Homeಮುಖಪುಟಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ CAA ಕಾನೂನಿನ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಲಕ್ಷಾಂತರ ಜನರು CAA ವಿರುದ್ಧದ ಹೋರಾಟದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ನ್ಯಾಯಾಲಯಗಳಲ್ಲಿ ಹೊಸ ಸಿಟಿಜೆನ್‌ಶಿಪ್ ಕಾಯ್ದೆ ವಿರುದ್ಧ ಅರ್ಜಿಗಳು ದಾಖಲಾಗಿದ್ದವು. ಇವೆಲ್ಲದರ ನಡುವೆಯೂ ಸುಪ್ರೀಂ ಕೋರ್ಟ್‌ ಸಿಟಿಜೆನ್‌ಶಿಪ್‌ ಕಾಯ್ದೆಗೆ ತಡೆ ನೀಡಲು ನಿರಾಕರಿಸಿತ್ತು. ನಂತರ ಕೋವಿಡ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೇ ಸಿಎಎ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಮೊದಲ ಭಾಗವಾಗಿ ಗುಜರಾಥ್, ರಾಜಸ್ಥಾನ್, ಹರಿಯಾಣ, ಪಂಜಾಬ್, ಛತ್ತಿಸ್‌ಗಡ್‌ನಲ್ಲಿರುವ ಅಪಘಾನ್ ಬಾಂಗ್ಲಾದೇಶ್, ಪಾಕಿಸ್ತಾನ ಮೂಲದ ಮುಸ್ಲೀಮೇತರರಿಗೆ ದೇಶದ ಪೌರತ್ವಕ್ಕೆ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಿದೆ. ಆ ಸಂಬಂಧ ಸದ್ಯ ಕೇಂದ್ರ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರದ ಅಧಿಸೂಚನೆಯನ್ನು ಪ್ರಶ್ನಿಸಿ ಅನೇಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಿಟಿಜನ್‌ ಶಿಫ್‌ಗೆ ಸಂಬಂಧಿಸಿ ಇಂಡಿಯನ್ ಯುನಿಯನ್ ಮುಸ್ಲೀಂ ಲೀಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತು. ಅರ್ಜಿದಾರರ ಪರವಾಗಿ ಕಪಿಲ್ ಸಿಬಾಲ್ ನ್ಯಾಯಾಲಯದಲ್ಲಿ ಹಾಜರಿದ್ದರು. ಕೇಂದ್ರ ಸರ್ಕಾರ ಈ ಅಧಿಸೂಚನೆ CAA ಗೆ  ಸಂಬಂಧಿಸಿದ್ದಲ್ಲ. ಕೇಂದ್ರ ಸರ್ಕಾರದ ಅಂತರ್ಗತ ಅಧಿಕಾರವನ್ನು ಬಳಸಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಿಎಎ ಮತ್ತು ಅಧಿಸೂಚನೆಗೆ ಸಂಬಂಧ ಕಲ್ಪಿಸಿ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಿನ್ನೆ ಸೋಮವಾರ ಅಫಿಡೆವಿಟ್ ಸಲ್ಲಿಸಿತ್ತು. ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲ ಕಪಿಲ್ ಸಿಬಾಲ್ ತಮಗೆ ಉತ್ತರಿಸಲು 2 ವಾರದ ಕಾಲಾವಕಾಶವನ್ನು ಕೇಳಿದ್ದಾರೆ. ಅರ್ಜಿದಾರರ ಮನವಿಗೆ ಸ್ಪಂದಿಸಿದ ಕೋರ್ಟ್ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಜಸ್ಟಿಸ್ ವಿ. ರಾಮಸುಬ್ರಮಣ್ಯನ್ ಅವರ ಪೀಠವು 2 ವಾರಗಳ ನಂತರ ಕೇಂದ್ರ ಸರ್ಕಾರದ ಪೌರತ್ವ ನೊಂದಣಿ ಅಧಿಸೂಚನೆಯ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಲಿದೆ.

ಇದನ್ನೂ ಓದಿ : ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಇದಕ್ಕು ಮೊದಲು ಕೇಂದ್ರ ಸರ್ಕಾರವು 2004, 2005, 2006, 2016, 2018 ರಲ್ಲಿ ಇಂತಹುದೇ ಅಧಿಸೂಚನೆಯನ್ನು ದೇಶದಲ್ಲಿ ಸರ್ಕಾರವು ಹೊರಡಿಸಿದೆ. 1955 ರ ಸಿಟಿಜನ್‌ಶಿಪ್ ಕಾಯ್ದೆಯ ನಿಯಮಗಳಡಿಯಲ್ಲಿಯೇ ಈ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಪೌರತ್ವದ ಅರ್ಹತೆಯ ಮಾನದಂಡಗಳನ್ನು ಸಡಿಸಲಾಗಿಲ್ಲ. ಹೊಸ ನಿಯಮಗಳನ್ನು ಇನ್ನೂ ಜಾರಿಗೆ ತಂದಿಲ್ಲ ಎಂದು ಹೇಳಿದೆ.

ಕೇಂದ್ರ ಸರ್ಕಾರವು ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಸಿಎಎ ವಿರುದ್ಧದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸಿಎಎ ನಿಯಮಾವಳಿಗಳು ಇದುವರೆಗೆ ರೂಪಿಸಲಾಗಿಲ್ಲ. ಹಾಗಾಗಿ ಸಿಎಎ ಜಾರಿ ಸದ್ಯಕ್ಕಿಲ್ಲವೆಂದು ಹೇಳಿದೆ. ಆದರೆ ಸದ್ದಿಲ್ಲದೇ ಸರ್ಕಾರ ಪೌರತ್ವ ನೀಡಲು ಅರ್ಜಿ ಕರೆದಿದೆ ಎಂದು ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಇಂಡಿಯನ್ ಯೂನಿಯನ್ ಆಫ್ ಮುಸ್ಲೀಂ ಲೀಗ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸದ್ಯ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸಲಿದೆ.

ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಸಿಎಎ, ಎನ್‌ಆರ್‌ಸಿ ಯೋಜನೆಗಳ ಜಾರಿ ಇದುವರೆಗೆ ಆರಂಭವಾಗಿಲ್ಲ ಎಂದು ಹೇಳಿಕೊಂಡು ಬರುತ್ತಿದೆ. ಆದರೆ ಸರ್ಕಾರ ಹಿಂಬಾಗಿಲ ಮೂಲಕ ಸದ್ದಿಲ್ಲದೇ  CAA ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ದೇಶದ ಅನೇಕ ಸಂಘಟನೆಗಳು ಮತ್ತು ಹೋರಾಟಗಾರರು ದೂರುತ್ತಿದ್ದಾರೆ. ಕೇಂದ್ರ ಸರ್ಕಾರ ಸಿಎಎ ಜಾರಿಗೊಳಿಸುತ್ತಿದೆಯೋ ಅಥವಾ ಇಲ್ಲವೋ ಎಂಬುದು ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾದಾಗಲೇ ತಿಳಿದು ಬರಲಿದೆ.


ಇದನ್ನೂ ಓದಿ :ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...