Homeಚಳವಳಿಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ನಿವೃತ್ತಿಯಾಗಿ ಒಂದು ವಾರ ಕಳೆದರೂ ಕೇಂದ್ರ ಸರ್ಕಾರ ಆ ಹುದ್ದೆಗೆ ಅರ್ಹ ಮುಖ್ಯ ಆಯುಕ್ತರನ್ನು ನೇಮಕ ಮಾಡಲು ಮುಂದಾಗಿಲ್ಲ ಇದರಿಂದ ಮುಖ್ಯಸ್ಥರಿಲ್ಲದ ಆಯೋಗದಲ್ಲಿ ಸಿಬ್ಬಂದಿಯ ಕೊರತೆ ಎದುರಾಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಸಾರ್ವಜನಿಕರು ರಾಷ್ಟ್ರೀಯ ಮಾಹಿತಿ ಆಯೋಗದ ಮುಂದೆ ಸಲ್ಲಿಸಿರುವ  34 ಸಾವಿರ ಮನವಿಗಳು ಮತ್ತು ದೂರುಗಳ ಬಾಕಿ ಇದ್ದು ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲದಂತೆ ಆಗಿದೆ ಎಂದು ಸೆಟಾರ್ಕ್ ನಾಗರಿಕ ಸಂಘಟೆಯ ಅಧ್ಯಕ್ಷೆ ಸುಧಾ ಭಾರದ್ವಾಜ್ ಹೇಳಿದ್ದಾರೆ.

ರಾಷ್ಟ್ರೀಯ ಮಾಹಿತಿ ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರು ಸೇರಿ 11 ಮಂದಿ ಆಯುಕ್ತರು ಇರಬೇಕು. ಆದರೆ ಆಯೋಗದಲ್ಲಿ ಕೇವಲ ಐದು ಮಂದಿ ಆಯುಕ್ತರು ಮಾತ್ರ ಇದ್ದು, ಉಳಿದ 6 ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಾಗಿ ಯಾವುದೇ ಹೊಸ ಹುದ್ದೆಗಳ ನೇಮಕದ ಗೈರುಹಾಜರಿ ಎದ್ದುಕಾಣುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತ ಸುಧೀರ್ ಭಾರ್ಗವ ಜನವರಿ 11ರಂದು ನಿವೃತ್ತಿ ಹೊಂದಿದರು. ಇದು ಸಹಜ ಮತ್ತು ಸಾಮಾನ್ಯ ನಿವೃತ್ತಿ. ಭಾರ್ಗವ ಅವರಿಗೆ ನಿವೃತ್ತಿ ದಿನ ಗೊತ್ತಾದ ಸಮಯದಿಂದ ಆಯೋಗಕ್ಕೆ ಹೊಸ ಅಧ್ಯಕ್ಷರನ್ನು ನೇಮಕದ ಬಗ್ಗೆ ಚಿಂತನೆ ಮಾಡಿದರು. ಆದರೂ ಕೇಂದ್ರ ಸರ್ಕಾರ ಮುಖ್ಯ ಆಯುಕ್ತರನ್ನು ನೇಮಕ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ.

ಸುಧಾ ಭಾರದ್ವಾಜ್

ದೇಶಾದ್ಯಂತ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅಂಜಲಿ ಭಾರದ್ವಾಜ್ ಮತ್ತು ಲೋಕೇಶ್ ಬಾತ್ರ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 2019ರ ಫೆಬ್ರವರಿಯಲ್ಲಿ ಮಾಹಿತಿ ಆಯೋಗದಲ್ಲಿ ಖಾಲಿರುವ ಆಯುಕ್ತರ ಹುದ್ದೆಗಳನ್ನು ವಿಳಂಬ ಮಾಡದೆ ಭರ್ತಿ ಮಾಡಬೇಕು. ನೇಮಕಾತಿ ಪ್ರಕ್ರಿಯೆಯನ್ನು ಒಂದೆರಡು ತಿಮಗಳಲ್ಲಿ ಪೂರ್ಣಗೊಳಿಸಬೇಕೆಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ನಾಲ್ಕು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಜಾಹಿರಾತು ನೀಡಿತು. ಆದರೆ ಇದುವರೆಗೂ ಒಂದು ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಭಾರದ್ವಾಜ್ ದೂರಿದ್ದಾರೆ.

ಸೆಪ್ಟೆಂಬರ್ 19, 2019ರಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದ್ದು ಆಯುಕ್ತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಲಾಗಿದೆ.

ಈ ಸಂಬಂಧ 2019 ಡಿಸೆಂಬರ್ 16ರ ಆದೇಶದಲ್ಲಿ ಸುಪ್ರೀಂಕೊರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿ ಕೂಡಲೇ ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನ ಸಮಿತಿ ರಚಿಸುವಂತೆಯೂ ಮತ್ತು ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಮತ್ತು ಮೂರು ತಿಂಗಳೊಳಗೆ ನೇಮಕಾರಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಬೇಕು ಎಂದು ಸೂಚಿಸಿತು. ಆದರೆ ಈವರೆಗೆ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ ಎಂದು ದೂರಲಾಗಿದೆ.

2014 ರಿಂದ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ನಿವೃತ್ತಿ ಹೊಂದುತ್ತಿದ್ದು 9 ತಿಂಗಳು ಕಳೆದರೂ ಹೊಸ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಬಂದಿದೆ. ಸಾರ್ವಜನಿಕರು ನ್ಯಾಯಾಲಯಕ್ಕೆ ಹೋಗಿ ಖಾಲಿ ಹುದ್ದೆಗಳ ನೇಮಕ ಸಂಬಂಧ ಭರ್ತಿ ಮಾಡುವಂತೆ ಒತ್ತಾಯಿಸುತ್ತಿದ್ದರೂ ವಿಳಂಬ ಮಾಡುತ್ತಲೇ ಬರುತ್ತಿದೆ ಎಂದು ಭಾರದ್ವಾಜ್ ಮತ್ತು ಅಮಿತವ್ ಜೋಹ್ರಾ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಮಾಹಿತಿ ಆಯೋಗದಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೆಲಸ ಮೇಲೆ ಪರಿಣಾಮ ಬೀರುತ್ತಿದೆ ಎಂದು ಲೋಕೇಶ್ ಬಾತ್ರ ಹೇಳಿದ್ದಾರೆ. ಆಯೋಗದಲ್ಲಿ 34,347 ಪ್ರಕರಣಗಳು ವಿಲೇಯಾಗದೆ ಬಾಕಿ ಉಳಿದಿವೆ ಎಂದು ಜನವರಿ 15ರಂದು ಸಿಐಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಭಾರ್ಗವ ನಿವೃತ್ತಿಯಾದ ನಂತರ ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ ಇದೆ. ಆದರೆ ಕೇಂದ್ರ ಸರ್ಕಾರ ಸಿಐಸಿ ಅವರನ್ನು ನೇಮಕ ಮಾಡುವ ಸಂಬಂಧ ಪಾರದರ್ಶಕತೆಗೆ ಆದ್ಯತೆ ನೀಡುತ್ತಿಲ್ಲ ಮತ್ತು ಮಾಹಿತಿ ಹಕ್ಕು ಕಾಯ್ದೆಯನ್ನು ಕೊಲ್ಲುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತರು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...