Homeಫ್ಯಾಕ್ಟ್‌ಚೆಕ್ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

- Advertisement -
- Advertisement -

ಫೆಬ್ರವರಿ 01 ರಂದು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರಿನ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ ಕಾಮಗಾರಿಗೆ 15,000 ಕೋಟಿ ಮಂಜೂರು ಮಾಡಿದ್ದಾರೆ ಎಂದು ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ ಮೋಹನ್ ಪ್ರತಿಪಾದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್, “ಬೆಂಗಳೂರು ನಗರವನ್ನು ವೇಗ ಮತ್ತು ಸ್ಮಾರ್ಟ್‌ಗೊಳಿಸಲು ಪ್ರಮುಖ ಹೆಜ್ಜೆ ಇಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ನಮ್ಮ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಅನ್ನು 14,788 ಕೋಟಿ ವೆಚ್ಚ ಪ್ರಕಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ “19 & 20ನೇ ಶತಮಾನದಲ್ಲಿಯೇ ಲಂಡನ್, ನ್ಯೂಯಾರ್ಕ್, ಮಾಸ್ಕೋ ನಗರಗಳಲ್ಲಿ ಸಾರ್ವಜನಿಕ ಸಾರಿಗೆಗಾಗಿ ಬಂಡವಾಳ ಹೂಡಿದ್ದರೆ ನಾವು ಕ್ರೂರವಾಗಿ ತೀರಾ ತಡ ಮಾಡಿದ್ದೇವೆ. ಆದರೆ ನಗರ ಸೌಲಭ್ಯಗಳಿಗೆ ಹೆಚ್ಚು ಹೂಡಿಕೆ ಮಾಡುವ ಮೂಲಕ ಮೋದಿ ಸರ್ಕಾರ ಅದಕ್ಕೆ ತಿದ್ದುಪಡಿ ಮಾಡಿದೆ. ಬೆಂಗಳೂರು ಮೆಟ್ರೋದ ವಿಮಾನ ನಿಲ್ದಾಣ ಮತ್ತು ಸಿಲ್ಕ್‌ಬೋರ್ಡ್‌ (ಒಆರ್‌ಆರ್) ಮಾರ್ಗಗಳಿಗೆ 15 ಸಾವಿರ ಕೋಟಿ ರೂ ಮಂಜೂರು ಮಾಡಿದ್ದಕ್ಕೆ ನಾನು ನಿರ್ಮಲಾ ಸೀತಾರಾಮನ್‌ರವರಿಗೆ ಧನ್ಯವಾದ ತಿಳಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

 

ವಾಸ್ತವವೇನು?

ಮೊದಲನೇಯದಾಗಿ ಬಜೆಟ್ ನಲ್ಲಿ 15 ಸಾವಿರ ಕೋಟಿ ಹಣವನ್ನು ಮಂಜೂರು ಮಾಡಿಲ್ಲ. ಅರ್ಥ ಸಚಿವರು ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚ `14,778 ಕೋಟಿಗಳ ಪ್ರತಿರೂಪವನ್ನು ಘೋಷಿಸಿದ್ದಾರೆ ಅಷ್ಟೇ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಪಡೆಯಬೇಕಾಗಿದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ. ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ಟ್ವಿಟ್ಟರ್‌ನಲ್ಲಿಯೇ ‘ತಪ್ಪು ಮಾಹಿತಿ ಹರಡಬೇಡಿ’ ಎಂದು ಹಲವಾರು ಕನ್ನಡಿಗರು ತೇಜಸ್ವಿ ಸೂರ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “15 ಸಾವಿರ ಕೋಟಿ ನಮ್ಮ ಮೆಟ್ರೋ ನ 2‌A ಮತ್ತು 2‌B project ನ ‌Total cost. ಈ Total cost ನಲ್ಲಿ ಸುಮಾರು 15% ಅಷ್ಟು ಕೇಂದ್ರ ಸರಕಾರ ಕೊಡುತ್ತೆ. ಜೊತೆಗೆ public domain ನಲ್ಲಿರೋ ಬಜೆಟ್ ನ documents ನಲ್ಲಿ ಎಲ್ಲೂ 15 ಸಾವಿರ ಕೋಟಿ sanction ಮಾಡಿರುವ ಮಾಹಿತಿ ಇಲ್ಲ” ಎಂದು ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಕೇಂದ್ರ ಸರ್ಕಾರದ ಬಳಿ ಕೊಡಲು ಹಣವೇ ಇಲ್ಲ. ಈಗಾಗಲೇ ಅದು 106 ಲಕ್ಷ ಕೋಟಿಯಷ್ಟು ಸಾಲ ಮಾಡಿಕೊಂಡಿದೆ. ಅದರ ಬಡ್ಡಿ ಕಟ್ಟುವಲ್ಲಿಯೇ ಅದು ಸುಸ್ತಾಗುತ್ತಿದೆ. ಆದರೆ ದೊಡ್ಡ ದೊಡ್ಡ ಘೋಷಣೆ ನೀಡಿ ಮರಳು ಮಾಡುತ್ತಿದೆ. ನಮ್ಮ ಸಂಸದರು ಸಹ ಅದನ್ನೇ ಹೇಳಿ ದಾರಿ ತಪ್ಪಿಸುತ್ತಿದ್ದಾರೆಯೇ ಹೊರತು ಬೇರೆನಿಲ್ಲ. ಈ ಹಿಂದೆ ಉಪನಗರ ರೈಲು ಯೋಜನೆಯಲ್ಲಿಯೂ ಸಹ ಕೇಂದ್ರ ಸರ್ಕಾರ 2,479 ಕೋಟಿ ನೇರ ಅನುದಾನ ಕೊಡಬೇಕಿತ್ತು. ಅದರಲ್ಲಿ ಕೇವಲ 500 ಕೋಟಿಗಷ್ಟೆ ಕೇಂದ್ರ ಸರ್ಕಾರ ಸೀಮಿತವಾಗಿದೆ. ಇದು ಅಷ್ಟೆಯೆ” ಎಂದು ತಿಳಿಸಿದ್ದಾರೆ.

ಇನ್ನು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಅರ್ಧ ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗ ಅದರಲ್ಲಿ ನೇರವಾಗಿ 15% ಕೊಡಲು ಒಪ್ಪಿದೆ. ಈ ಕುರಿತು ಬಜೆಟ್ ಮಂಡನೆಯಾದ ದಿನವೇ ‘ಅದು ಹೊಸ ಅನುದಾನವಲ್ಲ’ ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದರು.

ಒಟ್ಟಿನಲ್ಲಿ ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚ `14,778 ಕೋಟಿಗಳನ್ನು ಪೂರ್ಣ ಕೇಂದ್ರ ಸರ್ಕಾರ ನೀಡುತ್ತಿಲ್ಲ. ಅದರ 15% ರಷ್ಟನ್ನು ನೀಡಲಿದೆ. ಅದು ಇನ್ನು ಮಂಜೂರಾಗಿಲ್ಲ.


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...