Homeಮುಖಪುಟಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ CAA ಕಾನೂನಿನ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಲಕ್ಷಾಂತರ ಜನರು CAA ವಿರುದ್ಧದ ಹೋರಾಟದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ನ್ಯಾಯಾಲಯಗಳಲ್ಲಿ ಹೊಸ ಸಿಟಿಜೆನ್‌ಶಿಪ್ ಕಾಯ್ದೆ ವಿರುದ್ಧ ಅರ್ಜಿಗಳು ದಾಖಲಾಗಿದ್ದವು. ಇವೆಲ್ಲದರ ನಡುವೆಯೂ ಸುಪ್ರೀಂ ಕೋರ್ಟ್‌ ಸಿಟಿಜೆನ್‌ಶಿಪ್‌ ಕಾಯ್ದೆಗೆ ತಡೆ ನೀಡಲು ನಿರಾಕರಿಸಿತ್ತು. ನಂತರ ಕೋವಿಡ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೇ ಸಿಎಎ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಮೊದಲ ಭಾಗವಾಗಿ ಗುಜರಾಥ್, ರಾಜಸ್ಥಾನ್, ಹರಿಯಾಣ, ಪಂಜಾಬ್, ಛತ್ತಿಸ್‌ಗಡ್‌ನಲ್ಲಿರುವ ಅಪಘಾನ್ ಬಾಂಗ್ಲಾದೇಶ್, ಪಾಕಿಸ್ತಾನ ಮೂಲದ ಮುಸ್ಲೀಮೇತರರಿಗೆ ದೇಶದ ಪೌರತ್ವಕ್ಕೆ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಿದೆ. ಆ ಸಂಬಂಧ ಸದ್ಯ ಕೇಂದ್ರ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರದ ಅಧಿಸೂಚನೆಯನ್ನು ಪ್ರಶ್ನಿಸಿ ಅನೇಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಿಟಿಜನ್‌ ಶಿಫ್‌ಗೆ ಸಂಬಂಧಿಸಿ ಇಂಡಿಯನ್ ಯುನಿಯನ್ ಮುಸ್ಲೀಂ ಲೀಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತು. ಅರ್ಜಿದಾರರ ಪರವಾಗಿ ಕಪಿಲ್ ಸಿಬಾಲ್ ನ್ಯಾಯಾಲಯದಲ್ಲಿ ಹಾಜರಿದ್ದರು. ಕೇಂದ್ರ ಸರ್ಕಾರ ಈ ಅಧಿಸೂಚನೆ CAA ಗೆ  ಸಂಬಂಧಿಸಿದ್ದಲ್ಲ. ಕೇಂದ್ರ ಸರ್ಕಾರದ ಅಂತರ್ಗತ ಅಧಿಕಾರವನ್ನು ಬಳಸಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಿಎಎ ಮತ್ತು ಅಧಿಸೂಚನೆಗೆ ಸಂಬಂಧ ಕಲ್ಪಿಸಿ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಿನ್ನೆ ಸೋಮವಾರ ಅಫಿಡೆವಿಟ್ ಸಲ್ಲಿಸಿತ್ತು. ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲ ಕಪಿಲ್ ಸಿಬಾಲ್ ತಮಗೆ ಉತ್ತರಿಸಲು 2 ವಾರದ ಕಾಲಾವಕಾಶವನ್ನು ಕೇಳಿದ್ದಾರೆ. ಅರ್ಜಿದಾರರ ಮನವಿಗೆ ಸ್ಪಂದಿಸಿದ ಕೋರ್ಟ್ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಜಸ್ಟಿಸ್ ವಿ. ರಾಮಸುಬ್ರಮಣ್ಯನ್ ಅವರ ಪೀಠವು 2 ವಾರಗಳ ನಂತರ ಕೇಂದ್ರ ಸರ್ಕಾರದ ಪೌರತ್ವ ನೊಂದಣಿ ಅಧಿಸೂಚನೆಯ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಲಿದೆ.

ಇದನ್ನೂ ಓದಿ : ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಇದಕ್ಕು ಮೊದಲು ಕೇಂದ್ರ ಸರ್ಕಾರವು 2004, 2005, 2006, 2016, 2018 ರಲ್ಲಿ ಇಂತಹುದೇ ಅಧಿಸೂಚನೆಯನ್ನು ದೇಶದಲ್ಲಿ ಸರ್ಕಾರವು ಹೊರಡಿಸಿದೆ. 1955 ರ ಸಿಟಿಜನ್‌ಶಿಪ್ ಕಾಯ್ದೆಯ ನಿಯಮಗಳಡಿಯಲ್ಲಿಯೇ ಈ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಪೌರತ್ವದ ಅರ್ಹತೆಯ ಮಾನದಂಡಗಳನ್ನು ಸಡಿಸಲಾಗಿಲ್ಲ. ಹೊಸ ನಿಯಮಗಳನ್ನು ಇನ್ನೂ ಜಾರಿಗೆ ತಂದಿಲ್ಲ ಎಂದು ಹೇಳಿದೆ.

ಕೇಂದ್ರ ಸರ್ಕಾರವು ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಸಿಎಎ ವಿರುದ್ಧದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸಿಎಎ ನಿಯಮಾವಳಿಗಳು ಇದುವರೆಗೆ ರೂಪಿಸಲಾಗಿಲ್ಲ. ಹಾಗಾಗಿ ಸಿಎಎ ಜಾರಿ ಸದ್ಯಕ್ಕಿಲ್ಲವೆಂದು ಹೇಳಿದೆ. ಆದರೆ ಸದ್ದಿಲ್ಲದೇ ಸರ್ಕಾರ ಪೌರತ್ವ ನೀಡಲು ಅರ್ಜಿ ಕರೆದಿದೆ ಎಂದು ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಇಂಡಿಯನ್ ಯೂನಿಯನ್ ಆಫ್ ಮುಸ್ಲೀಂ ಲೀಗ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸದ್ಯ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸಲಿದೆ.

ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಸಿಎಎ, ಎನ್‌ಆರ್‌ಸಿ ಯೋಜನೆಗಳ ಜಾರಿ ಇದುವರೆಗೆ ಆರಂಭವಾಗಿಲ್ಲ ಎಂದು ಹೇಳಿಕೊಂಡು ಬರುತ್ತಿದೆ. ಆದರೆ ಸರ್ಕಾರ ಹಿಂಬಾಗಿಲ ಮೂಲಕ ಸದ್ದಿಲ್ಲದೇ  CAA ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ದೇಶದ ಅನೇಕ ಸಂಘಟನೆಗಳು ಮತ್ತು ಹೋರಾಟಗಾರರು ದೂರುತ್ತಿದ್ದಾರೆ. ಕೇಂದ್ರ ಸರ್ಕಾರ ಸಿಎಎ ಜಾರಿಗೊಳಿಸುತ್ತಿದೆಯೋ ಅಥವಾ ಇಲ್ಲವೋ ಎಂಬುದು ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾದಾಗಲೇ ತಿಳಿದು ಬರಲಿದೆ.


ಇದನ್ನೂ ಓದಿ :ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...