Homeಫ್ಯಾಕ್ಟ್‌ಚೆಕ್ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

- Advertisement -
- Advertisement -

ಫೆಬ್ರವರಿ 01 ರಂದು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರಿನ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ ಕಾಮಗಾರಿಗೆ 15,000 ಕೋಟಿ ಮಂಜೂರು ಮಾಡಿದ್ದಾರೆ ಎಂದು ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ ಮೋಹನ್ ಪ್ರತಿಪಾದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್, “ಬೆಂಗಳೂರು ನಗರವನ್ನು ವೇಗ ಮತ್ತು ಸ್ಮಾರ್ಟ್‌ಗೊಳಿಸಲು ಪ್ರಮುಖ ಹೆಜ್ಜೆ ಇಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ನಮ್ಮ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಅನ್ನು 14,788 ಕೋಟಿ ವೆಚ್ಚ ಪ್ರಕಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ “19 & 20ನೇ ಶತಮಾನದಲ್ಲಿಯೇ ಲಂಡನ್, ನ್ಯೂಯಾರ್ಕ್, ಮಾಸ್ಕೋ ನಗರಗಳಲ್ಲಿ ಸಾರ್ವಜನಿಕ ಸಾರಿಗೆಗಾಗಿ ಬಂಡವಾಳ ಹೂಡಿದ್ದರೆ ನಾವು ಕ್ರೂರವಾಗಿ ತೀರಾ ತಡ ಮಾಡಿದ್ದೇವೆ. ಆದರೆ ನಗರ ಸೌಲಭ್ಯಗಳಿಗೆ ಹೆಚ್ಚು ಹೂಡಿಕೆ ಮಾಡುವ ಮೂಲಕ ಮೋದಿ ಸರ್ಕಾರ ಅದಕ್ಕೆ ತಿದ್ದುಪಡಿ ಮಾಡಿದೆ. ಬೆಂಗಳೂರು ಮೆಟ್ರೋದ ವಿಮಾನ ನಿಲ್ದಾಣ ಮತ್ತು ಸಿಲ್ಕ್‌ಬೋರ್ಡ್‌ (ಒಆರ್‌ಆರ್) ಮಾರ್ಗಗಳಿಗೆ 15 ಸಾವಿರ ಕೋಟಿ ರೂ ಮಂಜೂರು ಮಾಡಿದ್ದಕ್ಕೆ ನಾನು ನಿರ್ಮಲಾ ಸೀತಾರಾಮನ್‌ರವರಿಗೆ ಧನ್ಯವಾದ ತಿಳಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

 

ವಾಸ್ತವವೇನು?

ಮೊದಲನೇಯದಾಗಿ ಬಜೆಟ್ ನಲ್ಲಿ 15 ಸಾವಿರ ಕೋಟಿ ಹಣವನ್ನು ಮಂಜೂರು ಮಾಡಿಲ್ಲ. ಅರ್ಥ ಸಚಿವರು ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚ `14,778 ಕೋಟಿಗಳ ಪ್ರತಿರೂಪವನ್ನು ಘೋಷಿಸಿದ್ದಾರೆ ಅಷ್ಟೇ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಪಡೆಯಬೇಕಾಗಿದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ. ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ಟ್ವಿಟ್ಟರ್‌ನಲ್ಲಿಯೇ ‘ತಪ್ಪು ಮಾಹಿತಿ ಹರಡಬೇಡಿ’ ಎಂದು ಹಲವಾರು ಕನ್ನಡಿಗರು ತೇಜಸ್ವಿ ಸೂರ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “15 ಸಾವಿರ ಕೋಟಿ ನಮ್ಮ ಮೆಟ್ರೋ ನ 2‌A ಮತ್ತು 2‌B project ನ ‌Total cost. ಈ Total cost ನಲ್ಲಿ ಸುಮಾರು 15% ಅಷ್ಟು ಕೇಂದ್ರ ಸರಕಾರ ಕೊಡುತ್ತೆ. ಜೊತೆಗೆ public domain ನಲ್ಲಿರೋ ಬಜೆಟ್ ನ documents ನಲ್ಲಿ ಎಲ್ಲೂ 15 ಸಾವಿರ ಕೋಟಿ sanction ಮಾಡಿರುವ ಮಾಹಿತಿ ಇಲ್ಲ” ಎಂದು ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಕೇಂದ್ರ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ. ಈಗಾಗಲೇ ಅದು 106 ಲಕ್ಷ ಕೋಟಿಯಷ್ಟು ಸಾಲ ಮಾಡಿಕೊಂಡಿದೆ. ಅದರ ಬಡ್ಡಿ ಕಟ್ಟುವಲ್ಲಿಯೇ ಅದು ಸುಸ್ತಾಗುತ್ತಿದೆ. ಆದರೆ ದೊಡ್ಡ ದೊಡ್ಡ ಘೋಷಣೆ ನೀಡಿ ಮರಳು ಮಾಡುತ್ತಿದೆ. ನಮ್ಮ ಸಂಸದರು ಸಹ ಅದನ್ನೇ ಹೇಳಿ ದಾರಿ ತಪ್ಪಿಸುತ್ತಿದ್ದಾರೆಯೇ ಹೊರತು ಬೇರೆನಿಲ್ಲ. ಈ ಹಿಂದೆ ಉಪನಗರ ರೈಲು ಯೋಜನೆಯಲ್ಲಿಯೂ ಸಹ ಕೇಂದ್ರ ಸರ್ಕಾರ 2,479 ಕೋಟಿ ನೇರ ಅನುದಾನ ಕೊಡಬೇಕಿತ್ತು. ಅದರಲ್ಲಿ ಕೇವಲ 500 ಕೋಟಿಗಷ್ಟೆ ಕೇಂದ್ರ ಸರ್ಕಾರ ಸೀಮಿತವಾಗಿದೆ. ಇದು ಅಷ್ಟೆಯೆ” ಎಂದು ತಿಳಿಸಿದ್ದಾರೆ.

ಇನ್ನು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಅರ್ಧ ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗ ಅದರಲ್ಲಿ ನೇರವಾಗಿ 15% ಕೊಡಲು ಒಪ್ಪಿದೆ. ಈ ಕುರಿತು ಬಜೆಟ್ ಮಂಡನೆಯಾದ ದಿನವೇ ‘ಅದು ಹೊಸ ಅನುದಾನವಲ್ಲ’ ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದರು.

ಒಟ್ಟಿನಲ್ಲಿ ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚ `14,778 ಕೋಟಿಗಳನ್ನು ಪೂರ್ಣ ಕೇಂದ್ರ ಸರ್ಕಾರ ನೀಡುತ್ತಿಲ್ಲ. ಅದರ 15% ರಷ್ಟನ್ನು ನೀಡಲಿದೆ. ಅದು ಇನ್ನು ಮಂಜೂರಾಗಿಲ್ಲ.


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...