Homeಮುಖಪುಟಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

ಮೋದಿ 3D ಸೆಲ್ಫಿ ಬೂತ್‌ ನಿರ್ಮಾಣ ವೆಚ್ಚದ ಮಾಹಿತಿ ನೀಡಿದ ಅಧಿಕಾರಿ ದಿಡೀರ್‌ ವರ್ಗಾವಣೆ

- Advertisement -
- Advertisement -

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ 3D ಸೆಲ್ಫಿ ಬೂತ್‌ ನಿರ್ಮಾಣದ ವೆಚ್ಚದ ವಿವರಗಳನ್ನು ನೀಡಿದ ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವರಾಜ್ ಮನಸ್ಪುರೆ ಅವರನ್ನು ಹಠಾತ್ತನೆ ವರ್ಗಾವಣೆ ಮಾಡಲಾಗಿದೆ.

2023ರ ಡಿ.29ರಂದು ಶಿವರಾಜ್ ಮನಸ್ಪುರೆ ಅವರನ್ನು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಅವರನ್ನು ಈ ಹುದ್ದೆಗೆ ನೇಮಿಸಿದ 7 ತಿಂಗಳಲ್ಲೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಮನಸ್ಪುರೆ ಅವರನ್ನು ಯಾವುದೇ ಕಾರಣ ನೀಡದೆ ಅಥವಾ ಮುಂದಿನ ಪೋಸ್ಟಿಂಗ್ ಎಲ್ಲಿ ಎಂದು ತಿಳಿಸದೆ ವರ್ಗಾಯಿಸಲಾಗಿದೆ.

ಮನಸ್ಪುರೆ ಬದಲಿಗೆ ಸ್ವಪ್ನಿಲ್ ಡಿ.ನೀಲಾ ಅವರನ್ನು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಬಗ್ಗೆ ಸ್ವಪ್ನಿಲ್ ಡಿ.ನೀಲಾ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ. ಆದರೆ ಇದು ಉನ್ನತ ಮಟ್ಟದ ನಿರ್ಧಾರ ಎಂದು ಇತರ ಅಧಿಕಾರಿಗಳು ತಿಳಿಸಿದ್ದಾರೆ.

ಸೆಲ್ಫಿ ಬೂತ್‌ ಬಗ್ಗೆ ಮಾಹಿತಿ ಕೇಳಿದ್ದ ಅಜಯ್ ಬೋಸ್

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣದ ಬಗ್ಗೆ ಅಮರಾವತಿ ಮೂಲದ ಸಾಮಾಜಿಕ ಕಾರ್ಯಕರ್ತ ಅಜಯ್ ಬೋಸ್ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಕೇಂದ್ರ ರೈಲ್ವೆ, ಪಶ್ಚಿಮ, ದಕ್ಷಿಣ, ಉತ್ತರ ಮತ್ತು ವಾಯುವ್ಯ ರೈಲ್ವೇಗಳ 5 ವಲಯಗಳೊಂದಿಗೆ ಸೆಲ್ಫಿ ಬೂತ್‌ಗಳಿಗೆ ಸಂಬಂಧಿಸಿದ ವೆಚ್ಚಗಳ ವಿವರಗಳನ್ನು ಕೇಳಿದ್ದರು. ನಿರ್ದಿಷ್ಟ ವೆಚ್ಚಗಳ ಕುರಿತಾದ ಪ್ರಶ್ನೆಗೆ ಕೇಂದ್ರ ರೈಲ್ವೆಯು ಮಾತ್ರ ಪ್ರತಿಕ್ರಿಯಿಸಿತ್ತು. ಕೇಂದ್ರ ರೈಲ್ವೇ ವಲಯವೊಂದರಲ್ಲೇ ಸುಮಾರು 20 ಶಾಶ್ವತ ಸೆಲ್ಫಿ ಬೂತ್‌ಗಳನ್ನು ತಲಾ 6.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಅದರ ಒಟ್ಟು ವೆಚ್ಚ 1.25 ಕೋಟಿ ರೂ. ಎಂದು ಹೇಳಲಾಗಿತ್ತು. ಇನ್ನು 32 ತಾತ್ಕಾಲಿಕ ಸೆಲ್ಫಿ ಬೂತ್‌ಗಳನ್ನು ತಲಾ 1.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಒಟ್ಟು ವೆಚ್ಚ 40 ಲಕ್ಷ ರೂ. ಎಂದು ಹೇಳಿದ್ದರು.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದರು.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳಿತ್ತು.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಸೆಲ್ಫಿ ಬೂತ್‌ ಬಗ್ಗೆ ಟೀಕಿಸಿದ್ದ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲ್ವೇ ನಿಲ್ದಾಣಗಳಲ್ಲಿ ಸ್ಥಾಪಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಸೆಲ್ಫಿ ಬೂತ್‌ಗಳ ಸ್ಥಾಪನೆ ಮೂಲಕ ತೆರಿಗೆದಾರರ ಹಣದ ದುರ್ಬಳಕೆ ಮಾಡಲಾಗುತ್ತಿದೆ. ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಟೀಕಿಸಿದ್ದರು.

ಇದನ್ನು ಓದಿ: ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...