Homeಮುಖಪುಟಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

- Advertisement -
- Advertisement -

ಕಳೆದ ಆಗಸ್ಟ್‌ನಲ್ಲಿ ಲೋಕಸಭೆಯಲ್ಲಿ ಮಂಡಿಸಲಾಗಿದ್ದ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಕೆಲ ತಿದ್ದುಪಡಿಗಳನ್ನು ಮಾಡಿ ಮತ್ತೆ ಮಂಡಿಸುವುದಾಗಿ ತಿಳಿಸಿದೆ.

ಈ ವಿಧೇಯಕಗಳನ್ನು ಆಗಸ್ಟ್ 18 ರಂದು ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪರಿಗಣನೆಗೆ ಕಳುಹಿಸಲಾಗಿತ್ತು. ಸಂಸದೀಯ ಸಮಿತಿಯ ಕೆಲವು ಶಿಫಾರಸುಗಳನ್ನು ಸೇರಿಸುವ ಸಲುವಾಗಿ ಮಸೂದೆಗಳನ್ನು ಹಿಂಪಡೆಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಗೆ ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ ಮಸೂದೆ, ಭಾರತೀಯ ಸಾಕ್ಷಿ ಅಧಿನಿಯಮ್ ಮಸೂದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆಗಳನ್ನು ಹಿಂಪಡೆಯಲಾಗಿದೆ. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ, ಭಾರತೀಯ ಸಾಕ್ಷ್ಯ ಕಾಯ್ದೆ ಮತ್ತು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅನ್ನು ಬದಲಿಸುವ ಉದ್ದೇಶಿ ಹೊಂದಿವೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಬಿಜೆಪಿ ಸಂಸದ ಬ್ರಿಜ್ ಲಾಲ್ ನೇತೃತ್ವದ ಸಂಸದೀಯ ಸಮಿತಿಯು, ಸರ್ಕಾರವು ಮೂರು ಮಸೂದೆಗಳಲ್ಲಿ ‘ಮಾನಸಿಕ ಕಾಯಿಲೆ’ ಬದಲಿಗೆ ‘ಅಸ್ವಸ್ಥ ಮನಸ್ಸು’ ಎಂಬ ಪದವನ್ನು ಮರಳಿ ತರಬೇಕು ಎಂದು ಹೇಳಿದೆ. ಈ ಸಂಹಿತೆಯಲ್ಲಿನ ‘ಮಾನಸಿಕ ಕಾಯಿಲೆ’ ಎಂಬ ಪದವು ಎಲ್ಲಿ ಸಂಭವಿಸಿದರೂ ಅದನ್ನು ‘ಅಸ್ವಸ್ಥ ಮನಸ್ಸು’ ಎಂದು ಬದಲಾಯಿಸಬಹುದು ಎಂದು ಸಮಿತಿಯು ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ.

ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ ಮತ್ತು ಸೆಕ್ಸ್‌ ವರ್ಕ್‌ ಅನ್ನು ಸೇರಿಸುವಂತೆ ಸಂಸದೀಯ ಸಮಿತಿ ಸಲಹೆ ನೀಡಿತ್ತು. ಆದರೆ, ಅದನ್ನು ಸರ್ಕಾರ ತಿರಸ್ಕರಿಸಿದೆ.

ಹೊಸ ಮಸೂದೆಗಳು ಮತ್ತು ಅವು ಭಾರತದ ನ್ಯಾಯ ವ್ಯವಸ್ಥೆಯಲ್ಲಿ ತರುವ ಬದಲಾವಣೆಗಳ ಬಗ್ಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ದಿ ವೈರ್‌ಗೆ ಬರೆದ ಲೇಖನದಲ್ಲಿ ವಕೀಲ ಮತ್ತು ಕಾನೂನು ಶಿಕ್ಷಣ ತಜ್ಞ ಜಿ. ಮೋಹನ್ ಗೋಪಾಲ್ ಅವರು, “2023 ಆಗಸ್ಟ್‌ನಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮೂರು ಮಸೂದೆಗಳಲ್ಲಿ ಕ್ರಿಮಿನಲ್ ಕಾನೂನಿಗೆ ಹನ್ನೆರಡು ಬದಲಾವಣೆಗಳು ತರುವುದು ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ. ಭಿನ್ನಾಭಿಪ್ರಾಯ ಮತ್ತು ವಿರೋಧವನ್ನು ಇದು ಹತ್ತಿಕ್ಕಲಿದೆ. ಸಾರ್ವಜನಿಕ ಭಾಷಣಕ್ಕೆ ಅಡ್ಡಿಯಾಗಲಿದೆ. ಸಂಘರ್ಷದ ಸುದ್ದಿಗಳನ್ನು ಜನರಿಗೆ ತಿಳಿಸುವ ಸುದ್ದಿ ವಾಹಿನಿಗಳ ಉಸಿರುಗಟ್ಟಿಸಲಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...