು, 25 ವಿಮಾನ ನಿಲ್ದಾಣಗಳು ಮತ್ತು 160 ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಳನ್ನು ಖಾಸಗೀಕರಣಗೊಳಿಸಲಾಗುವುದು. ಇದರ ಹೊರತಾಗಿ ರಸ್ತೆ, ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತು ಗ್ಯಾಸ್ ಪೈಪ್ ಲೈನ್‌ಗಳನ್ನೂ ಖಾಸಗೀಕರಣಗೊಳಿಸಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ಬಂದಾಗಿನಿಂದ ದೇಶದ ಆಸ್ತಿಯನ್ನು ಮಾರಾಟ ಮಾಡುವುದು ಮತ್ತು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಸಾಮಾಜಿಕ ಹೋರಾಟಗಾರರು ಬ್ಯಾಂಕ್ ನೌಕರರು, ರೈತರು, ವಿದ್ಯಾರ್ಥಿಗಳು ಈ ಬಗ್ಗೆ ದನಿ ಎತ್ತಿದರೂ ಸರ್ಕಾರ ಮಾತ್ರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಮುಂದುವರೆಸುತ್ತಿದೆ.

ಈಗಾಗಲೇ ಮಾರಾಟವಾಗಿರುವ ಸಂಸ್ಥೆಗಳು

ಏರ್ ಇಂಡಿಯಾ

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI)

ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR)

ಬೆಮೆಲ್

ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT)

ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS)

ಪವನ್ ಹನ್ಸ್ ಲಿಮಿಟೆಡ್

ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML)

ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL)

ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.

ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL)

ಎಚ್‌ಎಲ್‌ಎಲ್ ಲೈಫ್ ಕೇರ್‌

ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC)

ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್

ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL)

ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ)

ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್

ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.

ಮುಂದೆ ಮಾರಲು ಸಿದ್ದಗೊಂಡಿರುವ ಸಂಸ್ಥೆಗಳು

150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಸರ್ಕಾರವು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ.

ಭಾರತೀಯ ರೈಲ್ವೇ

ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC)

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್)

ಪಂಜಾಬ್ ಸಿಂಧ್ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಇಂಡಿಯನ್ ಓವರ್ ಸೀಸ್ ಬ್ಯಾಂಕ್

ಕಲ್ಲಿದ್ದಲು ಗಣಿಗಾರಿಕೆ

ರೈಲ್ವೆ ಸ್ಟೇಡಿಯಂಗಳು

ವಿದ್ಯುತ್ ಪೂರೈಕೆ ವ್ಯವಸ್ಥೆ

BSNL… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.

ಇನ್ನು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15 ಮತ್ತು16 ರಂದು ಪ್ರತಿಭಟನೆ ನಡೆಸಿದೆ.

ಒಕ್ಕೂಟ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎನ್ನುವ ಬಿಜೆಪಿ, ಆ ಅವಧಿಯಲ್ಲಿ ಜನರ ಹಣದಿಂದ ನಿರ್ಮಿಸಿದ ಎಲ್ಲಾ ಆಸ್ತಿಯನ್ನು ತಮ್ಮ ಎರಡು-ಮೂರು ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಾರ್ವಜನಿಕ ಆಸ್ತಿಯ ಅನಾಹುತಕಾರಿ ಮಾರಾಟವನ್ನು ರಾಷ್ಟ್ರದ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾದ ಸಂದರ್ಭದಲ್ಲಿ ಯಾರೂ ಮಾತಾಡುತ್ತಿಲ್ಲ! ಈ ವಿಕ್ಷಿಪ್ತ ಕಾಲದಲ್ಲಿ, ರಾಹುಲ್ ಧ್ವನಿ ಒಂಟಿಯಾಗಿದೆ! ಬ್ಯಾಂಕ್ ಗಳ ಒಟ್ಟುಗೂಡಿಸುವಿಕೆ ಕೂಡಾ ಇದಕ್ಕಾಗಿಯೇ ಮಾಡಿದ್ದ ಹಿಡನ್ ಅಜೆಂಡಾ ಎಂದು ನನಗೆ ಮೊದಲೇ ಅನ್ನಿಸಿದೆ. ಬೆಕ್ಕಿಗೆ ಗಂಟೆ ಕಟ್ಟಬೇಕಾದ ವಿರೋಧ ಪಕ್ಷಗಳು ಬಲಹೀನವಾಗಿವೆ. ದುರ್ಬಲರಾದ ನಾವು, ಧರ್ಮಗ್ಲಾನಿಯ ಸಂದರ್ಭದಲ್ಲಿ ಕೃಷ್ಣ ಬರುವನೆಂದು ಕೈಕಟ್ಟಿ ಕುಳಿತಿದ್ದೇವೆ!

  2. sama vishamategala sangamavidu; adalita paksha halavaru paksha sadashyarannu serisikondu munnadeyuttide; aste satya.
    moovaru mukhya mantrigalu shasakariruvaga adarante halavu dy. mukhya mantrigalalagui karya nirvahisidavar sangama sthalavidu. yella paksha ghanategalannu kapaduva HONE ADALITAPAKSHADDE YIRUTEE ade “VIDHAN SOUDHA KARYA KALAPA VYAPTI> DHANYAVADA>
    Manjanatha Seetharamaiah
    Yestt6ierdaioty 6naot51t 07:d50h ·

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...