Homeಮುಖಪುಟಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

- Advertisement -
- Advertisement -

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ (ಜು.2) ಪರಿಷ್ಕೃತ ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಪುನರಾರಂಭಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ.

ಹೊಸ ಮಾರ್ಗಸೂಚಿಗಳು ರಾಜ್ಯ ಸರ್ಕಾರಗಳಿಗೆ ಪರವಾನಗಿಗಳನ್ನು ನೀಡಲು ಮತ್ತು ಅಗ್ರಿಗೇಟರ್‌ಗಳನ್ನು ನಿಯಂತ್ರಿಸಲು ಒಂದು ಚೌಕಟ್ಟನ್ನು ಒದಗಿಸುತ್ತದೆ. ಬಳಕೆದಾರರ ಸುರಕ್ಷತೆ ಮತ್ತು ಭದ್ರತೆ ಹಾಗೂ ಚಾಲಕನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಹಗುರವಾದ ನಿಯಂತ್ರಣ ವ್ಯವಸ್ಥೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

‘ಸಾರಿಗೆ ಅಲ್ಲದ ಮೋಟರ್‌ ಸೈಕಲ್‌ಗಳನ್ನು ಅಗ್ರಿಗೇಟರ್‌ಗಳ ಮೂಲಕ ಒಗ್ಗೂಡಿಸುವಿಕೆ’ ಎಂಬ ಶೀರ್ಷಿಕೆಯ ಮಾರ್ಗಸೂಚಿಯ ಷರತ್ತು 23ರಲ್ಲಿ ಆನ್‌ಲೈನ್ ಅಗ್ರಿಗೇಟರ್‌ಗಳು ದ್ವಿಚಕ್ರ ವಾಹನಗಳನ್ನು ಬೈಕ್ ಟ್ಯಾಕ್ಸಿಗಳಾಗಿ ಬಳಸಲು ಅನುವು ಮಾಡಿಕೊಡುವ ಬಗ್ಗೆ ಹೇಳಲಾಗಿದೆ.

ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು. ಇದು ಸಂಚಾರ ದಟ್ಟಣೆ ಮತ್ತು ಮಾಲಿನ್ಯ ಕಡಿಮೆ ಮಾಡಲು ನೆರವಾಗುತ್ತದೆ. ಜನರಿಗೆ ಕೈಗೆಟಕುವ ಪ್ರಯಾಣಕ್ಕೆ ಅವಕಾಶ ನೀಡುತ್ತದೆ. ಹೈಪರ್​ಲೋಕಲ್​ ಡೆಲಿವರಿ ಹಾಗೂ ಜೀವನೋಪಾಯಕ್ಕೂ ದಾರಿಯಾಗುತ್ತದೆ ಎಂದು ಮಾರ್ಗಸೂಚಿ ಹೇಳಿದೆ.

ಸಾರಿಗೆಯು ಸಮವರ್ತಿ ಪಟ್ಟಿಯಲ್ಲಿ ಬರುವ ವಿಷಯವಾಗಿದ್ದರೂ, ರಾಜ್ಯ ಸರ್ಕಾರವು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ, 2019ರ ಸೆಕ್ಷನ್ 36ರ ಪ್ರಕಾರ, ಅಗ್ರಿಗೇಟರ್‌ಗೆ ಪರವಾನಗಿ ನೀಡುವಾಗ ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಬಹುದು.

ಕರ್ನಾಟಕ ಸರ್ಕಾರದ ರಾಜ್ಯದಲ್ಲಿ ಬೈಕ್ಸ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿದೆ. ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನೆಲೆ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿ ಮಾರ್ಗಸೂಚಿ ಹೊರಡಿಸಿದೆ.

ಅತಿದೊಡ್ಡ ಬೈಕ್ ಟ್ಯಾಕ್ಸಿ ಆಪರೇಟರ್ ರ‍್ಯಾಪಿಡೋ ಕೇಂದ್ರದ ಪರಿಷ್ಕೃತ ಮಾರ್ಗಸೂಚಿಗಳನ್ನು ಸ್ವಾಗತಿಸಿದ್ದು, ಇದೊಂದು ‘ಮೈಲಿಗಲ್ಲು’ ಎಂದು ಕರೆದಿದೆ. ಬೈಕ್ ಟ್ಯಾಕ್ಸಿ ನಿಷೇಧ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ಓಲಾ, ಊಬರ್, ರ‍್ಯಾಪಿಡೋ ಈಗಾಗಲೇ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದೆ.

“ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು ಎಂಬ ಕೇಂದ್ರದ ಮಾರ್ಗಸೂಚಿಯು, ಲಕ್ಷಾಂತರ ಜನರಿಗೆ ವಿಶೇಷವಾಗಿ ಹೈಪರ್ ಲೋಕಲ್ ಜನರಿಗೆ ಹೆಚ್ಚು ಕೈಗೆಟುಕುವ ಸಾರಿಗೆ ಆಯ್ಕೆಗಳ ಬಾಗಿಲು ತೆರೆಯುತ್ತದೆ. ಸುಸ್ಥಿರ ನಗರ ಅಭಿವೃದ್ಧಿಯ ಭಾರತದ ಗುರಿಯನ್ನು ಇದು ಬೆಂಬಲಿಸುತ್ತದೆ. ಈ ಕ್ರಮವು ಸಂಚಾರ ದಟ್ಟಣೆ ಮತ್ತು ವಾಹನ ಮಾಲಿನ್ಯದಂತಹ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ” ಎಂದು ರ‍್ಯಾಪಿಡೋ ಹೇಳಿಕೊಂಡಿದೆ.

ಊಬರ್ ಕೂಡ ಕೇಂದ್ರದ ಮಾರ್ಗಸೂಚಿಗಳನ್ನು ‘ಭಾರತದ ಡಿಜಿಟಲ್ ಮೊಬಿಲಿಟಿ ವಲಯದಲ್ಲಿ ನಾವೀನ್ಯತೆ ಮತ್ತು ನಿಯಂತ್ರಕ ಸ್ಪಷ್ಟತೆಯನ್ನು ಬೆಳೆಸುವತ್ತ ಒಂದು ಭವಿಷ್ಯದ ಹೆಜ್ಜೆ’ ಎಂದು ಬಣ್ಣಿಸಿದೆ.

ಮಾರ್ಗ ಸೂಚಿಗಳನ್ನು ರಾಜ್ಯಗಳು ಸಕಾಲಿಕವಾಗಿ ಅಳವಡಿಸಿಕೊಂಡರೆ ಏಕರೂಪದ ನೀತಿ ಅನುಷ್ಠಾನ ಮತ್ತು ಎಲ್ಲಾ ಪಾಲುದಾರರಿಗೆ ಹೆಚ್ಚು ಅಗತ್ಯವಿರುವ ಮುನ್ಸೂಚನೆಯನ್ನು ನೀಡಲು ಸಹಕಾರಿಯಾಗುತ್ತದೆ ಎಂದಿದೆ.

ಕರ್ನಾಟಕದ ಸಾರಿಗೆ ಇಲಾಖೆ ಈ ವಿಷಯದ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...