Homeಮುಖಪುಟಪಂಜಾಬ್ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ; ‘ದೇಶಭಕ್ತರಿಗೆ ಘೋರ ಅವಮಾನ’ ಎಂದ ಸಿಎಂ ಮಾನ್

ಪಂಜಾಬ್ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ; ‘ದೇಶಭಕ್ತರಿಗೆ ಘೋರ ಅವಮಾನ’ ಎಂದ ಸಿಎಂ ಮಾನ್

- Advertisement -
- Advertisement -

ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸುವುದಕ್ಕೆ ಪಂಜಾಬ್ ರಾಜ್ಯದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಜನವರಿ 23 ರಿಂದ 31ರವರೆಗೆ ನಡೆಯುವ ‘ಭಾರತ ಪರ್ವ’ದಲ್ಲಿ ಪ್ರದರ್ಶಿಸಲು ಆಹ್ವಾನಿಸಿದೆ. ಆದರೆ, ಕೇಂದ್ರದ ಆಹ್ವಾನವನ್ನು ಒಪ್ಪದ ಮುಖ್ಯಮಂತ್ರಿ ಭಗವಂತ್ ಮಾನ್, ರಾಜ್ಯದ ಟ್ಯಾಬ್ಲೋವನ್ನು ‘ತಿರಸ್ಕೃತ ವರ್ಗ’ದಲ್ಲಿ ನಾವು ಪ್ರದರ್ಶಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ.

‘ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗದ ರಾಜ್ಯದ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವದಲ್ಲಿ ಪ್ರದರ್ಶಿಸಲಾಗುವುದಿಲ್ಲ’ ಎಂದಿದ್ದಾರೆ.

‘ಶಹೀದ್ ಭಗತ್ ಸಿಂಗ್, ಶಹೀದ್ ರಾಜಗುರು, ಶಹೀದ್ ಸುಖದೇವ್, ಲಾಲಾ ಲಜಪತ್ ರಾಯ್, ಶಹೀದ್ ಉಧಮ್ ಸಿಂಗ್, ಶಹೀದ್ ಕರ್ತಾರ್ ಸಿಂಗ್ ಸರಭಾ, ಮೈ ಭಾಗೋ, ಗಾದ್ರಿ ಬಾಬೆ ಸೇರಿದಂತೆ ಮಹಾನ್ ಹುತಾತ್ಮರ ಟ್ಯಾಬ್ಲೋವನ್ನು ಕೇಂದ್ರ ಒಪ್ಪಿಕೊಂಡಿಲ್ಲ. ಆ ಮೂಲಕ, ಕೇಂದ್ರ ಸರ್ಕಾರ ವೀರರ ಕೊಡುಗೆ ಮತ್ತು ತ್ಯಾಗದ ಬೆಲೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ. ಇದು ಈ ಮಹಾನ್ ವ್ಯಕ್ತಿಗಳಿಗೆ, ದೇಶಭಕ್ತರು ಮತ್ತು ರಾಷ್ಟ್ರೀಯ ನಾಯಕರುಗಳಿಗೆ ಮಾಡಿದ ಘೋರ ಅವಮಾನವಾಗಿದೆ’ ಎಂದು ಕಟು ಶಬ್ದಗಳಿಂದ ಕೇಂದ್ರವನ್ನು ಟೀಕಿಸಿದ್ದಾರೆ.

‘ದೇಶದ ಹುತಾತ್ಮರಿಗೆ ಬಿಜೆಪಿಯ ಎನ್ಒಸಿ ಅಗತ್ಯವಿಲ್ಲ; ನಾವು ನಮ್ಮ ತಂಡವನ್ನು ದೆಹಲಿಗೆ ಕಳುಹಿಸುವುದಿಲ್ಲ. ತಮ್ಮ ವೀರರನ್ನು ಪ್ರದರ್ಶಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಬೆಂಬಲದ ಅಗತ್ಯವಿಲ್ಲ. ಬದಲಿಗೆ ಅವರಿಗೆ ಗೌರವ ಸಲ್ಲಿಸಲು ನಾವು ಸಾಕಷ್ಟು ಸಮರ್ಥರಾಗಿದ್ದೇವೆ’ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕೇಂದ್ರವು ಪಂಜಾಬ್ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ‘ಅವರು ರಾಷ್ಟ್ರಗೀತೆಯಿಂದ ಪಂಜಾಬ್ ಪದವನ್ನು ತೆಗೆದುಹಾಕುತ್ತಾರೆ” ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನಿಲ್ ಜಾಖರ್, ‘ಮಾನ್ ಸಮಸ್ಯೆಯನ್ನು ರಾಜಕೀಯಗೊಳಿಸುತ್ತಿದ್ದಾರೆ. ಪಂಜಾಬ್‌ನ ಟ್ಯಾಬ್ಲೋ ಅದರ “ಕಚ್ಚಾ” ತಯಾರಿಕೆಯಿಂದಾಗಿ ಅಂತಿಮ ಪಟ್ಟಿಯಲ್ಲಿ ಇಲ್ಲ. ಆಮ್ ಆದ್ಮಿ ಪಕ್ಷದ ಸರ್ಕಾರವು ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಮಾನ್ ಅವರ ಫೋಟೋಗಳನ್ನು ಟ್ಯಾಬ್ಲೋನಲ್ಲಿ ಇರಿಸಲು ಬಯಸಿದೆ. ಪ್ರೋಟೋಕಾಲ್ ಪ್ರಕಾರ ಇದನ್ನು ಅನುಮತಿಸಲಾಗುವುದಿಲ್ಲ. ಟ್ಯಾಬ್ಲೋ ನಿರಾಕರಣೆಗೆ ಇದು ಒಂದು ಕಾರಣವಾಗಿದೆ’ ಎಂದು ಅವರು ಹೇಳಿದರು.

‘ಬಿಜೆಪಿ ಅಧ್ಯಕ್ಷರು ತಮ್ಮ ಆರೋಪವನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ತ್ಯಜಿಸುತ್ತೇನೆ’ ಎಂದು ಮುಖ್ಯಮಂತ್ರಿ ಮಾನ್ ತೀವ್ರ ವಾಗ್ದಾಳಿ ನಡೆಸಿದರು.

‘ಅರವಿಂದ್ ಕೇಜ್ರಿವಾಲ್ ಅಥವಾ ಭಗವಂತ್ ಮಾನ್ ಅವರ ಫೋಟೋಗಳನ್ನು ಟ್ಯಾಬ್ಲೋದಲ್ಲಿ ಹಾಕುವ ಬಗ್ಗೆ ಜಾಖರ್ ಪುರಾವೆ ನೀಡಬೇಕು. ಅವರು ನಮಗೆ ಹುಚ್ಚು ಎಂದು ಭಾವಿಸುತ್ತಾರೆಯೇ? ಜಾಖರ್ ಅದನ್ನು ಸಾಬೀತುಪಡಿಸಿದರೆ, ನಾನು ರಾಜಕೀಯವನ್ನು ತೊರೆಯುತ್ತೇನೆ. ಸಾಬೀತುಪಡಿಸಲು ಅವರು ವಿಫಲವಾದರೆ ಪಂಜಾಬ್ಗೆ ಪ್ರವೇಶಿಸಬಾರದು’ ಎಂದು ಸವಾಲು ಹಾಕಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯವರು ಈಗ ಯಾವ ಟ್ಯಾಬ್ಲೋವನ್ನು ತೋರಿಸಬೇಕು ಮತ್ತು ಯಾವುದನ್ನು ತೋರಿಸಬಾರದು ಎಂಬುದನ್ನು ಆಯ್ಕೆ ಮಾಡುತ್ತಾರೆ’ ಎಂದು ಮಾನ್ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...