Homeಮುಖಪುಟಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ...

ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳಲ್ಲಿ ಬಂಡವಾಳ ಹಿಂಪಡೆತ ಮತ್ತು ಖಾಸಗೀಕರಣದಂತಹ ಯೋಜನೆಗಳಿಗೆ ಒಕ್ಕೂಟ ಸರ್ಕಾರ ಚಾಲನೆ ನೀಡಿದೆ. ಇದರ ಜೊತೆಯಲ್ಲೇ ಈಗ 4 ವರ್ಷಗಳ ಅವಧಿಗೆ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಭೂತ ಸೌಲಭ್ಯಗಳ ಖಾಸಗೀಕರಣದ ಯೋಜನೆಯನ್ನು ಘೋಷಿಸಿದೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಆಸ್ತಿಯನ್ನು ಖಾಸಗಿಯವರು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎನ್ನಲಾಗಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿ ಭಾರತೀಯ ರೈಲ್ವೆ, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿಯನ್ನು ಮುಖ್ಯವಾಗಿ ಖಾಸಗೀಕರಣಗೊಳಿಸಲು ಆಯ್ದೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ 15 ರೈಲ್ವೆ ಸ್ಟೇಡಿಯಂಗಳು, 25 ವಿಮಾನ ನಿಲ್ದಾಣಗಳು ಮತ್ತು 160 ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಳನ್ನು ಖಾಸಗೀಕರಣಗೊಳಿಸಲಾಗುವುದು. ಇದರ ಹೊರತಾಗಿ ರಸ್ತೆ, ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತು ಗ್ಯಾಸ್ ಪೈಪ್ ಲೈನ್‌ಗಳನ್ನೂ ಖಾಸಗೀಕರಣಗೊಳಿಸಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ಬಂದಾಗಿನಿಂದ ದೇಶದ ಆಸ್ತಿಯನ್ನು ಮಾರಾಟ ಮಾಡುವುದು ಮತ್ತು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಸಾಮಾಜಿಕ ಹೋರಾಟಗಾರರು ಬ್ಯಾಂಕ್ ನೌಕರರು, ರೈತರು, ವಿದ್ಯಾರ್ಥಿಗಳು ಈ ಬಗ್ಗೆ ದನಿ ಎತ್ತಿದರೂ ಸರ್ಕಾರ ಮಾತ್ರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಮುಂದುವರೆಸುತ್ತಿದೆ.

ಈಗಾಗಲೇ ಮಾರಾಟವಾಗಿರುವ ಸಂಸ್ಥೆಗಳು

ಏರ್ ಇಂಡಿಯಾ

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI)

ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR)

ಬೆಮೆಲ್

ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT)

ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS)

ಪವನ್ ಹನ್ಸ್ ಲಿಮಿಟೆಡ್

ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML)

ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL)

ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.

ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL)

ಎಚ್‌ಎಲ್‌ಎಲ್ ಲೈಫ್ ಕೇರ್‌

ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC)

ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್

ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL)

ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ)

ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್

ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.

ಮುಂದೆ ಮಾರಲು ಸಿದ್ದಗೊಂಡಿರುವ ಸಂಸ್ಥೆಗಳು

150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಸರ್ಕಾರವು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ.

ಭಾರತೀಯ ರೈಲ್ವೇ

ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC)

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್)

ಪಂಜಾಬ್ ಸಿಂಧ್ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಇಂಡಿಯನ್ ಓವರ್ ಸೀಸ್ ಬ್ಯಾಂಕ್

ಕಲ್ಲಿದ್ದಲು ಗಣಿಗಾರಿಕೆ

ರೈಲ್ವೆ ಸ್ಟೇಡಿಯಂಗಳು

ವಿದ್ಯುತ್ ಪೂರೈಕೆ ವ್ಯವಸ್ಥೆ

BSNL… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.

ಇನ್ನು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15 ಮತ್ತು16 ರಂದು ಪ್ರತಿಭಟನೆ ನಡೆಸಿದೆ.

ಒಕ್ಕೂಟ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎನ್ನುವ ಬಿಜೆಪಿ, ಆ ಅವಧಿಯಲ್ಲಿ ಜನರ ಹಣದಿಂದ ನಿರ್ಮಿಸಿದ ಎಲ್ಲಾ ಆಸ್ತಿಯನ್ನು ತಮ್ಮ ಎರಡು-ಮೂರು ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಾರ್ವಜನಿಕ ಆಸ್ತಿಯ ಅನಾಹುತಕಾರಿ ಮಾರಾಟವನ್ನು ರಾಷ್ಟ್ರದ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾದ ಸಂದರ್ಭದಲ್ಲಿ ಯಾರೂ ಮಾತಾಡುತ್ತಿಲ್ಲ! ಈ ವಿಕ್ಷಿಪ್ತ ಕಾಲದಲ್ಲಿ, ರಾಹುಲ್ ಧ್ವನಿ ಒಂಟಿಯಾಗಿದೆ! ಬ್ಯಾಂಕ್ ಗಳ ಒಟ್ಟುಗೂಡಿಸುವಿಕೆ ಕೂಡಾ ಇದಕ್ಕಾಗಿಯೇ ಮಾಡಿದ್ದ ಹಿಡನ್ ಅಜೆಂಡಾ ಎಂದು ನನಗೆ ಮೊದಲೇ ಅನ್ನಿಸಿದೆ. ಬೆಕ್ಕಿಗೆ ಗಂಟೆ ಕಟ್ಟಬೇಕಾದ ವಿರೋಧ ಪಕ್ಷಗಳು ಬಲಹೀನವಾಗಿವೆ. ದುರ್ಬಲರಾದ ನಾವು, ಧರ್ಮಗ್ಲಾನಿಯ ಸಂದರ್ಭದಲ್ಲಿ ಕೃಷ್ಣ ಬರುವನೆಂದು ಕೈಕಟ್ಟಿ ಕುಳಿತಿದ್ದೇವೆ!

  2. sama vishamategala sangamavidu; adalita paksha halavaru paksha sadashyarannu serisikondu munnadeyuttide; aste satya.
    moovaru mukhya mantrigalu shasakariruvaga adarante halavu dy. mukhya mantrigalalagui karya nirvahisidavar sangama sthalavidu. yella paksha ghanategalannu kapaduva HONE ADALITAPAKSHADDE YIRUTEE ade “VIDHAN SOUDHA KARYA KALAPA VYAPTI> DHANYAVADA>
    Manjanatha Seetharamaiah
    Yestt6ierdaioty 6naot51t 07:d50h ·

LEAVE A REPLY

Please enter your comment!
Please enter your name here

- Advertisment -

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...