- Advertisement -
- Advertisement -
2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.
-
ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ ಅನ್ವಯವಾಗಲಿದೆ.
-
ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ
-
ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ
-
75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ
-
ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್
-
ಒಂದೇ ದೇಶ,ಒಂದೇ ರೇಶನ್ ಕಾರ್ಡ್ ಪರಿಕಲ್ಪನೆ ಜಾರಿಗೆ
-
69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!
-
ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.
-
ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ
-
ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್
-
2022 ರ ಹಣಕಾಸು ವರ್ಷದಲ್ಲಿ 2 ಪಿಎಸ್ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್
-
1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ

ಇದನ್ನೂ ಓದಿ:ಮಿಯಾ ಮುಸ್ಲಿಮರು ನಮಗೆ ಮತ ಚಲಾಯಿಸಬೇಡಿ: ಅಸ್ಸಾಂ ಬಿಜೆಪಿ ಸಚಿವ
-
1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ
-
ಮಾರ್ಚ್ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್ನಲ್ಲಿ 1300. ಕಿ.ಮೀ.
-
61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ
-
17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.
-
ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಆಡಿಯಲ್ಲಿ ಕಾರ್ಯಚಟುವಟಿಕೆಗಳು
-
ಬಜೆಟ್ ಮೊದಲ ಭಾರತ ಆತ್ಮನಿರ್ಭ ರ ಭಾರತಕ್ಕೆ ಒತ್ತು,
-
ಇಲ್ಲಿಯವರೆಗೆ ಕೋವಿಡ್ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ
-
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ
ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು


