Homeಮುಖಪುಟಪಂಜಾಬ್ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ; ‘ದೇಶಭಕ್ತರಿಗೆ ಘೋರ ಅವಮಾನ’ ಎಂದ ಸಿಎಂ ಮಾನ್

ಪಂಜಾಬ್ ಟ್ಯಾಬ್ಲೋ ತಿರಸ್ಕರಿಸಿದ ಕೇಂದ್ರ; ‘ದೇಶಭಕ್ತರಿಗೆ ಘೋರ ಅವಮಾನ’ ಎಂದ ಸಿಎಂ ಮಾನ್

- Advertisement -
- Advertisement -

ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸುವುದಕ್ಕೆ ಪಂಜಾಬ್ ರಾಜ್ಯದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಜನವರಿ 23 ರಿಂದ 31ರವರೆಗೆ ನಡೆಯುವ ‘ಭಾರತ ಪರ್ವ’ದಲ್ಲಿ ಪ್ರದರ್ಶಿಸಲು ಆಹ್ವಾನಿಸಿದೆ. ಆದರೆ, ಕೇಂದ್ರದ ಆಹ್ವಾನವನ್ನು ಒಪ್ಪದ ಮುಖ್ಯಮಂತ್ರಿ ಭಗವಂತ್ ಮಾನ್, ರಾಜ್ಯದ ಟ್ಯಾಬ್ಲೋವನ್ನು ‘ತಿರಸ್ಕೃತ ವರ್ಗ’ದಲ್ಲಿ ನಾವು ಪ್ರದರ್ಶಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ.

‘ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗದ ರಾಜ್ಯದ ಟ್ಯಾಬ್ಲೋವನ್ನು ಕೆಂಪು ಕೋಟೆಯ ಭಾರತ್ ಪರ್ವದಲ್ಲಿ ಪ್ರದರ್ಶಿಸಲಾಗುವುದಿಲ್ಲ’ ಎಂದಿದ್ದಾರೆ.

‘ಶಹೀದ್ ಭಗತ್ ಸಿಂಗ್, ಶಹೀದ್ ರಾಜಗುರು, ಶಹೀದ್ ಸುಖದೇವ್, ಲಾಲಾ ಲಜಪತ್ ರಾಯ್, ಶಹೀದ್ ಉಧಮ್ ಸಿಂಗ್, ಶಹೀದ್ ಕರ್ತಾರ್ ಸಿಂಗ್ ಸರಭಾ, ಮೈ ಭಾಗೋ, ಗಾದ್ರಿ ಬಾಬೆ ಸೇರಿದಂತೆ ಮಹಾನ್ ಹುತಾತ್ಮರ ಟ್ಯಾಬ್ಲೋವನ್ನು ಕೇಂದ್ರ ಒಪ್ಪಿಕೊಂಡಿಲ್ಲ. ಆ ಮೂಲಕ, ಕೇಂದ್ರ ಸರ್ಕಾರ ವೀರರ ಕೊಡುಗೆ ಮತ್ತು ತ್ಯಾಗದ ಬೆಲೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ. ಇದು ಈ ಮಹಾನ್ ವ್ಯಕ್ತಿಗಳಿಗೆ, ದೇಶಭಕ್ತರು ಮತ್ತು ರಾಷ್ಟ್ರೀಯ ನಾಯಕರುಗಳಿಗೆ ಮಾಡಿದ ಘೋರ ಅವಮಾನವಾಗಿದೆ’ ಎಂದು ಕಟು ಶಬ್ದಗಳಿಂದ ಕೇಂದ್ರವನ್ನು ಟೀಕಿಸಿದ್ದಾರೆ.

‘ದೇಶದ ಹುತಾತ್ಮರಿಗೆ ಬಿಜೆಪಿಯ ಎನ್ಒಸಿ ಅಗತ್ಯವಿಲ್ಲ; ನಾವು ನಮ್ಮ ತಂಡವನ್ನು ದೆಹಲಿಗೆ ಕಳುಹಿಸುವುದಿಲ್ಲ. ತಮ್ಮ ವೀರರನ್ನು ಪ್ರದರ್ಶಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಬೆಂಬಲದ ಅಗತ್ಯವಿಲ್ಲ. ಬದಲಿಗೆ ಅವರಿಗೆ ಗೌರವ ಸಲ್ಲಿಸಲು ನಾವು ಸಾಕಷ್ಟು ಸಮರ್ಥರಾಗಿದ್ದೇವೆ’ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಕೇಂದ್ರವು ಪಂಜಾಬ್ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಅವರು, ‘ಅವರು ರಾಷ್ಟ್ರಗೀತೆಯಿಂದ ಪಂಜಾಬ್ ಪದವನ್ನು ತೆಗೆದುಹಾಕುತ್ತಾರೆ” ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಪಂಜಾಬ್ ಬಿಜೆಪಿ ಮುಖ್ಯಸ್ಥ ಸುನಿಲ್ ಜಾಖರ್, ‘ಮಾನ್ ಸಮಸ್ಯೆಯನ್ನು ರಾಜಕೀಯಗೊಳಿಸುತ್ತಿದ್ದಾರೆ. ಪಂಜಾಬ್‌ನ ಟ್ಯಾಬ್ಲೋ ಅದರ “ಕಚ್ಚಾ” ತಯಾರಿಕೆಯಿಂದಾಗಿ ಅಂತಿಮ ಪಟ್ಟಿಯಲ್ಲಿ ಇಲ್ಲ. ಆಮ್ ಆದ್ಮಿ ಪಕ್ಷದ ಸರ್ಕಾರವು ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಮಾನ್ ಅವರ ಫೋಟೋಗಳನ್ನು ಟ್ಯಾಬ್ಲೋನಲ್ಲಿ ಇರಿಸಲು ಬಯಸಿದೆ. ಪ್ರೋಟೋಕಾಲ್ ಪ್ರಕಾರ ಇದನ್ನು ಅನುಮತಿಸಲಾಗುವುದಿಲ್ಲ. ಟ್ಯಾಬ್ಲೋ ನಿರಾಕರಣೆಗೆ ಇದು ಒಂದು ಕಾರಣವಾಗಿದೆ’ ಎಂದು ಅವರು ಹೇಳಿದರು.

‘ಬಿಜೆಪಿ ಅಧ್ಯಕ್ಷರು ತಮ್ಮ ಆರೋಪವನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ತ್ಯಜಿಸುತ್ತೇನೆ’ ಎಂದು ಮುಖ್ಯಮಂತ್ರಿ ಮಾನ್ ತೀವ್ರ ವಾಗ್ದಾಳಿ ನಡೆಸಿದರು.

‘ಅರವಿಂದ್ ಕೇಜ್ರಿವಾಲ್ ಅಥವಾ ಭಗವಂತ್ ಮಾನ್ ಅವರ ಫೋಟೋಗಳನ್ನು ಟ್ಯಾಬ್ಲೋದಲ್ಲಿ ಹಾಕುವ ಬಗ್ಗೆ ಜಾಖರ್ ಪುರಾವೆ ನೀಡಬೇಕು. ಅವರು ನಮಗೆ ಹುಚ್ಚು ಎಂದು ಭಾವಿಸುತ್ತಾರೆಯೇ? ಜಾಖರ್ ಅದನ್ನು ಸಾಬೀತುಪಡಿಸಿದರೆ, ನಾನು ರಾಜಕೀಯವನ್ನು ತೊರೆಯುತ್ತೇನೆ. ಸಾಬೀತುಪಡಿಸಲು ಅವರು ವಿಫಲವಾದರೆ ಪಂಜಾಬ್ಗೆ ಪ್ರವೇಶಿಸಬಾರದು’ ಎಂದು ಸವಾಲು ಹಾಕಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯವರು ಈಗ ಯಾವ ಟ್ಯಾಬ್ಲೋವನ್ನು ತೋರಿಸಬೇಕು ಮತ್ತು ಯಾವುದನ್ನು ತೋರಿಸಬಾರದು ಎಂಬುದನ್ನು ಆಯ್ಕೆ ಮಾಡುತ್ತಾರೆ’ ಎಂದು ಮಾನ್ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...