Homeಮುಖಪುಟಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ...

ಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ ರೂ. ಬರ ಪರಿಹಾರ ಘೋಷಣೆ

- Advertisement -
- Advertisement -

ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರಕಾರ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನಡುವಿನ ಜಟಾಪಟಿಯಲ್ಲಿ ಕೊನೆಗೂ ರಾಜ್ಯ ಸರಕಾರಕ್ಕೆ ಗೆಲುವಾಗಿದೆ. ಇದೀಗ 3,454 ಕೋಟಿ ರೂ. ಬರ ಪರಿಹಾರವನ್ನು ಕೇಂದ್ರ ಸರಕಾರ ರಾಜ್ಯಕ್ಕೆ ಬಿಡುಗಡೆ ಮಾಡಿದೆ.

ಕರ್ನಾಟಕಕ್ಕೆ ಕೇಂದ್ರ ಸರಕಾರ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ.

ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಸೇರಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು. ಈ ಪ್ರತಿಭಟನೆ ದೇಶದ ಗಮನವನ್ನು ಸೆಳೆದಿತ್ತು.

ಈ ಮಧ್ಯೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಯಾವುದೇ ಪರಿಹಾರ ಬಿಡುಗಡೆಗೆ ಬಾಕಿಯಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್‌ ಹೇಳಿದ್ದರು, ನಾನು ರಾಜ್ಯದ ಎಂಪಿಯಾಗಿದ್ದು, ನನಗೆ‌ ಜವಾಬ್ದಾರಿ ಇದೆ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್‌ ಸರಕಾರ ಸಚಿವರು ಹೇಳಿದ್ದ ಸುಳ್ಳನ್ನು ದಾಖಲೆ ಸಹಿತ ಬಯಲು ಮಾಡಿತ್ತು. ಇದಲ್ಲದೆ ಸುಪ್ರೀಂಕೋರ್ಟ್‌ನಲ್ಲಿ ಧಾವೆಯನ್ನು ಹೂಡಿತ್ತು.

ಕೇಂದ್ರದಿಂದ ರಾಜ್ಯಕ್ಕೆ ಬರ ಬೇಕಿದ್ದ ಬರ ಪರಿಹಾರದ 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನಕ್ಕೆ ಕೋರಿ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಈ ಕುರಿತ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅನುಮತಿ ನೀಡಿದೆ ಎಂದು ಕೇಂದ್ರ ಸರಕಾರವು ಇದೇ ವೇಳೆ ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿತ್ತು. ಸಮಸ್ಯೆಯನ್ನು ಒಂದು ವಾರದೊಳಗೆ ಪರಿಹರಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರಕ್ಕೆ ಸೂಚಿಸಿತ್ತು.

ಐದು ತಿಂಗಳು ಕಾದರೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಹಾಗಾಗಿ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಸರ್ಕಾರದ ವಿರುದ್ದ ಸಂವಿಧಾನದ ವಿಧಿ 32ರಡಿ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ನಮಗೆ ಸಿಗಬೇಕಾದ ಪರಿಹಾರ ಸಿಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಬರ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ ಪರಿಹಾರವನ್ನು ಬಿಡುಗಡೆ ಮಾಡಿರಲಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು ಸಿಎಂ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಆದರೆ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದೀಗ ಸುಪ್ರೀಂ ನಿರ್ದೇಶನದ ಬಳಿಕ ಕೇಂದ್ರ ಸರಕಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದೆ.

ಇದನ್ನು ಓದಿ; ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....