Homeಮುಖಪುಟಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

- Advertisement -
- Advertisement -

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ (ಜು.2) ಪರಿಷ್ಕೃತ ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಪುನರಾರಂಭಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ.

ಹೊಸ ಮಾರ್ಗಸೂಚಿಗಳು ರಾಜ್ಯ ಸರ್ಕಾರಗಳಿಗೆ ಪರವಾನಗಿಗಳನ್ನು ನೀಡಲು ಮತ್ತು ಅಗ್ರಿಗೇಟರ್‌ಗಳನ್ನು ನಿಯಂತ್ರಿಸಲು ಒಂದು ಚೌಕಟ್ಟನ್ನು ಒದಗಿಸುತ್ತದೆ. ಬಳಕೆದಾರರ ಸುರಕ್ಷತೆ ಮತ್ತು ಭದ್ರತೆ ಹಾಗೂ ಚಾಲಕನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಹಗುರವಾದ ನಿಯಂತ್ರಣ ವ್ಯವಸ್ಥೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

‘ಸಾರಿಗೆ ಅಲ್ಲದ ಮೋಟರ್‌ ಸೈಕಲ್‌ಗಳನ್ನು ಅಗ್ರಿಗೇಟರ್‌ಗಳ ಮೂಲಕ ಒಗ್ಗೂಡಿಸುವಿಕೆ’ ಎಂಬ ಶೀರ್ಷಿಕೆಯ ಮಾರ್ಗಸೂಚಿಯ ಷರತ್ತು 23ರಲ್ಲಿ ಆನ್‌ಲೈನ್ ಅಗ್ರಿಗೇಟರ್‌ಗಳು ದ್ವಿಚಕ್ರ ವಾಹನಗಳನ್ನು ಬೈಕ್ ಟ್ಯಾಕ್ಸಿಗಳಾಗಿ ಬಳಸಲು ಅನುವು ಮಾಡಿಕೊಡುವ ಬಗ್ಗೆ ಹೇಳಲಾಗಿದೆ.

ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು. ಇದು ಸಂಚಾರ ದಟ್ಟಣೆ ಮತ್ತು ಮಾಲಿನ್ಯ ಕಡಿಮೆ ಮಾಡಲು ನೆರವಾಗುತ್ತದೆ. ಜನರಿಗೆ ಕೈಗೆಟಕುವ ಪ್ರಯಾಣಕ್ಕೆ ಅವಕಾಶ ನೀಡುತ್ತದೆ. ಹೈಪರ್​ಲೋಕಲ್​ ಡೆಲಿವರಿ ಹಾಗೂ ಜೀವನೋಪಾಯಕ್ಕೂ ದಾರಿಯಾಗುತ್ತದೆ ಎಂದು ಮಾರ್ಗಸೂಚಿ ಹೇಳಿದೆ.

ಸಾರಿಗೆಯು ಸಮವರ್ತಿ ಪಟ್ಟಿಯಲ್ಲಿ ಬರುವ ವಿಷಯವಾಗಿದ್ದರೂ, ರಾಜ್ಯ ಸರ್ಕಾರವು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ, 2019ರ ಸೆಕ್ಷನ್ 36ರ ಪ್ರಕಾರ, ಅಗ್ರಿಗೇಟರ್‌ಗೆ ಪರವಾನಗಿ ನೀಡುವಾಗ ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಬಹುದು.

ಕರ್ನಾಟಕ ಸರ್ಕಾರದ ರಾಜ್ಯದಲ್ಲಿ ಬೈಕ್ಸ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿದೆ. ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನೆಲೆ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿ ಮಾರ್ಗಸೂಚಿ ಹೊರಡಿಸಿದೆ.

ಅತಿದೊಡ್ಡ ಬೈಕ್ ಟ್ಯಾಕ್ಸಿ ಆಪರೇಟರ್ ರ‍್ಯಾಪಿಡೋ ಕೇಂದ್ರದ ಪರಿಷ್ಕೃತ ಮಾರ್ಗಸೂಚಿಗಳನ್ನು ಸ್ವಾಗತಿಸಿದ್ದು, ಇದೊಂದು ‘ಮೈಲಿಗಲ್ಲು’ ಎಂದು ಕರೆದಿದೆ. ಬೈಕ್ ಟ್ಯಾಕ್ಸಿ ನಿಷೇಧ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ಓಲಾ, ಊಬರ್, ರ‍್ಯಾಪಿಡೋ ಈಗಾಗಲೇ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದೆ.

“ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು ಎಂಬ ಕೇಂದ್ರದ ಮಾರ್ಗಸೂಚಿಯು, ಲಕ್ಷಾಂತರ ಜನರಿಗೆ ವಿಶೇಷವಾಗಿ ಹೈಪರ್ ಲೋಕಲ್ ಜನರಿಗೆ ಹೆಚ್ಚು ಕೈಗೆಟುಕುವ ಸಾರಿಗೆ ಆಯ್ಕೆಗಳ ಬಾಗಿಲು ತೆರೆಯುತ್ತದೆ. ಸುಸ್ಥಿರ ನಗರ ಅಭಿವೃದ್ಧಿಯ ಭಾರತದ ಗುರಿಯನ್ನು ಇದು ಬೆಂಬಲಿಸುತ್ತದೆ. ಈ ಕ್ರಮವು ಸಂಚಾರ ದಟ್ಟಣೆ ಮತ್ತು ವಾಹನ ಮಾಲಿನ್ಯದಂತಹ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ” ಎಂದು ರ‍್ಯಾಪಿಡೋ ಹೇಳಿಕೊಂಡಿದೆ.

ಊಬರ್ ಕೂಡ ಕೇಂದ್ರದ ಮಾರ್ಗಸೂಚಿಗಳನ್ನು ‘ಭಾರತದ ಡಿಜಿಟಲ್ ಮೊಬಿಲಿಟಿ ವಲಯದಲ್ಲಿ ನಾವೀನ್ಯತೆ ಮತ್ತು ನಿಯಂತ್ರಕ ಸ್ಪಷ್ಟತೆಯನ್ನು ಬೆಳೆಸುವತ್ತ ಒಂದು ಭವಿಷ್ಯದ ಹೆಜ್ಜೆ’ ಎಂದು ಬಣ್ಣಿಸಿದೆ.

ಮಾರ್ಗ ಸೂಚಿಗಳನ್ನು ರಾಜ್ಯಗಳು ಸಕಾಲಿಕವಾಗಿ ಅಳವಡಿಸಿಕೊಂಡರೆ ಏಕರೂಪದ ನೀತಿ ಅನುಷ್ಠಾನ ಮತ್ತು ಎಲ್ಲಾ ಪಾಲುದಾರರಿಗೆ ಹೆಚ್ಚು ಅಗತ್ಯವಿರುವ ಮುನ್ಸೂಚನೆಯನ್ನು ನೀಡಲು ಸಹಕಾರಿಯಾಗುತ್ತದೆ ಎಂದಿದೆ.

ಕರ್ನಾಟಕದ ಸಾರಿಗೆ ಇಲಾಖೆ ಈ ವಿಷಯದ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...