Homeಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

- Advertisement -
- Advertisement -

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ

  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ

  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ

  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್

  • ಒಂದೇ ದೇಶ,ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ

  • 69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.

  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ

  • ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್

  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್

  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ

ಇದನ್ನೂ ಓದಿ:ಮಿಯಾ ಮುಸ್ಲಿಮರು ನಮಗೆ ಮತ ಚಲಾಯಿಸಬೇಡಿ: ಅಸ್ಸಾಂ ಬಿಜೆಪಿ ಸಚಿವ

  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ

  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.

  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ

  • 17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.

  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು

  • ಬಜೆಟ್‌ ಮೊದಲ ಭಾರತ ಆತ್ಮನಿರ್ಭ ರ ಭಾರತಕ್ಕೆ ಒತ್ತು,

  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ

  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ


ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...