Homeಮುಖಪುಟಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ...

ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳಲ್ಲಿ ಬಂಡವಾಳ ಹಿಂಪಡೆತ ಮತ್ತು ಖಾಸಗೀಕರಣದಂತಹ ಯೋಜನೆಗಳಿಗೆ ಒಕ್ಕೂಟ ಸರ್ಕಾರ ಚಾಲನೆ ನೀಡಿದೆ. ಇದರ ಜೊತೆಯಲ್ಲೇ ಈಗ 4 ವರ್ಷಗಳ ಅವಧಿಗೆ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂಲಭೂತ ಸೌಲಭ್ಯಗಳ ಖಾಸಗೀಕರಣದ ಯೋಜನೆಯನ್ನು ಘೋಷಿಸಿದೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು. ಆಸ್ತಿಯನ್ನು ಖಾಸಗಿಯವರು ಮಾರಾಟ ಮಾಡುತ್ತಿಲ್ಲ. ಆಸ್ತಿಯ ಮಾಲೀಕತ್ವ ಸರ್ಕಾರದ ಬಳಿಯೇ ಇರುತ್ತದೆ. ಕಡ್ಡಾಯವಾಗಿ ಆಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎನ್ನಲಾಗಿದೆ.

ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿ ಭಾರತೀಯ ರೈಲ್ವೆ, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿಯನ್ನು ಮುಖ್ಯವಾಗಿ ಖಾಸಗೀಕರಣಗೊಳಿಸಲು ಆಯ್ದೆ ಮಾಡಿಕೊಳ್ಳಲಾಗಿದೆ.

ಇದರಲ್ಲಿ 15 ರೈಲ್ವೆ ಸ್ಟೇಡಿಯಂಗಳು, 25 ವಿಮಾನ ನಿಲ್ದಾಣಗಳು ಮತ್ತು 160 ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಳನ್ನು ಖಾಸಗೀಕರಣಗೊಳಿಸಲಾಗುವುದು. ಇದರ ಹೊರತಾಗಿ ರಸ್ತೆ, ವಿದ್ಯುತ್ ಪೂರೈಕೆ ವ್ಯವಸ್ಥೆ ಮತ್ತು ಗ್ಯಾಸ್ ಪೈಪ್ ಲೈನ್‌ಗಳನ್ನೂ ಖಾಸಗೀಕರಣಗೊಳಿಸಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೆ ಬಂದಾಗಿನಿಂದ ದೇಶದ ಆಸ್ತಿಯನ್ನು ಮಾರಾಟ ಮಾಡುವುದು ಮತ್ತು ಖಾಸಗೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಸಾಮಾಜಿಕ ಹೋರಾಟಗಾರರು ಬ್ಯಾಂಕ್ ನೌಕರರು, ರೈತರು, ವಿದ್ಯಾರ್ಥಿಗಳು ಈ ಬಗ್ಗೆ ದನಿ ಎತ್ತಿದರೂ ಸರ್ಕಾರ ಮಾತ್ರ ಖಾಸಗೀಕರಣಗೊಳಿಸುವ ಪ್ರಕ್ರಿಯೆ ಮುಂದುವರೆಸುತ್ತಿದೆ.

ಈಗಾಗಲೇ ಮಾರಾಟವಾಗಿರುವ ಸಂಸ್ಥೆಗಳು

ಏರ್ ಇಂಡಿಯಾ

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ(SCI)

ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ (CONCOR)

ಬೆಮೆಲ್

ಹಿಂದೂಸ್ತಾನ್ ಮಷೀನ್ ಟೂಲ್ಸ್ ಲಿಮಿಟೆಡ್ (HMT)

ನೀಲಾಚಲ ಇಸ್ಪತ್ ನಿಗಮ್ ಲಿಮಿಟೆಡ್ (NINS)

ಪವನ್ ಹನ್ಸ್ ಲಿಮಿಟೆಡ್

ಭಾರತ್ ಅರ್ಥ್ ಮೂವರ್‍ಸ್ ಲಿಮಿಟೆಡ್ (BEML)

ಆಸ್ಪತ್ರೆ ಸೇವೆಗಳ ಸಲಹಾ ಲಿಮಿಟೆಡ್ (HSCCL)

ಎಂಜಿನಿಯರಿಂಗ್ ಪ್ರಾಜೆಕ್ಟ್(ಇಂಡಿಯಾ)ಲಿ.

ಫೆರೋ ಸ್ಕ್ರಾಪ್ ನಿಗಮ್ ಲಿಮಿಟೆಡ್ (FSNL)

ಎಚ್‌ಎಲ್‌ಎಲ್ ಲೈಫ್ ಕೇರ್‌

ರಾಷ್ಟ್ರೀಯ ಯೋಜನೆ ನಿರ್ಮಾಣ ನಿಗಮ (NPCC)

ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್

ಸೆಂಟ್ರಲ್ ಎಲೆಕ್ಟ್ರಾನಿಕ್ ಲಿಮಿಟೆಡ್(CEL)

ಸಿಮೆಂಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ (CCIL) (ನಯಾಂಗಾವ್ ಘಟಕ)

ಬ್ರೀಡ್ಜ್ ಮತ್ತು ರೂಫ್ ಕಂ ಇಂಡಿಯಾ ಲಿಮಿಟೆಡ್

ಇಂಡಿಯನ್ ಮೆಡಿಸಿನ್ ಮತ್ತು ಫಾರ್ಮಸ್ಯೂಟಿಕಲ್ ಕಾರ್ಪೋರೇಷನ್ ಲಿಮಿಟೆಡ್ (IMPCL) ಸೇರಿ ಆರು ವಿಮಾನ ನಿಲ್ದಾಣ ಈಗಾಗಲೇ ಖಾಸಗೀಕರಣಗೊಂಡಿವೆ.

ಮುಂದೆ ಮಾರಲು ಸಿದ್ದಗೊಂಡಿರುವ ಸಂಸ್ಥೆಗಳು

150 ರೈಲುಗಳನ್ನು ಮತ್ತು 50 ರೈಲು ನಿಲ್ದಾಣಗಳನ್ನು ಸರ್ಕಾರವು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ.

ಭಾರತೀಯ ರೈಲ್ವೇ

ಲೈಫ್ ಇನ್ಸೂರೆನ್ಸ್ ಕಾರ್ಪೋರೇಷನ್ (LIC)

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್)

ಪಂಜಾಬ್ ಸಿಂಧ್ ಬ್ಯಾಂಕ್

ಬ್ಯಾಂಕ್ ಆಫ್ ಮಹಾರಾಷ್ಟ್ರ

ಇಂಡಿಯನ್ ಓವರ್ ಸೀಸ್ ಬ್ಯಾಂಕ್

ಕಲ್ಲಿದ್ದಲು ಗಣಿಗಾರಿಕೆ

ರೈಲ್ವೆ ಸ್ಟೇಡಿಯಂಗಳು

ವಿದ್ಯುತ್ ಪೂರೈಕೆ ವ್ಯವಸ್ಥೆ

BSNL… ಇವೆಲ್ಲವೂ ಮಾರಾಟದ ಸಾಲಿನಲ್ಲಿವೆ.

ಇನ್ನು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಮಾ.15 ಮತ್ತು16 ರಂದು ಪ್ರತಿಭಟನೆ ನಡೆಸಿದೆ.

ಒಕ್ಕೂಟ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ ಎನ್ನುವ ಬಿಜೆಪಿ, ಆ ಅವಧಿಯಲ್ಲಿ ಜನರ ಹಣದಿಂದ ನಿರ್ಮಿಸಿದ ಎಲ್ಲಾ ಆಸ್ತಿಯನ್ನು ತಮ್ಮ ಎರಡು-ಮೂರು ಉದ್ಯಮಿ ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದಿದ್ದಾರೆ.


ಇದನ್ನೂ ಓದಿ: ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಾರ್ವಜನಿಕ ಆಸ್ತಿಯ ಅನಾಹುತಕಾರಿ ಮಾರಾಟವನ್ನು ರಾಷ್ಟ್ರದ ಜನತೆ ಒಕ್ಕೊರಲಿನಿಂದ ವಿರೋಧಿಸಬೇಕಾದ ಸಂದರ್ಭದಲ್ಲಿ ಯಾರೂ ಮಾತಾಡುತ್ತಿಲ್ಲ! ಈ ವಿಕ್ಷಿಪ್ತ ಕಾಲದಲ್ಲಿ, ರಾಹುಲ್ ಧ್ವನಿ ಒಂಟಿಯಾಗಿದೆ! ಬ್ಯಾಂಕ್ ಗಳ ಒಟ್ಟುಗೂಡಿಸುವಿಕೆ ಕೂಡಾ ಇದಕ್ಕಾಗಿಯೇ ಮಾಡಿದ್ದ ಹಿಡನ್ ಅಜೆಂಡಾ ಎಂದು ನನಗೆ ಮೊದಲೇ ಅನ್ನಿಸಿದೆ. ಬೆಕ್ಕಿಗೆ ಗಂಟೆ ಕಟ್ಟಬೇಕಾದ ವಿರೋಧ ಪಕ್ಷಗಳು ಬಲಹೀನವಾಗಿವೆ. ದುರ್ಬಲರಾದ ನಾವು, ಧರ್ಮಗ್ಲಾನಿಯ ಸಂದರ್ಭದಲ್ಲಿ ಕೃಷ್ಣ ಬರುವನೆಂದು ಕೈಕಟ್ಟಿ ಕುಳಿತಿದ್ದೇವೆ!

  2. sama vishamategala sangamavidu; adalita paksha halavaru paksha sadashyarannu serisikondu munnadeyuttide; aste satya.
    moovaru mukhya mantrigalu shasakariruvaga adarante halavu dy. mukhya mantrigalalagui karya nirvahisidavar sangama sthalavidu. yella paksha ghanategalannu kapaduva HONE ADALITAPAKSHADDE YIRUTEE ade “VIDHAN SOUDHA KARYA KALAPA VYAPTI> DHANYAVADA>
    Manjanatha Seetharamaiah
    Yestt6ierdaioty 6naot51t 07:d50h ·

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...