Homeಮುಖಪುಟಕೊರೊನಾ ವಿಚಾರದಲ್ಲಿ ಕೇಂದ್ರ ನಿರ್ಲಕ್ಷ್ಯ ಮತ್ತು ಅತಿ ಆತ್ಮವಿಶ್ವಾಸ ಹೊಂದಿದೆ-ರಾಹುಲ್ ಗಾಂಧಿ

ಕೊರೊನಾ ವಿಚಾರದಲ್ಲಿ ಕೇಂದ್ರ ನಿರ್ಲಕ್ಷ್ಯ ಮತ್ತು ಅತಿ ಆತ್ಮವಿಶ್ವಾಸ ಹೊಂದಿದೆ-ರಾಹುಲ್ ಗಾಂಧಿ

- Advertisement -
- Advertisement -

ಕೊರೊನಾ ಸಾಕ್ರಮಿಕ ಇನ್ನೂ ಮುಗಿದಿಲ್ಲ, ಆದರೆ ಅದನ್ನು ನಿಭಾಯಿಸುವ ಬಗ್ಗೆ ಕೇಂದ್ರ ಸರ್ಕಾರವು ಅತ್ಯಂತ ನಿರ್ಲಕ್ಷ್ಯ ವಹಿಸುತ್ತಿದೆ ಮತ್ತು ಅತಿಯಾದ ಆತ್ಮವಿಶ್ವಾಸವನ್ನು ಹೊಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತದಲ್ಲಿ ಕೊರೊನಾದ ಆಫ್ರಿಕಾ ಮತ್ತು ಬ್ರೆಜಿಲಿಯನ್ ರೂಪಾಂತರ ವೈರಸ್‌ಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯ ಈ ಹೇಳಿಕೆಯು ಹೊರಬಂದಿದೆ.

“ಕೇಂದ್ರ ಸರ್ಕಾರವು ಕೊರೊನಾ ಬಗ್ಗೆ ತೀವ್ರ ನಿರ್ಲಕ್ಷ್ಯ ಮತ್ತು ಅತಿಯಾದ ಆತ್ಮವಿಶ್ವಾಸವನ್ನು ಹೊಂದಿದೆ. ಆದರೆ ಅದು ಇನ್ನೂ ಮುಗಿದಿಲ್ಲ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಣ ಎಲ್ಲಿಂದ ಬರುತ್ತದೆ? ಗುಜರಾತಿನ ವ್ಯಾಪಾರಿಗಳಿಂದ ಬರುತ್ತದೆ: ರಾಹುಲ್ ಗಾಂಧಿ ಹೀಗೆ ಹೇಳಿದ್ದೇಕೆ?

 

ಭಾರತದಲ್ಲಿ ಮೊದಲ ಬಾರಿಗೆ, ದಕ್ಷಿಣ ಆಫ್ರಿಕಾದ ರೂಪಾಂತರಿ SARS-CoV-2 ವೈರಸ್ ಇರುವ ನಾಲ್ಕು ಜನರು ಮತ್ತು ಬ್ರೆಜಿಲ್ ರೂಪಾಂತರಿ ವೈರಸ್ ಇರುವ ಒಬ್ಬರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಭಾರತಕ್ಕೆ ಹಿಂದಿರುಗಿದ ನಾಲ್ಕು ಜನರಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರಿ ವೈರಸ್ ಪತ್ತೆಯಾಗಿದೆ. ಇದರಲ್ಲಿ ಒಬ್ಬರು ಅಂಗೋಲಾದಿಂದ, ಒಬ್ಬರು ಟಾಂಜಾನಿಯಾದಿಂದ ಒಬ್ಬರು ಮತ್ತು ಇಬ್ಬರು ದಕ್ಷಿಣ ಆಫ್ರಿಕಾದಿಂದ ಜನವರಿಯಯಲ್ಲಿ ಬಂದಿದ್ದರು ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ ಹೇಳಿದ್ದಾರೆ.

11,610 ಹೊಸ ಪ್ರಕರಣಗಳೊಂದಿಗೆ, ಭಾರತದ ಕೊರೊನಾ ಸಂಖ್ಯೆ ಬುಧವಾರ 1,09,37,320 ಕ್ಕೆ ಏರಿದೆ. 1,06,44,858 ರಷ್ಟು ಜನರು ಸಾಂಕ್ರಮಿಕದಿಂದ ಚೇತರಿಕೆ ಕಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾಂಕ್ರಮಿಕದಿಂದಾಗಿ 100 ಜನರು ಸಾವಿಗೀಡಾಗಿದ್ದಾರೆ. ಸಾಂಕ್ರಮಿಕದಿಂದಾಗಿ ದೇಶದಲ್ಲಿ ಇದುವರೆಗೂ 1,55,913 ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....