Homeಕರ್ನಾಟಕRSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

RSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ ಎಂದು ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡಾ.ಬಸವರಾಜ ಡೋಣೂರ ತಿಳಿಸಿದ್ದಾರೆ.

- Advertisement -
- Advertisement -

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು RSS ಗಣವೇಷ ಧರಿಸಿ, ಲಾಠಿ ಹಿಡಿದು ಪೋಸು ನೀಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪ್ರಾಧ್ಯಾಪಕರು ತಮ್ಮ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಕೇಂದ್ರೀಯ ವಿ.ವಿಯ ಕುಲಸಚಿವರು ಪ್ರಾಧ್ಯಾಪಕರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕರುಗಳಾದ ಸಾರ್ವಜನಿಕ ಆಡಳಿತ ವಿಭಾಗದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು ವಿದ್ಯಾರ್ಥಿಯೊರ್ವ ತೆಗೆದ ಸೆಲ್ಫಿಗೆ ಗಣವೇ‍ಷದಲ್ಲಿ ಲಾಠಿ ಹಿಡಿದು ಪೋಸು ನೀಡಿದ್ದಾರೆ.

ಅದು ಇತ್ತೀಚೆಗೆ ವಿವಿಯ ಆವರಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದ ವೇಳೆ ತೆಗೆದ ಫೋಟೊ ಆಗಿದ್ದು, ಪ್ರಾಧ್ಯಾಪಕರು ಸಹ ಪಥಸಂಚಲನ ಮತ್ತು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಡೋಣೂರರವರು, “ಆ ಫೋಟೊ ವಿಶ್ವವಿದ್ಯಾಲಯದ ಒಳಗೆ ತೆಗೆದುಕೊಂಡ ಫೋಟೊ ಅಲ್ಲ, ಬದಲಿಗೆ ವಿಶ್ವವಿದ್ಯಾಲಯದ ಹೊರಗೆ ತೆಗೆದುಕೊಂಡಿರುವುದರಿಂದ ಅದು ನಮಗೆ ಸಂಬಂಧಿಸಿಲ್ಲ” ಎಂದರು.

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಭಾಗವಹಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅನೇಕ ಧಾರ್ಮಿಕ ಸಂಘಟನೆಗಳು, ಸಂಸ್ಥೆಗಳು ದೇಶದಲ್ಲಿ ಕೆಲಸ ಮಾಡುತ್ತಿವೆ. ನಾವು ವಿಶ್ವವಿದ್ಯಾಲಯದಿಂದ ಕೇಂದ್ರ ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಧಾರ್ಮಿಕ ಕಾರ್ಯಕ್ರಮವಾದ ಹಜ್ ಯಾತ್ರೆಗೆ ಹೋಗುವವರಿಗೆ ರಜೆ ಕೊಟ್ಟು ಕಳಿಸುತ್ತೇವೆ. ಯಾರೋ ತೀರ್ಥಯಾತ್ರೆಗೆ ಹೋಗುವವರಿಗೆ, ಯಾವುದೇ ಸಂಘಟನೆಯ ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಅದು ಸರ್ಕಾರದ ಮಟ್ಟದಲ್ಲಿ ಯೋಚನೆ ಮಾಡಬೇಕೆನೊ” ಎಂದರು.

ಧಾರ್ಮಿಕ ಕಾರ್ಯಕ್ರಮಗಳು ಬೇರೆ ಮತ್ತು ಆರ್‌ಎಸ್‌ಎಸ್‌ ಬೇರೆ. ಇದು ಸಮಾಜದಲ್ಲಿ ದ್ವೇಷ ಹರಡುತ್ತಿದೆ, ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂಬ ಆರೋಪವಿರುವಾಗ ಅವರ ಕಾರ್ಯಕ್ರಮಗಳಲ್ಲಿ ಪ್ರಾಧ್ಯಾಪಕರು ಭಾಗವಹಿಸುವುದು ಸೇವಾನಿಯಮಗಳ ಉಲ್ಲಂಘನೆಯಲ್ಲವೆ ಎಂದು ಡಾ.ಬಸವರಾಜ ಡೋಣೂರರವರನ್ನು ಪ್ರಶ್ನಿಸಲಾಯಿತು. ಅದಕ್ಕೆ ಅವರು, “ನನ್ನ ತಿಳಿದಂತೆ ಸೇವಾ ನಿಯಮಗಳ ಉಲ್ಲಂಘನೆಯಾಗುವುದಿಲ್ಲ. ಯಾವುದೇ ಒಂದು ಬ್ಯಾನ್ ಆದ, ದೇಶ ವಿರೋಧಿಯಾದ ಚಟುವಟಿಕೆಗಳಲ್ಲಿ ಭಾಗಿಯಾದ ಸಂಘಟನೆಗಳಿದ್ದರೆ, ಭಯೋತ್ಪಾದಕ ಸಂಘಟನೆಗಳ ಕಾರ್ಯಕ್ರಮಗಳ ಭಾಗವಹಿಸಬಾರದು. ಆರ್‌ಎಸ್‌ಎಸ್‌ ಅಂತಹ ಸಂಘಟನೆ ಎಂಬದು ಆರೋಪವಷ್ಟೆ. ಒಬ್ಬ ಸರ್ಕಾರಿ ನೌಕರನಾಗಿ ನಾನು ಹಾಗೆ ಮಾತನಾಡಲು ಬರುವುದಿಲ್ಲ. ನಮ್ಮ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಆ ಪ್ರಾಧ್ಯಾಪಕರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ” ಎಂದು ಉತ್ತರಿಸಿದ್ದಾರೆ.

ಡಾ. ಬಸವರಾಜ ಡೋಣೂರ

ಈ ಹಿಂದೆಯೂ ಸಹ ಬಸವರಾಜ ಡೋಣೂರವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಲೆಟರ್‌ ಹೆಡ್‌ನಲ್ಲಿ ಆರ್‌ಎಸ್‌ಎಸ್‌ ಸರಸಂಚಾಲಕ ಮೋಹನ್ ಭಾಗವತ್‌ರವರಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೋರುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.

“ನಾನು ಜನವರಿ 08, 2022ರಂದು ನಾಗಪುರ ಜಿಲ್ಲೆಯ ಕವಿಕುಲಗುರು ಕಾಳಿದಾಸ ಸಂಸ್ಕೃತ ವಿವಿ, ರಾಮ್‌ಟೆಕ್‌ಗೆ ಉಪನ್ಯಾಸ ನೀಡಲು ಬರುತ್ತಿದ್ದೇನೆ. ಇದು ಪೂಜನೀಯ ಗೋಳ್ವಾಲ್ಕರ್ ಅವರ ಹುಟ್ಟೂರು ಕೂಡಾ. ಈ ಸಂದರ್ಭದಲ್ಲಿ ಜನವರಿ 08 ಅಥವಾ 09 ರಂದು ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಯಸಿದ್ದೇನೆ. ನೀವು ಸಮಾಜದ ವಿವಿಧ ವಿಭಾಗಗಳನ್ನು ಆರ್‌ಎಸ್‌ಎಸ್‌ ಮೂಲಕ ತಲುಪಲು ದೇಶಾದ್ಯಂತ ಪ್ರಯಾಣ ಮಾಡುತ್ತಾ ಬ್ಯುಸಿಯಾಗಿದ್ದೀರಿ ಎಂಬುದು ನನಗೆ ಗೊತ್ತು. ಆ ಬ್ಯುಸಿಯ ವೇಳಾಪಟ್ಟಿಯಲ್ಲಿ ಬಿಡುವಾದರೆ ನನ್ನ ಅಪಾಯಿಂಟ್‌ಮೆಂಟ್‌ ಅನ್ನು ದೃಢಪಡಿಸಬೇಕೆಂದು ಈ ಮೂಲಕ ವಿನಯ ಮತ್ತು ಕಾತರದಿಂದ ಕೇಳಿಕೊಳ್ಳುತ್ತೇನೆ” ಎಂದು ಪತ್ರದಲ್ಲಿ ಬರೆದಿದ್ದುದ್ದು ಟೀಕೆಗೆ ಕಾರಣವಾಗಿತ್ತು.

ಇದನ್ನೂ ಓದಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...