Homeಮುಖಪುಟಆರೋಪಿಯ ಜೈವಿಕ ವಿವರ ಸಂಗ್ರಹಿಸುವ ಮಸೂದೆ ಮಂಡಿಸಿದ ಕೇಂದ್ರ; ಸಂವಿಧಾನ ಉಲ್ಲಂಘನೆ ಎಂದ ಪ್ರತಿಪಕ್ಷಗಳು

ಆರೋಪಿಯ ಜೈವಿಕ ವಿವರ ಸಂಗ್ರಹಿಸುವ ಮಸೂದೆ ಮಂಡಿಸಿದ ಕೇಂದ್ರ; ಸಂವಿಧಾನ ಉಲ್ಲಂಘನೆ ಎಂದ ಪ್ರತಿಪಕ್ಷಗಳು

- Advertisement -
- Advertisement -

ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಕ್ರಿಮಿನಲ್ ಪ್ರೊಸೀಜರ್ (ಗುರುತಿಸುವಿಕೆ) ಮಸೂದೆ, 2022 ಪರಿಚಯಿಸಿದೆ. ಈ ಮಸೂದೆ ಸಂವಿಧಾನದ ಎಲ್ಲೆಗಳನ್ನು ಮೀರಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಅಪರಾಧಿ, ಬಂಧಿತ ಅಥವಾ ಬಂಧನಕ್ಕೊಳಗಾದವರ ಬೆರಳಚ್ಚುಗಳು, ಹೆಜ್ಜೆಗುರುತುಗಳು, ತಾಳೆ ಗುರುತು, ಫೋಟೋಗಳು, ಕಣ್ಣಿನ ಸ್ಕ್ಯಾನ್‌, ದೈಹಿಕ ಮತ್ತು ಜೈವಿಕ ಮಾದರಿಗಳು, ವರ್ತನೆಯ ಗುಣಲಕ್ಷಣಗಳು, ಸಹಿ ಮತ್ತು ಕೈಬರಹ ಸೇರಿದಂತೆ ಹಲವು ಸಂಗತಿಗಳ ‘ಅಳತೆಗಳನ್ನು’ (measurements) ಸಂಗ್ರಹಿಸಿಕೊಳ್ಳಲು ಪೊಲೀಸರಿಗೆ ಅಧಿಕಾರವನ್ನು ಈ ಮಸೂದೆ ನೀಡುತ್ತಿದೆ.

ಆರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ಪಟ್ಟಿ ಮಾಡಲಾದ ಈ ಮಸೂದೆಯನ್ನು ಅಂತಿಮವಾಗಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಮಂಡಿಸಿದ್ದಾರೆ.

ಸ್ವಯಂ ದೋಷಾರೋಪಣೆಗೆ ಸಂಬಂಧಿಸಿದಂತೆ ಸಂವಿಧಾನದ ವಿಧಿ 20(3), ಜೀವನ ಮತ್ತು ಸ್ವಾತಂತ್ರ್ಯದ ರಕ್ಷಣೆಗೆ ಸಂಬಂಧಿಸಿದ 21ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ನಿಂದ ವಿಧಿಸಲ್ಪಟ್ಟ ಸುರಕ್ಷತೆ ಸಂಬಂಧಿಸಿದ ಸಾಂವಿಧಾನಿಕ ನಿಬಂಧನೆಗಳಿಗೆ ವಿರುದ್ಧವಾಗಿ ಈ ಮಸೂದೆ ಇದೆ ಎಂದು ವಿರೋಧ ಪಕ್ಷದ ಸಂಸದರು ಧ್ವನಿ ಎತ್ತಿದ್ದಾರೆ.

ಅಸ್ತಿತ್ವದಲ್ಲಿರುವ ಕಾನೂನಿನ ವ್ಯಾಪ್ತಿಯನ್ನು ವಿಸ್ತರಿಸಲು ಈ ಮಸೂದೆ ಪ್ರಯತ್ನಿಸುತ್ತದೆ. ಕೈದಿಗಳ ಗುರುತಿಸುವಿಕೆ ಕಾಯಿದೆ, 1920ರ ಅಡಿಯಲ್ಲಿ ಕೇವಲ ಬೆರಳಿನ ಗುರುತು, ಹೆಜ್ಜೆ ಗುರುತು ಇತ್ಯಾದಿಗಳ ‘ಅಳತೆಗಳನ್ನು’ ಪಡೆದುಕೊಳ್ಳಲು ಅವಕಾಶವಿದೆ. ಆದರೆ ಇವುಗಳನ್ನು ತೆಗೆದುಕೊಳ್ಳಬೇಕಾದರೆ ಕನಿಷ್ಠ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಆರೋಪಿ ಒಳಪಟ್ಟಿರಬೇಕು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕಾಗಿ ಅಥವಾ ಏಳು ವರ್ಷಗಳ ಕನಿಷ್ಠ ಶಿಕ್ಷೆಯನ್ನು ಹೊಂದಿರುವ ಅಪರಾಧಕ್ಕಾಗಿ ಆರೋಪಿಯನ್ನು ಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ, “ಜೈವಿಕ ಮಾದರಿಗಳಿಗೆ” ಕಡ್ಡಾಯ ಒಪ್ಪಿಗೆಯ ರೂಪದಲ್ಲಿ ಮಾತ್ರ ಕಾನೂನಿನಲ್ಲಿ ವಿನಾಯಿತಿ ನೀಡಲಾಗಿದೆ.

ಮಸೂದೆಯು ಪೊಲೀಸ್ ಠಾಣೆಗಳ ಉಸ್ತುವಾರಿ ಅಥವಾ ಹೆಡ್ ಕಾನ್‌ಸ್ಟೇಬಲ್‌ ಶ್ರೇಣಿಗಿಂತ ಕೆಳಗಿಲ್ಲದ ಅಧಿಕಾರಿಗಳಿಗೆ “ಮೆಜರ್‌ಮೆಂಟ್ಸ್‌‌” ತೆಗೆದುಕೊಳ್ಳಲು ಅಧಿಕಾರ ನೀಡುತ್ತದೆ. ತೆಗೆದುಕೊಂಡ ಅಳತೆಗಳ ದಾಖಲೆಗಳನ್ನು ಸಂಗ್ರಹಣೆಯ ದಿನಾಂಕದಿಂದ 75 ವರ್ಷಗಳವರೆಗೆ ಉಳಿಸಿಕೊಳ್ಳಲಾಗುತ್ತದೆ.

ಪ್ರಸ್ತುತ ಕಾನೂನು ಠಾಣೆಗಳ ಉಸ್ತುವಾರಿ ಅಧಿಕಾರಿಗಳು, ತನಿಖೆ ನಡೆಸುವವರು ಅಥವಾ ಸಬ್-ಇನ್ಸ್‌ಪೆಕ್ಟರ್ ಶ್ರೇಣಿಗಿಂತ ಕಡಿಮೆಯಿಲ್ಲದ ಇತರರನ್ನು ಒಳಗೊಂಡಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ರ ವಿಭಾಗ 53 ಅಥವಾ ವಿಭಾಗ 53Aರ ಪ್ರಕಾರ “ಅಳತೆಗಳು” ಎಂಬ ಪದವು- ಬೆರಳಿನ ಗುರುತು, ಪಾದ-ಮುದ್ರಿತ ಗುರುತು, ಛಾಯಾಚಿತ್ರಗಳು, ಕಣ್ಣಿನ ಗುರುತು, ಭೌತಿಕ, ಜೈವಿಕ ಮಾದರಿಗಳು ಮತ್ತು ಅವುಗಳ ವಿಶ್ಲೇಷಣೆ, ಸಹಿಗಳು, ಕೈಬರಹ ಅಥವಾ ಉಲ್ಲೇಖಿಸಲಾದ ಯಾವುದೇ ಇತರ ಪರೀಕ್ಷೆಯನ್ನು ಸೂಚಿಸುತ್ತದೆ.

ವಿರೋಧ ಪಕ್ಷದ ನಾಯಕತ್ವ ವಹಿಸಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಮಸೂದೆಯು ಸಂವಿಧಾನದ 20(3) ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ. ಸದನದ ಶಾಸಕಾಂಗ ವ್ಯಾಪ್ತಿಯನ್ನು ಮೀರಿದೆ ಎಂದು ದೂರಿದ್ದಾರೆ.

ಮಸೂದೆಯ ಷರತ್ತು 2 (i) (b) ನಲ್ಲಿರುವ ‘ಜೈವಿಕ ಮಾದರಿಗಳು ಮತ್ತು ಅವುಗಳ ವಿಶ್ಲೇಷಣೆ’ ಎಂಬ ಪದಗಳು ನಾರ್ಕೋ ವಿಶ್ಲೇಷಣೆ ಮತ್ತು ಬ್ರೈನ್ ಮ್ಯಾಪಿಂಗ್‌ಗೆ ವಿಸ್ತರಿಸಬಹುದು. ಅದನ್ನು ಬಲವಂತವಾಗಿ ಮಾಡಿದಾಗ ಸಂವಿಧಾನದ 20 (3)ನೇ ವಿಧಿಯನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ವಿರೋಧಿಸಿದರು.

ಸಂಸದ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಕಟುವಾಗಿ ವಿರೋಧಿಸಿದರು. “ಪ್ರಸ್ತುತ ಮಸೂದೆಯು…ವಿಚಾರಣೆಯಲ್ಲಿರುವ ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ಅಳತೆಗಳನ್ನು ತೆಗೆದುಕೊಳ್ಳಲು ಪೋಲೀಸ್ ಮತ್ತು ನ್ಯಾಯಾಲಯಕ್ಕೆ ಅಧಿಕಾರ ನೀಡಲು ಬಯಸುತ್ತದೆ” ಎಂದು ಟೀಕಿಸಿದ್ದಾರೆ.

ಆರ್‌ಎಸ್‌ಪಿ ಸದಸ್ಯ ಎನ್‌ಕೆ ಪ್ರೇಮಚಂದ್ರನ್ ಅವರು ವಾಗ್ದಾಳಿ ನಡೆಸಿದ್ದು, “ಇದು ಕಠಿಣ ಕಾನೂನು ಹಾಗೂ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆ” ಎಂದು ಬಣ್ಣಿಸಿದರು. “ಯಾವುದೇ ನಿಜವಾದ ಬೇಡಿಕೆಗಾಗಿ ನಾಗರಿಕ ಹಕ್ಕುಗಳ ರಕ್ಷಣೆಗಾಗಿ ಹೋರಾಟ ಮಾಡಿದಾಗ ನನ್ನನ್ನು ಬಂಧಿಸಿದರೆ ಮತ್ತು ನನ್ನ ವಿರುದ್ಧ ಎಫ್‌ಐಆರ್ ಅನ್ನು ದಾಖಲಿಸಲು ಮುಂದಾದರೆ, ನಂತರ ಡಿಎನ್‌ಎ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಇದು ಏನು? ಇದು ವ್ಯಕ್ತಿಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಈ ಮಸೂದೆಯ ಉದ್ದೇಶವೇನು?” ಎಂದು ಕೇಳಿದರು.

ಟಿಎಂಸಿ ಸಂಸದರಾದ ಸೌಗತಾ ರೇ ಮಾತನಾಡಿ, “ಜೈವಿಕ ಮಾದರಿಗಳನ್ನು ತೆಗೆದುಕೊಳ್ಳಲು, ಐರಿಸ್ ಸ್ಕ್ಯಾನ್ ತೆಗೆದುಕೊಳ್ಳಲು ಅವಕಾಶ ನೀಡುವ, ನಾರ್ಕೋ ವಿಶ್ಲೇಷಣೆಗೆ ಅನುಮತಿ ನೀಡುವ ಈ ಕಾನೂನು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಪ್ರತಿಪಾದಿಸಿದರು. “ಕೇಂದ್ರ ಗೃಹ ಸಚಿವರು ಸದನಕ್ಕೆ ಬಂದು ವಿಧೇಯಕದ ನಿಬಂಧನೆಗಳನ್ನು ವಿವರಿಸಬೇಕು” ಎಂದು ಮನವಿ ಮಾಡಿದರು.

ಪ್ರತಿಪಕ್ಷಗಳ ಆತಂಕವನ್ನು ನಿವಾರಿಸಲು ಪ್ರಯತ್ನಿಸುತ್ತಿರುವ ಸಚಿವ ಅಜಯ್‌ ಮಿಶ್ರಾ, “ಈಗಿರುವ ಕಾನೂನು 102 ವರ್ಷಗಳಷ್ಟು ಹಳೆಯದಾಗಿದೆ. ಬೆರಳಚ್ಚು ಮತ್ತು ಹೆಜ್ಜೆಗುರುತುಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡಿದೆ. ಈ ಎಲ್ಲಾ ವರ್ಷಗಳಲ್ಲಿ ಜಗತ್ತಿನಲ್ಲಿ ಅನೇಕ ಬದಲಾವಣೆಗಳು ಸಂಭವಿಸಿವೆ. ತಂತ್ರಜ್ಞಾನವು ಅಪ್‌ಗ್ರೇಡ್ ಆಗಿದೆ. ವೈಜ್ಞಾನಿಕ ಪ್ರಕ್ರಿಯೆಗಳು ಹೆಚ್ಚಿವೆ. ಅಪರಾಧಗಳ ಪ್ರವೃತ್ತಿಯೂ ಹೆಚ್ಚಾಗಿದೆ. ಹೀಗಾಗಿ ಪ್ರಸ್ತುತ ಕಾನೂನಿನ ವ್ಯಾಪ್ತಿಯನ್ನು ವಿಸ್ತರಿಸುವ ಅಗತ್ಯವಿದೆ” ಎಂದು ಸಮರ್ಥಿಸಿದರು.


ಇದನ್ನೂ ಓದಿರಿ: ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂಲಬೂತ ಹಕ್ಕುಗಳನ್ನು ಕಸಿಯುವ ಈ ಮಸೂದೆಯನ್ನು ಒಕ್ಕೂಟ ಸರ್ಕಾರವು ಕೂಡಲೇ ವಾಪಸು ಪಡೆಯಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....