Homeಮುಖಪುಟಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

- Advertisement -
- Advertisement -

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ 3D ಸೆಲ್ಫಿ ಬೂತ್‌ ನಿರ್ಮಾಣದ ವೆಚ್ಚದ ವಿವರಗಳನ್ನು ನೀಡಿದ ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವರಾಜ್ ಮನಸ್ಪುರೆ ಅವರನ್ನು ಹಠಾತ್ತನೆ ವರ್ಗಾವಣೆ ಮಾಡಲಾಗಿದೆ.

2023ರ ಡಿ.29ರಂದು ಶಿವರಾಜ್ ಮನಸ್ಪುರೆ ಅವರನ್ನು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಅವರನ್ನು ಈ ಹುದ್ದೆಗೆ ನೇಮಿಸಿದ 7 ತಿಂಗಳಲ್ಲೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಮನಸ್ಪುರೆ ಅವರನ್ನು ಯಾವುದೇ ಕಾರಣ ನೀಡದೆ ಅಥವಾ ಮುಂದಿನ ಪೋಸ್ಟಿಂಗ್ ಎಲ್ಲಿ ಎಂದು ತಿಳಿಸದೆ ವರ್ಗಾಯಿಸಲಾಗಿದೆ.

ಮನಸ್ಪುರೆ ಬದಲಿಗೆ ಸ್ವಪ್ನಿಲ್ ಡಿ.ನೀಲಾ ಅವರನ್ನು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ಸ್ವಪ್ನಿಲ್ ಡಿ.ನೀಲಾ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ. ಆದರೆ ಇದು ಉನ್ನತ ಮಟ್ಟದ ನಿರ್ಧಾರ ಎಂದು ಇತರ ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ಫಿ ಬೂತ್‌ ಬಗ್ಗೆ ಮಾಹಿತಿ ಕೇಳಿದ್ದ ಅಜಯ್ ಬೋಸ್

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣದ ಬಗ್ಗೆ ಅಮರಾವತಿ ಮೂಲದ ಸಾಮಾಜಿಕ ಕಾರ್ಯಕರ್ತ ಅಜಯ್ ಬೋಸ್ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಕೇಂದ್ರ ರೈಲ್ವೆ, ಪಶ್ಚಿಮ, ದಕ್ಷಿಣ, ಉತ್ತರ ಮತ್ತು ವಾಯುವ್ಯ ರೈಲ್ವೇಗಳ 5 ವಲಯಗಳೊಂದಿಗೆ ಸೆಲ್ಫಿ ಬೂತ್‌ಗಳಿಗೆ ಸಂಬಂಧಿಸಿದ ವೆಚ್ಚಗಳ ವಿವರಗಳನ್ನು ಕೇಳಿದ್ದರು. ನಿರ್ದಿಷ್ಟ ವೆಚ್ಚಗಳ ಕುರಿತಾದ ಪ್ರಶ್ನೆಗೆ ಕೇಂದ್ರ ರೈಲ್ವೆಯು ಮಾತ್ರ ಪ್ರತಿಕ್ರಿಯಿಸಿತ್ತು. ಕೇಂದ್ರ ರೈಲ್ವೇ ವಲಯವೊಂದರಲ್ಲೇ ಸುಮಾರು 20 ಶಾಶ್ವತ ಸೆಲ್ಫಿ ಬೂತ್‌ಗಳನ್ನು ತಲಾ 6.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಅದರ ಒಟ್ಟು ವೆಚ್ಚ 1.25 ಕೋಟಿ ರೂ. ಎಂದು ಹೇಳಲಾಗಿತ್ತು. ಇನ್ನು 32 ತಾತ್ಕಾಲಿಕ ಸೆಲ್ಫಿ ಬೂತ್‌ಗಳನ್ನು ತಲಾ 1.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಒಟ್ಟು ವೆಚ್ಚ 40 ಲಕ್ಷ ರೂ. ಎಂದು ಹೇಳಿದ್ದರು.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದರು.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳಿತ್ತು.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಸೆಲ್ಫಿ ಬೂತ್‌ ಬಗ್ಗೆ ಟೀಕಿಸಿದ್ದ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲ್ವೇ ನಿಲ್ದಾಣಗಳಲ್ಲಿ ಸ್ಥಾಪಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಸೆಲ್ಫಿ ಬೂತ್‌ಗಳ ಸ್ಥಾಪನೆ ಮೂಲಕ ತೆರಿಗೆದಾರರ ಹಣದ ದುರ್ಬಳಕೆ ಮಾಡಲಾಗುತ್ತಿದೆ. ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...