Homeಮುಖಪುಟಆರೋಪಿಯ ಜೈವಿಕ ವಿವರ ಸಂಗ್ರಹಿಸುವ ಮಸೂದೆ ಮಂಡಿಸಿದ ಕೇಂದ್ರ; ಸಂವಿಧಾನ ಉಲ್ಲಂಘನೆ ಎಂದ ಪ್ರತಿಪಕ್ಷಗಳು

ಆರೋಪಿಯ ಜೈವಿಕ ವಿವರ ಸಂಗ್ರಹಿಸುವ ಮಸೂದೆ ಮಂಡಿಸಿದ ಕೇಂದ್ರ; ಸಂವಿಧಾನ ಉಲ್ಲಂಘನೆ ಎಂದ ಪ್ರತಿಪಕ್ಷಗಳು

- Advertisement -
- Advertisement -

ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ ಕ್ರಿಮಿನಲ್ ಪ್ರೊಸೀಜರ್ (ಗುರುತಿಸುವಿಕೆ) ಮಸೂದೆ, 2022 ಪರಿಚಯಿಸಿದೆ. ಈ ಮಸೂದೆ ಸಂವಿಧಾನದ ಎಲ್ಲೆಗಳನ್ನು ಮೀರಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಅಪರಾಧಿ, ಬಂಧಿತ ಅಥವಾ ಬಂಧನಕ್ಕೊಳಗಾದವರ ಬೆರಳಚ್ಚುಗಳು, ಹೆಜ್ಜೆಗುರುತುಗಳು, ತಾಳೆ ಗುರುತು, ಫೋಟೋಗಳು, ಕಣ್ಣಿನ ಸ್ಕ್ಯಾನ್‌, ದೈಹಿಕ ಮತ್ತು ಜೈವಿಕ ಮಾದರಿಗಳು, ವರ್ತನೆಯ ಗುಣಲಕ್ಷಣಗಳು, ಸಹಿ ಮತ್ತು ಕೈಬರಹ ಸೇರಿದಂತೆ ಹಲವು ಸಂಗತಿಗಳ ‘ಅಳತೆಗಳನ್ನು’ (measurements) ಸಂಗ್ರಹಿಸಿಕೊಳ್ಳಲು ಪೊಲೀಸರಿಗೆ ಅಧಿಕಾರವನ್ನು ಈ ಮಸೂದೆ ನೀಡುತ್ತಿದೆ.

ಆರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರಿನಲ್ಲಿ ಪಟ್ಟಿ ಮಾಡಲಾದ ಈ ಮಸೂದೆಯನ್ನು ಅಂತಿಮವಾಗಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ಮಂಡಿಸಿದ್ದಾರೆ.

ಸ್ವಯಂ ದೋಷಾರೋಪಣೆಗೆ ಸಂಬಂಧಿಸಿದಂತೆ ಸಂವಿಧಾನದ ವಿಧಿ 20(3), ಜೀವನ ಮತ್ತು ಸ್ವಾತಂತ್ರ್ಯದ ರಕ್ಷಣೆಗೆ ಸಂಬಂಧಿಸಿದ 21ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ನಿಂದ ವಿಧಿಸಲ್ಪಟ್ಟ ಸುರಕ್ಷತೆ ಸಂಬಂಧಿಸಿದ ಸಾಂವಿಧಾನಿಕ ನಿಬಂಧನೆಗಳಿಗೆ ವಿರುದ್ಧವಾಗಿ ಈ ಮಸೂದೆ ಇದೆ ಎಂದು ವಿರೋಧ ಪಕ್ಷದ ಸಂಸದರು ಧ್ವನಿ ಎತ್ತಿದ್ದಾರೆ.

ಅಸ್ತಿತ್ವದಲ್ಲಿರುವ ಕಾನೂನಿನ ವ್ಯಾಪ್ತಿಯನ್ನು ವಿಸ್ತರಿಸಲು ಈ ಮಸೂದೆ ಪ್ರಯತ್ನಿಸುತ್ತದೆ. ಕೈದಿಗಳ ಗುರುತಿಸುವಿಕೆ ಕಾಯಿದೆ, 1920ರ ಅಡಿಯಲ್ಲಿ ಕೇವಲ ಬೆರಳಿನ ಗುರುತು, ಹೆಜ್ಜೆ ಗುರುತು ಇತ್ಯಾದಿಗಳ ‘ಅಳತೆಗಳನ್ನು’ ಪಡೆದುಕೊಳ್ಳಲು ಅವಕಾಶವಿದೆ. ಆದರೆ ಇವುಗಳನ್ನು ತೆಗೆದುಕೊಳ್ಳಬೇಕಾದರೆ ಕನಿಷ್ಠ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಆರೋಪಿ ಒಳಪಟ್ಟಿರಬೇಕು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕಾಗಿ ಅಥವಾ ಏಳು ವರ್ಷಗಳ ಕನಿಷ್ಠ ಶಿಕ್ಷೆಯನ್ನು ಹೊಂದಿರುವ ಅಪರಾಧಕ್ಕಾಗಿ ಆರೋಪಿಯನ್ನು ಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ, “ಜೈವಿಕ ಮಾದರಿಗಳಿಗೆ” ಕಡ್ಡಾಯ ಒಪ್ಪಿಗೆಯ ರೂಪದಲ್ಲಿ ಮಾತ್ರ ಕಾನೂನಿನಲ್ಲಿ ವಿನಾಯಿತಿ ನೀಡಲಾಗಿದೆ.

ಮಸೂದೆಯು ಪೊಲೀಸ್ ಠಾಣೆಗಳ ಉಸ್ತುವಾರಿ ಅಥವಾ ಹೆಡ್ ಕಾನ್‌ಸ್ಟೇಬಲ್‌ ಶ್ರೇಣಿಗಿಂತ ಕೆಳಗಿಲ್ಲದ ಅಧಿಕಾರಿಗಳಿಗೆ “ಮೆಜರ್‌ಮೆಂಟ್ಸ್‌‌” ತೆಗೆದುಕೊಳ್ಳಲು ಅಧಿಕಾರ ನೀಡುತ್ತದೆ. ತೆಗೆದುಕೊಂಡ ಅಳತೆಗಳ ದಾಖಲೆಗಳನ್ನು ಸಂಗ್ರಹಣೆಯ ದಿನಾಂಕದಿಂದ 75 ವರ್ಷಗಳವರೆಗೆ ಉಳಿಸಿಕೊಳ್ಳಲಾಗುತ್ತದೆ.

ಪ್ರಸ್ತುತ ಕಾನೂನು ಠಾಣೆಗಳ ಉಸ್ತುವಾರಿ ಅಧಿಕಾರಿಗಳು, ತನಿಖೆ ನಡೆಸುವವರು ಅಥವಾ ಸಬ್-ಇನ್ಸ್‌ಪೆಕ್ಟರ್ ಶ್ರೇಣಿಗಿಂತ ಕಡಿಮೆಯಿಲ್ಲದ ಇತರರನ್ನು ಒಳಗೊಂಡಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ರ ವಿಭಾಗ 53 ಅಥವಾ ವಿಭಾಗ 53Aರ ಪ್ರಕಾರ “ಅಳತೆಗಳು” ಎಂಬ ಪದವು- ಬೆರಳಿನ ಗುರುತು, ಪಾದ-ಮುದ್ರಿತ ಗುರುತು, ಛಾಯಾಚಿತ್ರಗಳು, ಕಣ್ಣಿನ ಗುರುತು, ಭೌತಿಕ, ಜೈವಿಕ ಮಾದರಿಗಳು ಮತ್ತು ಅವುಗಳ ವಿಶ್ಲೇಷಣೆ, ಸಹಿಗಳು, ಕೈಬರಹ ಅಥವಾ ಉಲ್ಲೇಖಿಸಲಾದ ಯಾವುದೇ ಇತರ ಪರೀಕ್ಷೆಯನ್ನು ಸೂಚಿಸುತ್ತದೆ.

ವಿರೋಧ ಪಕ್ಷದ ನಾಯಕತ್ವ ವಹಿಸಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ಮಸೂದೆಯು ಸಂವಿಧಾನದ 20(3) ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ. ಸದನದ ಶಾಸಕಾಂಗ ವ್ಯಾಪ್ತಿಯನ್ನು ಮೀರಿದೆ ಎಂದು ದೂರಿದ್ದಾರೆ.

ಮಸೂದೆಯ ಷರತ್ತು 2 (i) (b) ನಲ್ಲಿರುವ ‘ಜೈವಿಕ ಮಾದರಿಗಳು ಮತ್ತು ಅವುಗಳ ವಿಶ್ಲೇಷಣೆ’ ಎಂಬ ಪದಗಳು ನಾರ್ಕೋ ವಿಶ್ಲೇಷಣೆ ಮತ್ತು ಬ್ರೈನ್ ಮ್ಯಾಪಿಂಗ್‌ಗೆ ವಿಸ್ತರಿಸಬಹುದು. ಅದನ್ನು ಬಲವಂತವಾಗಿ ಮಾಡಿದಾಗ ಸಂವಿಧಾನದ 20 (3)ನೇ ವಿಧಿಯನ್ನು ಉಲ್ಲಂಘಿಸಿದಂತಾಗುತ್ತದೆ” ಎಂದು ವಿರೋಧಿಸಿದರು.

ಸಂಸದ ಅಧೀರ್ ರಂಜನ್ ಚೌಧರಿ ಅವರು ಮಸೂದೆಯನ್ನು ಕಟುವಾಗಿ ವಿರೋಧಿಸಿದರು. “ಪ್ರಸ್ತುತ ಮಸೂದೆಯು…ವಿಚಾರಣೆಯಲ್ಲಿರುವ ಅಥವಾ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಗಳ ಅಳತೆಗಳನ್ನು ತೆಗೆದುಕೊಳ್ಳಲು ಪೋಲೀಸ್ ಮತ್ತು ನ್ಯಾಯಾಲಯಕ್ಕೆ ಅಧಿಕಾರ ನೀಡಲು ಬಯಸುತ್ತದೆ” ಎಂದು ಟೀಕಿಸಿದ್ದಾರೆ.

ಆರ್‌ಎಸ್‌ಪಿ ಸದಸ್ಯ ಎನ್‌ಕೆ ಪ್ರೇಮಚಂದ್ರನ್ ಅವರು ವಾಗ್ದಾಳಿ ನಡೆಸಿದ್ದು, “ಇದು ಕಠಿಣ ಕಾನೂನು ಹಾಗೂ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆ” ಎಂದು ಬಣ್ಣಿಸಿದರು. “ಯಾವುದೇ ನಿಜವಾದ ಬೇಡಿಕೆಗಾಗಿ ನಾಗರಿಕ ಹಕ್ಕುಗಳ ರಕ್ಷಣೆಗಾಗಿ ಹೋರಾಟ ಮಾಡಿದಾಗ ನನ್ನನ್ನು ಬಂಧಿಸಿದರೆ ಮತ್ತು ನನ್ನ ವಿರುದ್ಧ ಎಫ್‌ಐಆರ್ ಅನ್ನು ದಾಖಲಿಸಲು ಮುಂದಾದರೆ, ನಂತರ ಡಿಎನ್‌ಎ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಇದು ಏನು? ಇದು ವ್ಯಕ್ತಿಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಈ ಮಸೂದೆಯ ಉದ್ದೇಶವೇನು?” ಎಂದು ಕೇಳಿದರು.

ಟಿಎಂಸಿ ಸಂಸದರಾದ ಸೌಗತಾ ರೇ ಮಾತನಾಡಿ, “ಜೈವಿಕ ಮಾದರಿಗಳನ್ನು ತೆಗೆದುಕೊಳ್ಳಲು, ಐರಿಸ್ ಸ್ಕ್ಯಾನ್ ತೆಗೆದುಕೊಳ್ಳಲು ಅವಕಾಶ ನೀಡುವ, ನಾರ್ಕೋ ವಿಶ್ಲೇಷಣೆಗೆ ಅನುಮತಿ ನೀಡುವ ಈ ಕಾನೂನು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಪ್ರತಿಪಾದಿಸಿದರು. “ಕೇಂದ್ರ ಗೃಹ ಸಚಿವರು ಸದನಕ್ಕೆ ಬಂದು ವಿಧೇಯಕದ ನಿಬಂಧನೆಗಳನ್ನು ವಿವರಿಸಬೇಕು” ಎಂದು ಮನವಿ ಮಾಡಿದರು.

ಪ್ರತಿಪಕ್ಷಗಳ ಆತಂಕವನ್ನು ನಿವಾರಿಸಲು ಪ್ರಯತ್ನಿಸುತ್ತಿರುವ ಸಚಿವ ಅಜಯ್‌ ಮಿಶ್ರಾ, “ಈಗಿರುವ ಕಾನೂನು 102 ವರ್ಷಗಳಷ್ಟು ಹಳೆಯದಾಗಿದೆ. ಬೆರಳಚ್ಚು ಮತ್ತು ಹೆಜ್ಜೆಗುರುತುಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡಿದೆ. ಈ ಎಲ್ಲಾ ವರ್ಷಗಳಲ್ಲಿ ಜಗತ್ತಿನಲ್ಲಿ ಅನೇಕ ಬದಲಾವಣೆಗಳು ಸಂಭವಿಸಿವೆ. ತಂತ್ರಜ್ಞಾನವು ಅಪ್‌ಗ್ರೇಡ್ ಆಗಿದೆ. ವೈಜ್ಞಾನಿಕ ಪ್ರಕ್ರಿಯೆಗಳು ಹೆಚ್ಚಿವೆ. ಅಪರಾಧಗಳ ಪ್ರವೃತ್ತಿಯೂ ಹೆಚ್ಚಾಗಿದೆ. ಹೀಗಾಗಿ ಪ್ರಸ್ತುತ ಕಾನೂನಿನ ವ್ಯಾಪ್ತಿಯನ್ನು ವಿಸ್ತರಿಸುವ ಅಗತ್ಯವಿದೆ” ಎಂದು ಸಮರ್ಥಿಸಿದರು.


ಇದನ್ನೂ ಓದಿರಿ: ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂಲಬೂತ ಹಕ್ಕುಗಳನ್ನು ಕಸಿಯುವ ಈ ಮಸೂದೆಯನ್ನು ಒಕ್ಕೂಟ ಸರ್ಕಾರವು ಕೂಡಲೇ ವಾಪಸು ಪಡೆಯಬೇಕು.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...