Homeಚಳವಳಿಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ನಿವೃತ್ತಿಯಾಗಿ ಒಂದು ವಾರ ಕಳೆದರೂ ಕೇಂದ್ರ ಸರ್ಕಾರ ಆ ಹುದ್ದೆಗೆ ಅರ್ಹ ಮುಖ್ಯ ಆಯುಕ್ತರನ್ನು ನೇಮಕ ಮಾಡಲು ಮುಂದಾಗಿಲ್ಲ ಇದರಿಂದ ಮುಖ್ಯಸ್ಥರಿಲ್ಲದ ಆಯೋಗದಲ್ಲಿ ಸಿಬ್ಬಂದಿಯ ಕೊರತೆ ಎದುರಾಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಸಾರ್ವಜನಿಕರು ರಾಷ್ಟ್ರೀಯ ಮಾಹಿತಿ ಆಯೋಗದ ಮುಂದೆ ಸಲ್ಲಿಸಿರುವ  34 ಸಾವಿರ ಮನವಿಗಳು ಮತ್ತು ದೂರುಗಳ ಬಾಕಿ ಇದ್ದು ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲದಂತೆ ಆಗಿದೆ ಎಂದು ಸೆಟಾರ್ಕ್ ನಾಗರಿಕ ಸಂಘಟೆಯ ಅಧ್ಯಕ್ಷೆ ಸುಧಾ ಭಾರದ್ವಾಜ್ ಹೇಳಿದ್ದಾರೆ.

ರಾಷ್ಟ್ರೀಯ ಮಾಹಿತಿ ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರು ಸೇರಿ 11 ಮಂದಿ ಆಯುಕ್ತರು ಇರಬೇಕು. ಆದರೆ ಆಯೋಗದಲ್ಲಿ ಕೇವಲ ಐದು ಮಂದಿ ಆಯುಕ್ತರು ಮಾತ್ರ ಇದ್ದು, ಉಳಿದ 6 ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಾಗಿ ಯಾವುದೇ ಹೊಸ ಹುದ್ದೆಗಳ ನೇಮಕದ ಗೈರುಹಾಜರಿ ಎದ್ದುಕಾಣುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತ ಸುಧೀರ್ ಭಾರ್ಗವ ಜನವರಿ 11ರಂದು ನಿವೃತ್ತಿ ಹೊಂದಿದರು. ಇದು ಸಹಜ ಮತ್ತು ಸಾಮಾನ್ಯ ನಿವೃತ್ತಿ. ಭಾರ್ಗವ ಅವರಿಗೆ ನಿವೃತ್ತಿ ದಿನ ಗೊತ್ತಾದ ಸಮಯದಿಂದ ಆಯೋಗಕ್ಕೆ ಹೊಸ ಅಧ್ಯಕ್ಷರನ್ನು ನೇಮಕದ ಬಗ್ಗೆ ಚಿಂತನೆ ಮಾಡಿದರು. ಆದರೂ ಕೇಂದ್ರ ಸರ್ಕಾರ ಮುಖ್ಯ ಆಯುಕ್ತರನ್ನು ನೇಮಕ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ.

ಸುಧಾ ಭಾರದ್ವಾಜ್

ದೇಶಾದ್ಯಂತ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅಂಜಲಿ ಭಾರದ್ವಾಜ್ ಮತ್ತು ಲೋಕೇಶ್ ಬಾತ್ರ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 2019ರ ಫೆಬ್ರವರಿಯಲ್ಲಿ ಮಾಹಿತಿ ಆಯೋಗದಲ್ಲಿ ಖಾಲಿರುವ ಆಯುಕ್ತರ ಹುದ್ದೆಗಳನ್ನು ವಿಳಂಬ ಮಾಡದೆ ಭರ್ತಿ ಮಾಡಬೇಕು. ನೇಮಕಾತಿ ಪ್ರಕ್ರಿಯೆಯನ್ನು ಒಂದೆರಡು ತಿಮಗಳಲ್ಲಿ ಪೂರ್ಣಗೊಳಿಸಬೇಕೆಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ನಾಲ್ಕು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಜಾಹಿರಾತು ನೀಡಿತು. ಆದರೆ ಇದುವರೆಗೂ ಒಂದು ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಭಾರದ್ವಾಜ್ ದೂರಿದ್ದಾರೆ.

ಸೆಪ್ಟೆಂಬರ್ 19, 2019ರಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದ್ದು ಆಯುಕ್ತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಲಾಗಿದೆ.

ಈ ಸಂಬಂಧ 2019 ಡಿಸೆಂಬರ್ 16ರ ಆದೇಶದಲ್ಲಿ ಸುಪ್ರೀಂಕೊರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿ ಕೂಡಲೇ ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನ ಸಮಿತಿ ರಚಿಸುವಂತೆಯೂ ಮತ್ತು ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಮತ್ತು ಮೂರು ತಿಂಗಳೊಳಗೆ ನೇಮಕಾರಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಬೇಕು ಎಂದು ಸೂಚಿಸಿತು. ಆದರೆ ಈವರೆಗೆ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ ಎಂದು ದೂರಲಾಗಿದೆ.

2014 ರಿಂದ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ನಿವೃತ್ತಿ ಹೊಂದುತ್ತಿದ್ದು 9 ತಿಂಗಳು ಕಳೆದರೂ ಹೊಸ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಬಂದಿದೆ. ಸಾರ್ವಜನಿಕರು ನ್ಯಾಯಾಲಯಕ್ಕೆ ಹೋಗಿ ಖಾಲಿ ಹುದ್ದೆಗಳ ನೇಮಕ ಸಂಬಂಧ ಭರ್ತಿ ಮಾಡುವಂತೆ ಒತ್ತಾಯಿಸುತ್ತಿದ್ದರೂ ವಿಳಂಬ ಮಾಡುತ್ತಲೇ ಬರುತ್ತಿದೆ ಎಂದು ಭಾರದ್ವಾಜ್ ಮತ್ತು ಅಮಿತವ್ ಜೋಹ್ರಾ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಮಾಹಿತಿ ಆಯೋಗದಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೆಲಸ ಮೇಲೆ ಪರಿಣಾಮ ಬೀರುತ್ತಿದೆ ಎಂದು ಲೋಕೇಶ್ ಬಾತ್ರ ಹೇಳಿದ್ದಾರೆ. ಆಯೋಗದಲ್ಲಿ 34,347 ಪ್ರಕರಣಗಳು ವಿಲೇಯಾಗದೆ ಬಾಕಿ ಉಳಿದಿವೆ ಎಂದು ಜನವರಿ 15ರಂದು ಸಿಐಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಭಾರ್ಗವ ನಿವೃತ್ತಿಯಾದ ನಂತರ ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ ಇದೆ. ಆದರೆ ಕೇಂದ್ರ ಸರ್ಕಾರ ಸಿಐಸಿ ಅವರನ್ನು ನೇಮಕ ಮಾಡುವ ಸಂಬಂಧ ಪಾರದರ್ಶಕತೆಗೆ ಆದ್ಯತೆ ನೀಡುತ್ತಿಲ್ಲ ಮತ್ತು ಮಾಹಿತಿ ಹಕ್ಕು ಕಾಯ್ದೆಯನ್ನು ಕೊಲ್ಲುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತರು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...