Homeಮುಖಪುಟಪಂಜಾಬ್ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ; ‘ದೇಶಭಕ್ತರಿಗೆ ಘೋರ ಅವಮಾನ’ ಎಂದ ಸಿಎಂ ಮಾನ್

ಪಂಜಾಬ್ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ; ‘ದೇಶಭಕ್ತರಿಗೆ ಘೋರ ಅವಮಾನ’ ಎಂದ ಸಿಎಂ ಮಾನ್

- Advertisement -
- Advertisement -

ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸುವುದಕ್ಕೆ ಪಂಜಾಬ್ ರಾಜ್ಯದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಜನವರಿ 23 ರಿಂದ 31ರವರೆಗೆ ನಡೆಯುವ ‘ಭಾರತ ಪರ್ವ’ದಲ್ಲಿ ಪ್ರದರ್ಶಿಸಲು ಆಹ್ವಾನಿಸಿದೆ. ಆದರೆ, ಕೇಂದ್ರದ ಆಹ್ವಾನವನ್ನು ಒಪ್ಪದ ಮುಖ್ಯಮಂತ್ರಿ ಭಗವಂತ್ ಮಾನ್, ರಾಜ್ಯದ ಟ್ಯಾಬ್ಲೋವನ್ನು ‘ತಿರಸ್ಕೃತ ವರ್ಗ’ದಲ್ಲಿ ನಾವು ಪ್ರದರ್ಶಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ.

‘ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗದ ರಾಜ್ಯದ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವದಲ್ಲಿ ಪ್ರದರ್ಶಿಸಲಾಗುವುದಿಲ್ಲ’ ಎಂದಿದ್ದಾರೆ.

‘ಶಹೀದ್ ಭಗತ್ ಸಿಂಗ್, ಶಹೀದ್ ರಾಜಗುರು, ಶಹೀದ್ ಸುಖದೇವ್, ಲಾಲಾ ಲಜಪತ್ ರಾಯ್, ಶಹೀದ್ ಉಧಮ್ ಸಿಂಗ್, ಶಹೀದ್ ಕರ್ತಾರ್ ಸಿಂಗ್ ಸರಭಾ, ಮೈ ಭಾಗೋ, ಗಾದ್ರಿ ಬಾಬೆ ಸೇರಿದಂತೆ ಮಹಾನ್ ಹುತಾತ್ಮರ ಟ್ಯಾಬ್ಲೋವನ್ನು ಕೇಂದ್ರ ಒಪ್ಪಿಕೊಂಡಿಲ್ಲ. ಆ ಮೂಲಕ, ಕೇಂದ್ರ ಸರ್ಕಾರ ವೀರರ ಕೊಡುಗೆ ಮತ್ತು ತ್ಯಾಗದ ಬೆಲೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ. ಇದು ಈ ಮಹಾನ್ ವ್ಯಕ್ತಿಗಳಿಗೆ, ದೇಶಭಕ್ತರು ಮತ್ತು ರಾಷ್ಟ್ರೀಯ ನಾಯಕರುಗಳಿಗೆ ಮಾಡಿದ ಘೋರ ಅವಮಾನವಾಗಿದೆ’ ಎಂದು ಕಟು ಶಬ್ದಗಳಿಂದ ಕೇಂದ್ರವನ್ನು ಟೀಕಿಸಿದ್ದಾರೆ.

‘ದೇಶದ ಹುತಾತ್ಮರಿಗೆ ಬಿಜೆಪಿಯ ಎನ್ಒಸಿ ಅಗತ್ಯವಿಲ್ಲ; ನಾವು ನಮ್ಮ ತಂಡವನ್ನು ದೆಹಲಿಗೆ ಕಳುಹಿಸುವುದಿಲ್ಲ. ತಮ್ಮ ವೀರರನ್ನು ಪ್ರದರ್ಶಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಬೆಂಬಲದ ಅಗತ್ಯವಿಲ್ಲ. ಬದಲಿಗೆ ಅವರಿಗೆ ಗೌರವ ಸಲ್ಲಿಸಲು ನಾವು ಸಾಕಷ್ಟು ಸಮರ್ಥರಾಗಿದ್ದೇವೆ’ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕೇಂದ್ರವು ಪಂಜಾಬ್ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ‘ಅವರು ರಾಷ್ಟ್ರಗೀತೆಯಿಂದ ಪಂಜಾಬ್ ಪದವನ್ನು ತೆಗೆದುಹಾಕುತ್ತಾರೆ” ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನಿಲ್ ಜಾಖರ್, ‘ಮಾನ್ ಸಮಸ್ಯೆಯನ್ನು ರಾಜಕೀಯಗೊಳಿಸುತ್ತಿದ್ದಾರೆ. ಪಂಜಾಬ್‌ನ ಟ್ಯಾಬ್ಲೋ ಅದರ “ಕಚ್ಚಾ” ತಯಾರಿಕೆಯಿಂದಾಗಿ ಅಂತಿಮ ಪಟ್ಟಿಯಲ್ಲಿ ಇಲ್ಲ. ಆಮ್ ಆದ್ಮಿ ಪಕ್ಷದ ಸರ್ಕಾರವು ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಮಾನ್ ಅವರ ಫೋಟೋಗಳನ್ನು ಟ್ಯಾಬ್ಲೋನಲ್ಲಿ ಇರಿಸಲು ಬಯಸಿದೆ. ಪ್ರೋಟೋಕಾಲ್ ಪ್ರಕಾರ ಇದನ್ನು ಅನುಮತಿಸಲಾಗುವುದಿಲ್ಲ. ಟ್ಯಾಬ್ಲೋ ನಿರಾಕರಣೆಗೆ ಇದು ಒಂದು ಕಾರಣವಾಗಿದೆ’ ಎಂದು ಅವರು ಹೇಳಿದರು.

‘ಬಿಜೆಪಿ ಅಧ್ಯಕ್ಷರು ತಮ್ಮ ಆರೋಪವನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ತ್ಯಜಿಸುತ್ತೇನೆ’ ಎಂದು ಮುಖ್ಯಮಂತ್ರಿ ಮಾನ್ ತೀವ್ರ ವಾಗ್ದಾಳಿ ನಡೆಸಿದರು.

‘ಅರವಿಂದ್ ಕೇಜ್ರಿವಾಲ್ ಅಥವಾ ಭಗವಂತ್ ಮಾನ್ ಅವರ ಫೋಟೋಗಳನ್ನು ಟ್ಯಾಬ್ಲೋದಲ್ಲಿ ಹಾಕುವ ಬಗ್ಗೆ ಜಾಖರ್ ಪುರಾವೆ ನೀಡಬೇಕು. ಅವರು ನಮಗೆ ಹುಚ್ಚು ಎಂದು ಭಾವಿಸುತ್ತಾರೆಯೇ? ಜಾಖರ್ ಅದನ್ನು ಸಾಬೀತುಪಡಿಸಿದರೆ, ನಾನು ರಾಜಕೀಯವನ್ನು ತೊರೆಯುತ್ತೇನೆ. ಸಾಬೀತುಪಡಿಸಲು ಅವರು ವಿಫಲವಾದರೆ ಪಂಜಾಬ್ಗೆ ಪ್ರವೇಶಿಸಬಾರದು’ ಎಂದು ಸವಾಲು ಹಾಕಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯವರು ಈಗ ಯಾವ ಟ್ಯಾಬ್ಲೋವನ್ನು ತೋರಿಸಬೇಕು ಮತ್ತು ಯಾವುದನ್ನು ತೋರಿಸಬಾರದು ಎಂಬುದನ್ನು ಆಯ್ಕೆ ಮಾಡುತ್ತಾರೆ’ ಎಂದು ಮಾನ್ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...