Homeಮುಖಪುಟಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ...

ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳಲ್ಲಿ ಬಂಡವಾಳ ಹಿಂಪಡೆತ ಮತ್ತು ಖಾಸಗೀಕರಣದಂತಹ ಯೋಜನೆಗಳಿಗೆ ಒಕ್ಕೂಟ ಸರ್ಕಾರ ಚಾಲನೆ ನೀಡಿದೆ. ಇದರ ಜೊತೆಯಲ್ಲೇ ಈಗ 4 ವರ್ಷಗಳ ಅವಧಿಗೆ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಭೂತ ಸೌಲಭ್ಯಗಳ ಖಾಸಗೀಕರಣದ ಯೋಜನೆಯನ್ನು ಘೋಷಿಸಿದೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಆಸ್ತಿಯನ್ನು ಖಾಸಗಿಯವರು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎನ್ನಲಾಗಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿ ಭಾರತೀಯ ರೈಲ್ವೆ, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿಯನ್ನು ಮುಖ್ಯವಾಗಿ ಖಾಸಗೀಕರಣಗೊಳಿಸಲು ಆಯ್ದೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ 15 ರೈಲ್ವೆ ಸ್ಟೇಡಿಯಂಗಳು, 25 ವಿಮಾನ ನಿಲ್ದಾಣಗಳು ಮತ್ತು 160 ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಳನ್ನು ಖಾಸಗೀಕರಣಗೊಳಿಸಲಾಗುವುದು. ಇದರ ಹೊರತಾಗಿ ರಸ್ತೆ, ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತು ಗ್ಯಾಸ್ ಪೈಪ್ ಲೈನ್‌ಗಳನ್ನೂ ಖಾಸಗೀಕರಣಗೊಳಿಸಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ಬಂದಾಗಿನಿಂದ ದೇಶದ ಆಸ್ತಿಯನ್ನು ಮಾರಾಟ ಮಾಡುವುದು ಮತ್ತು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಸಾಮಾಜಿಕ ಹೋರಾಟಗಾರರು ಬ್ಯಾಂಕ್ ನೌಕರರು, ರೈತರು, ವಿದ್ಯಾರ್ಥಿಗಳು ಈ ಬಗ್ಗೆ ದನಿ ಎತ್ತಿದರೂ ಸರ್ಕಾರ ಮಾತ್ರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಮುಂದುವರೆಸುತ್ತಿದೆ.

ಈಗಾಗಲೇ ಮಾರಾಟವಾಗಿರುವ ಸಂಸ್ಥೆಗಳು

ಏರ್ ಇಂಡಿಯಾ

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI)

ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR)

ಬೆಮೆಲ್

ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT)

ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS)

ಪವನ್ ಹನ್ಸ್ ಲಿಮಿಟೆಡ್

ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML)

ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL)

ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.

ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL)

ಎಚ್‌ಎಲ್‌ಎಲ್ ಲೈಫ್ ಕೇರ್‌

ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC)

ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್

ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL)

ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ)

ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್

ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.

ಮುಂದೆ ಮಾರಲು ಸಿದ್ದಗೊಂಡಿರುವ ಸಂಸ್ಥೆಗಳು

150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಸರ್ಕಾರವು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ.

ಭಾರತೀಯ ರೈಲ್ವೇ

ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC)

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್)

ಪಂಜಾಬ್ ಸಿಂಧ್ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಇಂಡಿಯನ್ ಓವರ್ ಸೀಸ್ ಬ್ಯಾಂಕ್

ಕಲ್ಲಿದ್ದಲು ಗಣಿಗಾರಿಕೆ

ರೈಲ್ವೆ ಸ್ಟೇಡಿಯಂಗಳು

ವಿದ್ಯುತ್ ಪೂರೈಕೆ ವ್ಯವಸ್ಥೆ

BSNL… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.

ಇನ್ನು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15 ಮತ್ತು16 ರಂದು ಪ್ರತಿಭಟನೆ ನಡೆಸಿದೆ.

ಒಕ್ಕೂಟ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎನ್ನುವ ಬಿಜೆಪಿ, ಆ ಅವಧಿಯಲ್ಲಿ ಜನರ ಹಣದಿಂದ ನಿರ್ಮಿಸಿದ ಎಲ್ಲಾ ಆಸ್ತಿಯನ್ನು ತಮ್ಮ ಎರಡು-ಮೂರು ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಾರ್ವಜನಿಕ ಆಸ್ತಿಯ ಅನಾಹುತಕಾರಿ ಮಾರಾಟವನ್ನು ರಾಷ್ಟ್ರದ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾದ ಸಂದರ್ಭದಲ್ಲಿ ಯಾರೂ ಮಾತಾಡುತ್ತಿಲ್ಲ! ಈ ವಿಕ್ಷಿಪ್ತ ಕಾಲದಲ್ಲಿ, ರಾಹುಲ್ ಧ್ವನಿ ಒಂಟಿಯಾಗಿದೆ! ಬ್ಯಾಂಕ್ ಗಳ ಒಟ್ಟುಗೂಡಿಸುವಿಕೆ ಕೂಡಾ ಇದಕ್ಕಾಗಿಯೇ ಮಾಡಿದ್ದ ಹಿಡನ್ ಅಜೆಂಡಾ ಎಂದು ನನಗೆ ಮೊದಲೇ ಅನ್ನಿಸಿದೆ. ಬೆಕ್ಕಿಗೆ ಗಂಟೆ ಕಟ್ಟಬೇಕಾದ ವಿರೋಧ ಪಕ್ಷಗಳು ಬಲಹೀನವಾಗಿವೆ. ದುರ್ಬಲರಾದ ನಾವು, ಧರ್ಮಗ್ಲಾನಿಯ ಸಂದರ್ಭದಲ್ಲಿ ಕೃಷ್ಣ ಬರುವನೆಂದು ಕೈಕಟ್ಟಿ ಕುಳಿತಿದ್ದೇವೆ!

  2. sama vishamategala sangamavidu; adalita paksha halavaru paksha sadashyarannu serisikondu munnadeyuttide; aste satya.
    moovaru mukhya mantrigalu shasakariruvaga adarante halavu dy. mukhya mantrigalalagui karya nirvahisidavar sangama sthalavidu. yella paksha ghanategalannu kapaduva HONE ADALITAPAKSHADDE YIRUTEE ade “VIDHAN SOUDHA KARYA KALAPA VYAPTI> DHANYAVADA>
    Manjanatha Seetharamaiah
    Yestt6ierdaioty 6naot51t 07:d50h ·

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...