Homeಮುಖಪುಟಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

- Advertisement -
- Advertisement -

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ 3D ಸೆಲ್ಫಿ ಬೂತ್‌ ನಿರ್ಮಾಣದ ವೆಚ್ಚದ ವಿವರಗಳನ್ನು ನೀಡಿದ ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವರಾಜ್ ಮನಸ್ಪುರೆ ಅವರನ್ನು ಹಠಾತ್ತನೆ ವರ್ಗಾವಣೆ ಮಾಡಲಾಗಿದೆ.

2023ರ ಡಿ.29ರಂದು ಶಿವರಾಜ್ ಮನಸ್ಪುರೆ ಅವರನ್ನು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಅವರನ್ನು ಈ ಹುದ್ದೆಗೆ ನೇಮಿಸಿದ 7 ತಿಂಗಳಲ್ಲೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಮನಸ್ಪುರೆ ಅವರನ್ನು ಯಾವುದೇ ಕಾರಣ ನೀಡದೆ ಅಥವಾ ಮುಂದಿನ ಪೋಸ್ಟಿಂಗ್ ಎಲ್ಲಿ ಎಂದು ತಿಳಿಸದೆ ವರ್ಗಾಯಿಸಲಾಗಿದೆ.

ಮನಸ್ಪುರೆ ಬದಲಿಗೆ ಸ್ವಪ್ನಿಲ್ ಡಿ.ನೀಲಾ ಅವರನ್ನು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ಸ್ವಪ್ನಿಲ್ ಡಿ.ನೀಲಾ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ. ಆದರೆ ಇದು ಉನ್ನತ ಮಟ್ಟದ ನಿರ್ಧಾರ ಎಂದು ಇತರ ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ಫಿ ಬೂತ್‌ ಬಗ್ಗೆ ಮಾಹಿತಿ ಕೇಳಿದ್ದ ಅಜಯ್ ಬೋಸ್

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣದ ಬಗ್ಗೆ ಅಮರಾವತಿ ಮೂಲದ ಸಾಮಾಜಿಕ ಕಾರ್ಯಕರ್ತ ಅಜಯ್ ಬೋಸ್ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಕೇಂದ್ರ ರೈಲ್ವೆ, ಪಶ್ಚಿಮ, ದಕ್ಷಿಣ, ಉತ್ತರ ಮತ್ತು ವಾಯುವ್ಯ ರೈಲ್ವೇಗಳ 5 ವಲಯಗಳೊಂದಿಗೆ ಸೆಲ್ಫಿ ಬೂತ್‌ಗಳಿಗೆ ಸಂಬಂಧಿಸಿದ ವೆಚ್ಚಗಳ ವಿವರಗಳನ್ನು ಕೇಳಿದ್ದರು. ನಿರ್ದಿಷ್ಟ ವೆಚ್ಚಗಳ ಕುರಿತಾದ ಪ್ರಶ್ನೆಗೆ ಕೇಂದ್ರ ರೈಲ್ವೆಯು ಮಾತ್ರ ಪ್ರತಿಕ್ರಿಯಿಸಿತ್ತು. ಕೇಂದ್ರ ರೈಲ್ವೇ ವಲಯವೊಂದರಲ್ಲೇ ಸುಮಾರು 20 ಶಾಶ್ವತ ಸೆಲ್ಫಿ ಬೂತ್‌ಗಳನ್ನು ತಲಾ 6.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಅದರ ಒಟ್ಟು ವೆಚ್ಚ 1.25 ಕೋಟಿ ರೂ. ಎಂದು ಹೇಳಲಾಗಿತ್ತು. ಇನ್ನು 32 ತಾತ್ಕಾಲಿಕ ಸೆಲ್ಫಿ ಬೂತ್‌ಗಳನ್ನು ತಲಾ 1.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಒಟ್ಟು ವೆಚ್ಚ 40 ಲಕ್ಷ ರೂ. ಎಂದು ಹೇಳಿದ್ದರು.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದರು.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳಿತ್ತು.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಸೆಲ್ಫಿ ಬೂತ್‌ ಬಗ್ಗೆ ಟೀಕಿಸಿದ್ದ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲ್ವೇ ನಿಲ್ದಾಣಗಳಲ್ಲಿ ಸ್ಥಾಪಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಸೆಲ್ಫಿ ಬೂತ್‌ಗಳ ಸ್ಥಾಪನೆ ಮೂಲಕ ತೆರಿಗೆದಾರರ ಹಣದ ದುರ್ಬಳಕೆ ಮಾಡಲಾಗುತ್ತಿದೆ. ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...