Homeಮುಖಪುಟಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ...

ಕೇಂದ್ರದ ಜೊತೆ ಜಟಾಪಟಿ ನಡೆಸಿ ರಾಜ್ಯಕ್ಕೆ ಬರ ಪರಿಹಾರ ತಂದ ಸಿದ್ದರಾಮಯ್ಯ ಸರಕಾರ: 3,454 ಕೋಟಿ ರೂ. ಬರ ಪರಿಹಾರ ಘೋಷಣೆ

- Advertisement -
- Advertisement -

ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರಕಾರ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ನಡುವಿನ ಜಟಾಪಟಿಯಲ್ಲಿ ಕೊನೆಗೂ ರಾಜ್ಯ ಸರಕಾರಕ್ಕೆ ಗೆಲುವಾಗಿದೆ. ಇದೀಗ 3,454 ಕೋಟಿ ರೂ. ಬರ ಪರಿಹಾರವನ್ನು ಕೇಂದ್ರ ಸರಕಾರ ರಾಜ್ಯಕ್ಕೆ ಬಿಡುಗಡೆ ಮಾಡಿದೆ.

ಕರ್ನಾಟಕಕ್ಕೆ ಕೇಂದ್ರ ಸರಕಾರ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ.

ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಸೇರಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು. ಈ ಪ್ರತಿಭಟನೆ ದೇಶದ ಗಮನವನ್ನು ಸೆಳೆದಿತ್ತು.

ಈ ಮಧ್ಯೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಯಾವುದೇ ಪರಿಹಾರ ಬಿಡುಗಡೆಗೆ ಬಾಕಿಯಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್‌ ಹೇಳಿದ್ದರು, ನಾನು ರಾಜ್ಯದ ಎಂಪಿಯಾಗಿದ್ದು, ನನಗೆ‌ ಜವಾಬ್ದಾರಿ ಇದೆ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್‌ ಸರಕಾರ ಸಚಿವರು ಹೇಳಿದ್ದ ಸುಳ್ಳನ್ನು ದಾಖಲೆ ಸಹಿತ ಬಯಲು ಮಾಡಿತ್ತು. ಇದಲ್ಲದೆ ಸುಪ್ರೀಂಕೋರ್ಟ್‌ನಲ್ಲಿ ಧಾವೆಯನ್ನು ಹೂಡಿತ್ತು.

ಕೇಂದ್ರದಿಂದ ರಾಜ್ಯಕ್ಕೆ ಬರ ಬೇಕಿದ್ದ ಬರ ಪರಿಹಾರದ 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನಕ್ಕೆ ಕೋರಿ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಈ ಕುರಿತ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅನುಮತಿ ನೀಡಿದೆ ಎಂದು ಕೇಂದ್ರ ಸರಕಾರವು ಇದೇ ವೇಳೆ ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿತ್ತು. ಸಮಸ್ಯೆಯನ್ನು ಒಂದು ವಾರದೊಳಗೆ ಪರಿಹರಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರಕ್ಕೆ ಸೂಚಿಸಿತ್ತು.

ಐದು ತಿಂಗಳು ಕಾದರೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಹಾಗಾಗಿ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಸರ್ಕಾರದ ವಿರುದ್ದ ಸಂವಿಧಾನದ ವಿಧಿ 32ರಡಿ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ನಮಗೆ ಸಿಗಬೇಕಾದ ಪರಿಹಾರ ಸಿಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಬರ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ ಪರಿಹಾರವನ್ನು ಬಿಡುಗಡೆ ಮಾಡಿರಲಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು ಸಿಎಂ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಆದರೆ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದೀಗ ಸುಪ್ರೀಂ ನಿರ್ದೇಶನದ ಬಳಿಕ ಕೇಂದ್ರ ಸರಕಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದೆ.

ಇದನ್ನು ಓದಿ; ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆಗೆ ಕಾರಣವಾದ ನೀಲೇಶ್ ಕುಂಭಾನಿ ಕಾಂಗ್ರೆಸ್‌ನಿಂದ ಉಚ್ಛಾಟನೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿಗಿತ್ತಾ ಬಿಜೆಪಿ ಜೊತೆ ಸಂಬಂಧ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...