Homeಮುಖಪುಟಆರೋಪಿಯ ಜೈವಿಕ ವಿವರ ಸಂಗ್ರಹಿಸುವ ಮಸೂದೆ ಮಂಡಿಸಿದ ಕೇಂದ್ರ; ಸಂವಿಧಾನ ಉಲ್ಲಂಘನೆ ಎಂದ ಪ್ರತಿಪಕ್ಷಗಳು

ಆರೋಪಿಯ ಜೈವಿಕ ವಿವರ ಸಂಗ್ರಹಿಸುವ ಮಸೂದೆ ಮಂಡಿಸಿದ ಕೇಂದ್ರ; ಸಂವಿಧಾನ ಉಲ್ಲಂಘನೆ ಎಂದ ಪ್ರತಿಪಕ್ಷಗಳು

- Advertisement -
- Advertisement -

ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಕ್ರಿಮಿನಲ್ ಪ್ರೊಸೀಜರ್ (ಗುರುತಿಸುವಿಕೆ) ಮಸೂದೆ, 2022 ಪರಿಚಯಿಸಿದೆ. ಈ ಮಸೂದೆ ಸಂವಿಧಾನದ ಎಲ್ಲೆಗಳನ್ನು ಮೀರಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಅಪರಾಧಿ, ಬಂಧಿತ ಅಥವಾ ಬಂಧನಕ್ಕೊಳಗಾದವರ ಬೆರಳಚ್ಚುಗಳು, ಹೆಜ್ಜೆಗುರುತುಗಳು, ತಾಳೆ ಗುರುತು, ಫೋಟೋಗಳು, ಕಣ್ಣಿನ ಸ್ಕ್ಯಾನ್‌, ದೈಹಿಕ ಮತ್ತು ಜೈವಿಕ ಮಾದರಿಗಳು, ವರ್ತನೆಯ ಗುಣಲಕ್ಷಣಗಳು, ಸಹಿ ಮತ್ತು ಕೈಬರಹ ಸೇರಿದಂತೆ ಹಲವು ಸಂಗತಿಗಳ ‘ಅಳತೆಗಳನ್ನು’ (measurements) ಸಂಗ್ರಹಿಸಿಕೊಳ್ಳಲು ಪೊಲೀಸರಿಗೆ ಅಧಿಕಾರವನ್ನು ಈ ಮಸೂದೆ ನೀಡುತ್ತಿದೆ.

ಆರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ಪಟ್ಟಿ ಮಾಡಲಾದ ಈ ಮಸೂದೆಯನ್ನು ಅಂತಿಮವಾಗಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಮಂಡಿಸಿದ್ದಾರೆ.

ಸ್ವಯಂ ದೋಷಾರೋಪಣೆಗೆ ಸಂಬಂಧಿಸಿದಂತೆ ಸಂವಿಧಾನದ ವಿಧಿ 20(3), ಜೀವನ ಮತ್ತು ಸ್ವಾತಂತ್ರ್ಯದ ರಕ್ಷಣೆಗೆ ಸಂಬಂಧಿಸಿದ 21ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ನಿಂದ ವಿಧಿಸಲ್ಪಟ್ಟ ಸುರಕ್ಷತೆ ಸಂಬಂಧಿಸಿದ ಸಾಂವಿಧಾನಿಕ ನಿಬಂಧನೆಗಳಿಗೆ ವಿರುದ್ಧವಾಗಿ ಈ ಮಸೂದೆ ಇದೆ ಎಂದು ವಿರೋಧ ಪಕ್ಷದ ಸಂಸದರು ಧ್ವನಿ ಎತ್ತಿದ್ದಾರೆ.

ಅಸ್ತಿತ್ವದಲ್ಲಿರುವ ಕಾನೂನಿನ ವ್ಯಾಪ್ತಿಯನ್ನು ವಿಸ್ತರಿಸಲು ಈ ಮಸೂದೆ ಪ್ರಯತ್ನಿಸುತ್ತದೆ. ಕೈದಿಗಳ ಗುರುತಿಸುವಿಕೆ ಕಾಯಿದೆ, 1920ರ ಅಡಿಯಲ್ಲಿ ಕೇವಲ ಬೆರಳಿನ ಗುರುತು, ಹೆಜ್ಜೆ ಗುರುತು ಇತ್ಯಾದಿಗಳ ‘ಅಳತೆಗಳನ್ನು’ ಪಡೆದುಕೊಳ್ಳಲು ಅವಕಾಶವಿದೆ. ಆದರೆ ಇವುಗಳನ್ನು ತೆಗೆದುಕೊಳ್ಳಬೇಕಾದರೆ ಕನಿಷ್ಠ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಆರೋಪಿ ಒಳಪಟ್ಟಿರಬೇಕು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕಾಗಿ ಅಥವಾ ಏಳು ವರ್ಷಗಳ ಕನಿಷ್ಠ ಶಿಕ್ಷೆಯನ್ನು ಹೊಂದಿರುವ ಅಪರಾಧಕ್ಕಾಗಿ ಆರೋಪಿಯನ್ನು ಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ, “ಜೈವಿಕ ಮಾದರಿಗಳಿಗೆ” ಕಡ್ಡಾಯ ಒಪ್ಪಿಗೆಯ ರೂಪದಲ್ಲಿ ಮಾತ್ರ ಕಾನೂನಿನಲ್ಲಿ ವಿನಾಯಿತಿ ನೀಡಲಾಗಿದೆ.

ಮಸೂದೆಯು ಪೊಲೀಸ್ ಠಾಣೆಗಳ ಉಸ್ತುವಾರಿ ಅಥವಾ ಹೆಡ್ ಕಾನ್‌ಸ್ಟೇಬಲ್‌ ಶ್ರೇಣಿಗಿಂತ ಕೆಳಗಿಲ್ಲದ ಅಧಿಕಾರಿಗಳಿಗೆ “ಮೆಜರ್‌ಮೆಂಟ್ಸ್‌‌” ತೆಗೆದುಕೊಳ್ಳಲು ಅಧಿಕಾರ ನೀಡುತ್ತದೆ. ತೆಗೆದುಕೊಂಡ ಅಳತೆಗಳ ದಾಖಲೆಗಳನ್ನು ಸಂಗ್ರಹಣೆಯ ದಿನಾಂಕದಿಂದ 75 ವರ್ಷಗಳವರೆಗೆ ಉಳಿಸಿಕೊಳ್ಳಲಾಗುತ್ತದೆ.

ಪ್ರಸ್ತುತ ಕಾನೂನು ಠಾಣೆಗಳ ಉಸ್ತುವಾರಿ ಅಧಿಕಾರಿಗಳು, ತನಿಖೆ ನಡೆಸುವವರು ಅಥವಾ ಸಬ್-ಇನ್ಸ್‌ಪೆಕ್ಟರ್ ಶ್ರೇಣಿಗಿಂತ ಕಡಿಮೆಯಿಲ್ಲದ ಇತರರನ್ನು ಒಳಗೊಂಡಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ರ ವಿಭಾಗ 53 ಅಥವಾ ವಿಭಾಗ 53Aರ ಪ್ರಕಾರ “ಅಳತೆಗಳು” ಎಂಬ ಪದವು- ಬೆರಳಿನ ಗುರುತು, ಪಾದ-ಮುದ್ರಿತ ಗುರುತು, ಛಾಯಾಚಿತ್ರಗಳು, ಕಣ್ಣಿನ ಗುರುತು, ಭೌತಿಕ, ಜೈವಿಕ ಮಾದರಿಗಳು ಮತ್ತು ಅವುಗಳ ವಿಶ್ಲೇಷಣೆ, ಸಹಿಗಳು, ಕೈಬರಹ ಅಥವಾ ಉಲ್ಲೇಖಿಸಲಾದ ಯಾವುದೇ ಇತರ ಪರೀಕ್ಷೆಯನ್ನು ಸೂಚಿಸುತ್ತದೆ.

ವಿರೋಧ ಪಕ್ಷದ ನಾಯಕತ್ವ ವಹಿಸಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಮಸೂದೆಯು ಸಂವಿಧಾನದ 20(3) ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ. ಸದನದ ಶಾಸಕಾಂಗ ವ್ಯಾಪ್ತಿಯನ್ನು ಮೀರಿದೆ ಎಂದು ದೂರಿದ್ದಾರೆ.

ಮಸೂದೆಯ ಷರತ್ತು 2 (i) (b) ನಲ್ಲಿರುವ ‘ಜೈವಿಕ ಮಾದರಿಗಳು ಮತ್ತು ಅವುಗಳ ವಿಶ್ಲೇಷಣೆ’ ಎಂಬ ಪದಗಳು ನಾರ್ಕೋ ವಿಶ್ಲೇಷಣೆ ಮತ್ತು ಬ್ರೈನ್ ಮ್ಯಾಪಿಂಗ್‌ಗೆ ವಿಸ್ತರಿಸಬಹುದು. ಅದನ್ನು ಬಲವಂತವಾಗಿ ಮಾಡಿದಾಗ ಸಂವಿಧಾನದ 20 (3)ನೇ ವಿಧಿಯನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ವಿರೋಧಿಸಿದರು.

ಸಂಸದ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಕಟುವಾಗಿ ವಿರೋಧಿಸಿದರು. “ಪ್ರಸ್ತುತ ಮಸೂದೆಯು…ವಿಚಾರಣೆಯಲ್ಲಿರುವ ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ಅಳತೆಗಳನ್ನು ತೆಗೆದುಕೊಳ್ಳಲು ಪೋಲೀಸ್ ಮತ್ತು ನ್ಯಾಯಾಲಯಕ್ಕೆ ಅಧಿಕಾರ ನೀಡಲು ಬಯಸುತ್ತದೆ” ಎಂದು ಟೀಕಿಸಿದ್ದಾರೆ.

ಆರ್‌ಎಸ್‌ಪಿ ಸದಸ್ಯ ಎನ್‌ಕೆ ಪ್ರೇಮಚಂದ್ರನ್ ಅವರು ವಾಗ್ದಾಳಿ ನಡೆಸಿದ್ದು, “ಇದು ಕಠಿಣ ಕಾನೂನು ಹಾಗೂ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆ” ಎಂದು ಬಣ್ಣಿಸಿದರು. “ಯಾವುದೇ ನಿಜವಾದ ಬೇಡಿಕೆಗಾಗಿ ನಾಗರಿಕ ಹಕ್ಕುಗಳ ರಕ್ಷಣೆಗಾಗಿ ಹೋರಾಟ ಮಾಡಿದಾಗ ನನ್ನನ್ನು ಬಂಧಿಸಿದರೆ ಮತ್ತು ನನ್ನ ವಿರುದ್ಧ ಎಫ್‌ಐಆರ್ ಅನ್ನು ದಾಖಲಿಸಲು ಮುಂದಾದರೆ, ನಂತರ ಡಿಎನ್‌ಎ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಇದು ಏನು? ಇದು ವ್ಯಕ್ತಿಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಈ ಮಸೂದೆಯ ಉದ್ದೇಶವೇನು?” ಎಂದು ಕೇಳಿದರು.

ಟಿಎಂಸಿ ಸಂಸದರಾದ ಸೌಗತಾ ರೇ ಮಾತನಾಡಿ, “ಜೈವಿಕ ಮಾದರಿಗಳನ್ನು ತೆಗೆದುಕೊಳ್ಳಲು, ಐರಿಸ್ ಸ್ಕ್ಯಾನ್ ತೆಗೆದುಕೊಳ್ಳಲು ಅವಕಾಶ ನೀಡುವ, ನಾರ್ಕೋ ವಿಶ್ಲೇಷಣೆಗೆ ಅನುಮತಿ ನೀಡುವ ಈ ಕಾನೂನು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಪ್ರತಿಪಾದಿಸಿದರು. “ಕೇಂದ್ರ ಗೃಹ ಸಚಿವರು ಸದನಕ್ಕೆ ಬಂದು ವಿಧೇಯಕದ ನಿಬಂಧನೆಗಳನ್ನು ವಿವರಿಸಬೇಕು” ಎಂದು ಮನವಿ ಮಾಡಿದರು.

ಪ್ರತಿಪಕ್ಷಗಳ ಆತಂಕವನ್ನು ನಿವಾರಿಸಲು ಪ್ರಯತ್ನಿಸುತ್ತಿರುವ ಸಚಿವ ಅಜಯ್‌ ಮಿಶ್ರಾ, “ಈಗಿರುವ ಕಾನೂನು 102 ವರ್ಷಗಳಷ್ಟು ಹಳೆಯದಾಗಿದೆ. ಬೆರಳಚ್ಚು ಮತ್ತು ಹೆಜ್ಜೆಗುರುತುಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡಿದೆ. ಈ ಎಲ್ಲಾ ವರ್ಷಗಳಲ್ಲಿ ಜಗತ್ತಿನಲ್ಲಿ ಅನೇಕ ಬದಲಾವಣೆಗಳು ಸಂಭವಿಸಿವೆ. ತಂತ್ರಜ್ಞಾನವು ಅಪ್‌ಗ್ರೇಡ್ ಆಗಿದೆ. ವೈಜ್ಞಾನಿಕ ಪ್ರಕ್ರಿಯೆಗಳು ಹೆಚ್ಚಿವೆ. ಅಪರಾಧಗಳ ಪ್ರವೃತ್ತಿಯೂ ಹೆಚ್ಚಾಗಿದೆ. ಹೀಗಾಗಿ ಪ್ರಸ್ತುತ ಕಾನೂನಿನ ವ್ಯಾಪ್ತಿಯನ್ನು ವಿಸ್ತರಿಸುವ ಅಗತ್ಯವಿದೆ” ಎಂದು ಸಮರ್ಥಿಸಿದರು.


ಇದನ್ನೂ ಓದಿರಿ: ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂಲಬೂತ ಹಕ್ಕುಗಳನ್ನು ಕಸಿಯುವ ಈ ಮಸೂದೆಯನ್ನು ಒಕ್ಕೂಟ ಸರ್ಕಾರವು ಕೂಡಲೇ ವಾಪಸು ಪಡೆಯಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...