Homeಮುಖಪುಟಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

- Advertisement -
- Advertisement -

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಗಳವಾರ (ಜು.2) ಪರಿಷ್ಕೃತ ಮೋಟಾರು ವಾಹನ ಅಗ್ರಿಗೇಟರ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಪುನರಾರಂಭಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ.

ಹೊಸ ಮಾರ್ಗಸೂಚಿಗಳು ರಾಜ್ಯ ಸರ್ಕಾರಗಳಿಗೆ ಪರವಾನಗಿಗಳನ್ನು ನೀಡಲು ಮತ್ತು ಅಗ್ರಿಗೇಟರ್‌ಗಳನ್ನು ನಿಯಂತ್ರಿಸಲು ಒಂದು ಚೌಕಟ್ಟನ್ನು ಒದಗಿಸುತ್ತದೆ. ಬಳಕೆದಾರರ ಸುರಕ್ಷತೆ ಮತ್ತು ಭದ್ರತೆ ಹಾಗೂ ಚಾಲಕನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಹಗುರವಾದ ನಿಯಂತ್ರಣ ವ್ಯವಸ್ಥೆಯನ್ನು ಒದಗಿಸಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

‘ಸಾರಿಗೆ ಅಲ್ಲದ ಮೋಟರ್‌ ಸೈಕಲ್‌ಗಳನ್ನು ಅಗ್ರಿಗೇಟರ್‌ಗಳ ಮೂಲಕ ಒಗ್ಗೂಡಿಸುವಿಕೆ’ ಎಂಬ ಶೀರ್ಷಿಕೆಯ ಮಾರ್ಗಸೂಚಿಯ ಷರತ್ತು 23ರಲ್ಲಿ ಆನ್‌ಲೈನ್ ಅಗ್ರಿಗೇಟರ್‌ಗಳು ದ್ವಿಚಕ್ರ ವಾಹನಗಳನ್ನು ಬೈಕ್ ಟ್ಯಾಕ್ಸಿಗಳಾಗಿ ಬಳಸಲು ಅನುವು ಮಾಡಿಕೊಡುವ ಬಗ್ಗೆ ಹೇಳಲಾಗಿದೆ.

ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು. ಇದು ಸಂಚಾರ ದಟ್ಟಣೆ ಮತ್ತು ಮಾಲಿನ್ಯ ಕಡಿಮೆ ಮಾಡಲು ನೆರವಾಗುತ್ತದೆ. ಜನರಿಗೆ ಕೈಗೆಟಕುವ ಪ್ರಯಾಣಕ್ಕೆ ಅವಕಾಶ ನೀಡುತ್ತದೆ. ಹೈಪರ್​ಲೋಕಲ್​ ಡೆಲಿವರಿ ಹಾಗೂ ಜೀವನೋಪಾಯಕ್ಕೂ ದಾರಿಯಾಗುತ್ತದೆ ಎಂದು ಮಾರ್ಗಸೂಚಿ ಹೇಳಿದೆ.

ಸಾರಿಗೆಯು ಸಮವರ್ತಿ ಪಟ್ಟಿಯಲ್ಲಿ ಬರುವ ವಿಷಯವಾಗಿದ್ದರೂ, ರಾಜ್ಯ ಸರ್ಕಾರವು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ, 2019ರ ಸೆಕ್ಷನ್ 36ರ ಪ್ರಕಾರ, ಅಗ್ರಿಗೇಟರ್‌ಗೆ ಪರವಾನಗಿ ನೀಡುವಾಗ ಕೇಂದ್ರ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಬಹುದು.

ಕರ್ನಾಟಕ ಸರ್ಕಾರದ ರಾಜ್ಯದಲ್ಲಿ ಬೈಕ್ಸ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿದೆ. ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನೆಲೆ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿ ಮಾರ್ಗಸೂಚಿ ಹೊರಡಿಸಿದೆ.

ಅತಿದೊಡ್ಡ ಬೈಕ್ ಟ್ಯಾಕ್ಸಿ ಆಪರೇಟರ್ ರ‍್ಯಾಪಿಡೋ ಕೇಂದ್ರದ ಪರಿಷ್ಕೃತ ಮಾರ್ಗಸೂಚಿಗಳನ್ನು ಸ್ವಾಗತಿಸಿದ್ದು, ಇದೊಂದು ‘ಮೈಲಿಗಲ್ಲು’ ಎಂದು ಕರೆದಿದೆ. ಬೈಕ್ ಟ್ಯಾಕ್ಸಿ ನಿಷೇಧ ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ಓಲಾ, ಊಬರ್, ರ‍್ಯಾಪಿಡೋ ಈಗಾಗಲೇ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿದೆ.

“ರಾಜ್ಯ ಸರ್ಕಾರ ಸಾರಿಗೇತರ ಮೋಟರ್​ಸೈಕಲ್​ಗಳನ್ನು ಜನರ ಪ್ರಯಾಣದ ಬಳಕೆಗೆ ಅವಕಾಶ ನೀಡಬಹುದು ಎಂಬ ಕೇಂದ್ರದ ಮಾರ್ಗಸೂಚಿಯು, ಲಕ್ಷಾಂತರ ಜನರಿಗೆ ವಿಶೇಷವಾಗಿ ಹೈಪರ್ ಲೋಕಲ್ ಜನರಿಗೆ ಹೆಚ್ಚು ಕೈಗೆಟುಕುವ ಸಾರಿಗೆ ಆಯ್ಕೆಗಳ ಬಾಗಿಲು ತೆರೆಯುತ್ತದೆ. ಸುಸ್ಥಿರ ನಗರ ಅಭಿವೃದ್ಧಿಯ ಭಾರತದ ಗುರಿಯನ್ನು ಇದು ಬೆಂಬಲಿಸುತ್ತದೆ. ಈ ಕ್ರಮವು ಸಂಚಾರ ದಟ್ಟಣೆ ಮತ್ತು ವಾಹನ ಮಾಲಿನ್ಯದಂತಹ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ” ಎಂದು ರ‍್ಯಾಪಿಡೋ ಹೇಳಿಕೊಂಡಿದೆ.

ಊಬರ್ ಕೂಡ ಕೇಂದ್ರದ ಮಾರ್ಗಸೂಚಿಗಳನ್ನು ‘ಭಾರತದ ಡಿಜಿಟಲ್ ಮೊಬಿಲಿಟಿ ವಲಯದಲ್ಲಿ ನಾವೀನ್ಯತೆ ಮತ್ತು ನಿಯಂತ್ರಕ ಸ್ಪಷ್ಟತೆಯನ್ನು ಬೆಳೆಸುವತ್ತ ಒಂದು ಭವಿಷ್ಯದ ಹೆಜ್ಜೆ’ ಎಂದು ಬಣ್ಣಿಸಿದೆ.

ಮಾರ್ಗ ಸೂಚಿಗಳನ್ನು ರಾಜ್ಯಗಳು ಸಕಾಲಿಕವಾಗಿ ಅಳವಡಿಸಿಕೊಂಡರೆ ಏಕರೂಪದ ನೀತಿ ಅನುಷ್ಠಾನ ಮತ್ತು ಎಲ್ಲಾ ಪಾಲುದಾರರಿಗೆ ಹೆಚ್ಚು ಅಗತ್ಯವಿರುವ ಮುನ್ಸೂಚನೆಯನ್ನು ನೀಡಲು ಸಹಕಾರಿಯಾಗುತ್ತದೆ ಎಂದಿದೆ.

ಕರ್ನಾಟಕದ ಸಾರಿಗೆ ಇಲಾಖೆ ಈ ವಿಷಯದ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬೈಕ್‌ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...