Homeಚಳವಳಿಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ನಿವೃತ್ತಿಯಾಗಿ ಒಂದು ವಾರ ಕಳೆದರೂ ಕೇಂದ್ರ ಸರ್ಕಾರ ಆ ಹುದ್ದೆಗೆ ಅರ್ಹ ಮುಖ್ಯ ಆಯುಕ್ತರನ್ನು ನೇಮಕ ಮಾಡಲು ಮುಂದಾಗಿಲ್ಲ ಇದರಿಂದ ಮುಖ್ಯಸ್ಥರಿಲ್ಲದ ಆಯೋಗದಲ್ಲಿ ಸಿಬ್ಬಂದಿಯ ಕೊರತೆ ಎದುರಾಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಸಾರ್ವಜನಿಕರು ರಾಷ್ಟ್ರೀಯ ಮಾಹಿತಿ ಆಯೋಗದ ಮುಂದೆ ಸಲ್ಲಿಸಿರುವ  34 ಸಾವಿರ ಮನವಿಗಳು ಮತ್ತು ದೂರುಗಳ ಬಾಕಿ ಇದ್ದು ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲದಂತೆ ಆಗಿದೆ ಎಂದು ಸೆಟಾರ್ಕ್ ನಾಗರಿಕ ಸಂಘಟೆಯ ಅಧ್ಯಕ್ಷೆ ಸುಧಾ ಭಾರದ್ವಾಜ್ ಹೇಳಿದ್ದಾರೆ.

ರಾಷ್ಟ್ರೀಯ ಮಾಹಿತಿ ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರು ಸೇರಿ 11 ಮಂದಿ ಆಯುಕ್ತರು ಇರಬೇಕು. ಆದರೆ ಆಯೋಗದಲ್ಲಿ ಕೇವಲ ಐದು ಮಂದಿ ಆಯುಕ್ತರು ಮಾತ್ರ ಇದ್ದು, ಉಳಿದ 6 ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಾಗಿ ಯಾವುದೇ ಹೊಸ ಹುದ್ದೆಗಳ ನೇಮಕದ ಗೈರುಹಾಜರಿ ಎದ್ದುಕಾಣುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತ ಸುಧೀರ್ ಭಾರ್ಗವ ಜನವರಿ 11ರಂದು ನಿವೃತ್ತಿ ಹೊಂದಿದರು. ಇದು ಸಹಜ ಮತ್ತು ಸಾಮಾನ್ಯ ನಿವೃತ್ತಿ. ಭಾರ್ಗವ ಅವರಿಗೆ ನಿವೃತ್ತಿ ದಿನ ಗೊತ್ತಾದ ಸಮಯದಿಂದ ಆಯೋಗಕ್ಕೆ ಹೊಸ ಅಧ್ಯಕ್ಷರನ್ನು ನೇಮಕದ ಬಗ್ಗೆ ಚಿಂತನೆ ಮಾಡಿದರು. ಆದರೂ ಕೇಂದ್ರ ಸರ್ಕಾರ ಮುಖ್ಯ ಆಯುಕ್ತರನ್ನು ನೇಮಕ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ.

ಸುಧಾ ಭಾರದ್ವಾಜ್

ದೇಶಾದ್ಯಂತ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅಂಜಲಿ ಭಾರದ್ವಾಜ್ ಮತ್ತು ಲೋಕೇಶ್ ಬಾತ್ರ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 2019ರ ಫೆಬ್ರವರಿಯಲ್ಲಿ ಮಾಹಿತಿ ಆಯೋಗದಲ್ಲಿ ಖಾಲಿರುವ ಆಯುಕ್ತರ ಹುದ್ದೆಗಳನ್ನು ವಿಳಂಬ ಮಾಡದೆ ಭರ್ತಿ ಮಾಡಬೇಕು. ನೇಮಕಾತಿ ಪ್ರಕ್ರಿಯೆಯನ್ನು ಒಂದೆರಡು ತಿಮಗಳಲ್ಲಿ ಪೂರ್ಣಗೊಳಿಸಬೇಕೆಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ನಾಲ್ಕು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಜಾಹಿರಾತು ನೀಡಿತು. ಆದರೆ ಇದುವರೆಗೂ ಒಂದು ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಭಾರದ್ವಾಜ್ ದೂರಿದ್ದಾರೆ.

ಸೆಪ್ಟೆಂಬರ್ 19, 2019ರಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದ್ದು ಆಯುಕ್ತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಲಾಗಿದೆ.

ಈ ಸಂಬಂಧ 2019 ಡಿಸೆಂಬರ್ 16ರ ಆದೇಶದಲ್ಲಿ ಸುಪ್ರೀಂಕೊರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿ ಕೂಡಲೇ ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನ ಸಮಿತಿ ರಚಿಸುವಂತೆಯೂ ಮತ್ತು ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಮತ್ತು ಮೂರು ತಿಂಗಳೊಳಗೆ ನೇಮಕಾರಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಬೇಕು ಎಂದು ಸೂಚಿಸಿತು. ಆದರೆ ಈವರೆಗೆ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ ಎಂದು ದೂರಲಾಗಿದೆ.

2014 ರಿಂದ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ನಿವೃತ್ತಿ ಹೊಂದುತ್ತಿದ್ದು 9 ತಿಂಗಳು ಕಳೆದರೂ ಹೊಸ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಬಂದಿದೆ. ಸಾರ್ವಜನಿಕರು ನ್ಯಾಯಾಲಯಕ್ಕೆ ಹೋಗಿ ಖಾಲಿ ಹುದ್ದೆಗಳ ನೇಮಕ ಸಂಬಂಧ ಭರ್ತಿ ಮಾಡುವಂತೆ ಒತ್ತಾಯಿಸುತ್ತಿದ್ದರೂ ವಿಳಂಬ ಮಾಡುತ್ತಲೇ ಬರುತ್ತಿದೆ ಎಂದು ಭಾರದ್ವಾಜ್ ಮತ್ತು ಅಮಿತವ್ ಜೋಹ್ರಾ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಮಾಹಿತಿ ಆಯೋಗದಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೆಲಸ ಮೇಲೆ ಪರಿಣಾಮ ಬೀರುತ್ತಿದೆ ಎಂದು ಲೋಕೇಶ್ ಬಾತ್ರ ಹೇಳಿದ್ದಾರೆ. ಆಯೋಗದಲ್ಲಿ 34,347 ಪ್ರಕರಣಗಳು ವಿಲೇಯಾಗದೆ ಬಾಕಿ ಉಳಿದಿವೆ ಎಂದು ಜನವರಿ 15ರಂದು ಸಿಐಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಭಾರ್ಗವ ನಿವೃತ್ತಿಯಾದ ನಂತರ ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ ಇದೆ. ಆದರೆ ಕೇಂದ್ರ ಸರ್ಕಾರ ಸಿಐಸಿ ಅವರನ್ನು ನೇಮಕ ಮಾಡುವ ಸಂಬಂಧ ಪಾರದರ್ಶಕತೆಗೆ ಆದ್ಯತೆ ನೀಡುತ್ತಿಲ್ಲ ಮತ್ತು ಮಾಹಿತಿ ಹಕ್ಕು ಕಾಯ್ದೆಯನ್ನು ಕೊಲ್ಲುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತರು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...