Homeಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

- Advertisement -
- Advertisement -

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ

  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ

  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ

  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್

  • ಒಂದೇ ದೇಶ,ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ

  • 69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.

  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ

  • ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್

  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್

  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ

ಇದನ್ನೂ ಓದಿ:ಮಿಯಾ ಮುಸ್ಲಿಮರು ನಮಗೆ ಮತ ಚಲಾಯಿಸಬೇಡಿ: ಅಸ್ಸಾಂ ಬಿಜೆಪಿ ಸಚಿವ

  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ

  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.

  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ

  • 17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.

  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು

  • ಬಜೆಟ್‌ ಮೊದಲ ಭಾರತ ಆತ್ಮನಿರ್ಭ ರ ಭಾರತಕ್ಕೆ ಒತ್ತು,

  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ

  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ


ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...