Homeಕರ್ನಾಟಕRSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

RSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ ಎಂದು ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡಾ.ಬಸವರಾಜ ಡೋಣೂರ ತಿಳಿಸಿದ್ದಾರೆ.

- Advertisement -
- Advertisement -

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು RSS ಗಣವೇಷ ಧರಿಸಿ, ಲಾಠಿ ಹಿಡಿದು ಪೋಸು ನೀಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪ್ರಾಧ್ಯಾಪಕರು ತಮ್ಮ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಕೇಂದ್ರೀಯ ವಿ.ವಿಯ ಕುಲಸಚಿವರು ಪ್ರಾಧ್ಯಾಪಕರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕರುಗಳಾದ ಸಾರ್ವಜನಿಕ ಆಡಳಿತ ವಿಭಾಗದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು ವಿದ್ಯಾರ್ಥಿಯೊರ್ವ ತೆಗೆದ ಸೆಲ್ಫಿಗೆ ಗಣವೇ‍ಷದಲ್ಲಿ ಲಾಠಿ ಹಿಡಿದು ಪೋಸು ನೀಡಿದ್ದಾರೆ.

ಅದು ಇತ್ತೀಚೆಗೆ ವಿವಿಯ ಆವರಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದ ವೇಳೆ ತೆಗೆದ ಫೋಟೊ ಆಗಿದ್ದು, ಪ್ರಾಧ್ಯಾಪಕರು ಸಹ ಪಥಸಂಚಲನ ಮತ್ತು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಡೋಣೂರರವರು, “ಆ ಫೋಟೊ ವಿಶ್ವವಿದ್ಯಾಲಯದ ಒಳಗೆ ತೆಗೆದುಕೊಂಡ ಫೋಟೊ ಅಲ್ಲ, ಬದಲಿಗೆ ವಿಶ್ವವಿದ್ಯಾಲಯದ ಹೊರಗೆ ತೆಗೆದುಕೊಂಡಿರುವುದರಿಂದ ಅದು ನಮಗೆ ಸಂಬಂಧಿಸಿಲ್ಲ” ಎಂದರು.

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಭಾಗವಹಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅನೇಕ ಧಾರ್ಮಿಕ ಸಂಘಟನೆಗಳು, ಸಂಸ್ಥೆಗಳು ದೇಶದಲ್ಲಿ ಕೆಲಸ ಮಾಡುತ್ತಿವೆ. ನಾವು ವಿಶ್ವವಿದ್ಯಾಲಯದಿಂದ ಕೇಂದ್ರ ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಧಾರ್ಮಿಕ ಕಾರ್ಯಕ್ರಮವಾದ ಹಜ್ ಯಾತ್ರೆಗೆ ಹೋಗುವವರಿಗೆ ರಜೆ ಕೊಟ್ಟು ಕಳಿಸುತ್ತೇವೆ. ಯಾರೋ ತೀರ್ಥಯಾತ್ರೆಗೆ ಹೋಗುವವರಿಗೆ, ಯಾವುದೇ ಸಂಘಟನೆಯ ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಅದು ಸರ್ಕಾರದ ಮಟ್ಟದಲ್ಲಿ ಯೋಚನೆ ಮಾಡಬೇಕೆನೊ” ಎಂದರು.

ಧಾರ್ಮಿಕ ಕಾರ್ಯಕ್ರಮಗಳು ಬೇರೆ ಮತ್ತು ಆರ್‌ಎಸ್‌ಎಸ್‌ ಬೇರೆ. ಇದು ಸಮಾಜದಲ್ಲಿ ದ್ವೇಷ ಹರಡುತ್ತಿದೆ, ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂಬ ಆರೋಪವಿರುವಾಗ ಅವರ ಕಾರ್ಯಕ್ರಮಗಳಲ್ಲಿ ಪ್ರಾಧ್ಯಾಪಕರು ಭಾಗವಹಿಸುವುದು ಸೇವಾನಿಯಮಗಳ ಉಲ್ಲಂಘನೆಯಲ್ಲವೆ ಎಂದು ಡಾ.ಬಸವರಾಜ ಡೋಣೂರರವರನ್ನು ಪ್ರಶ್ನಿಸಲಾಯಿತು. ಅದಕ್ಕೆ ಅವರು, “ನನ್ನ ತಿಳಿದಂತೆ ಸೇವಾ ನಿಯಮಗಳ ಉಲ್ಲಂಘನೆಯಾಗುವುದಿಲ್ಲ. ಯಾವುದೇ ಒಂದು ಬ್ಯಾನ್ ಆದ, ದೇಶ ವಿರೋಧಿಯಾದ ಚಟುವಟಿಕೆಗಳಲ್ಲಿ ಭಾಗಿಯಾದ ಸಂಘಟನೆಗಳಿದ್ದರೆ, ಭಯೋತ್ಪಾದಕ ಸಂಘಟನೆಗಳ ಕಾರ್ಯಕ್ರಮಗಳ ಭಾಗವಹಿಸಬಾರದು. ಆರ್‌ಎಸ್‌ಎಸ್‌ ಅಂತಹ ಸಂಘಟನೆ ಎಂಬದು ಆರೋಪವಷ್ಟೆ. ಒಬ್ಬ ಸರ್ಕಾರಿ ನೌಕರನಾಗಿ ನಾನು ಹಾಗೆ ಮಾತನಾಡಲು ಬರುವುದಿಲ್ಲ. ನಮ್ಮ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಆ ಪ್ರಾಧ್ಯಾಪಕರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ” ಎಂದು ಉತ್ತರಿಸಿದ್ದಾರೆ.

ಡಾ. ಬಸವರಾಜ ಡೋಣೂರ

ಈ ಹಿಂದೆಯೂ ಸಹ ಬಸವರಾಜ ಡೋಣೂರವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಲೆಟರ್‌ ಹೆಡ್‌ನಲ್ಲಿ ಆರ್‌ಎಸ್‌ಎಸ್‌ ಸರಸಂಚಾಲಕ ಮೋಹನ್ ಭಾಗವತ್‌ರವರಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೋರುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.

“ನಾನು ಜನವರಿ 08, 2022ರಂದು ನಾಗಪುರ ಜಿಲ್ಲೆಯ ಕವಿಕುಲಗುರು ಕಾಳಿದಾಸ ಸಂಸ್ಕೃತ ವಿವಿ, ರಾಮ್‌ಟೆಕ್‌ಗೆ ಉಪನ್ಯಾಸ ನೀಡಲು ಬರುತ್ತಿದ್ದೇನೆ. ಇದು ಪೂಜನೀಯ ಗೋಳ್ವಾಲ್ಕರ್ ಅವರ ಹುಟ್ಟೂರು ಕೂಡಾ. ಈ ಸಂದರ್ಭದಲ್ಲಿ ಜನವರಿ 08 ಅಥವಾ 09 ರಂದು ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಯಸಿದ್ದೇನೆ. ನೀವು ಸಮಾಜದ ವಿವಿಧ ವಿಭಾಗಗಳನ್ನು ಆರ್‌ಎಸ್‌ಎಸ್‌ ಮೂಲಕ ತಲುಪಲು ದೇಶಾದ್ಯಂತ ಪ್ರಯಾಣ ಮಾಡುತ್ತಾ ಬ್ಯುಸಿಯಾಗಿದ್ದೀರಿ ಎಂಬುದು ನನಗೆ ಗೊತ್ತು. ಆ ಬ್ಯುಸಿಯ ವೇಳಾಪಟ್ಟಿಯಲ್ಲಿ ಬಿಡುವಾದರೆ ನನ್ನ ಅಪಾಯಿಂಟ್‌ಮೆಂಟ್‌ ಅನ್ನು ದೃಢಪಡಿಸಬೇಕೆಂದು ಈ ಮೂಲಕ ವಿನಯ ಮತ್ತು ಕಾತರದಿಂದ ಕೇಳಿಕೊಳ್ಳುತ್ತೇನೆ” ಎಂದು ಪತ್ರದಲ್ಲಿ ಬರೆದಿದ್ದುದ್ದು ಟೀಕೆಗೆ ಕಾರಣವಾಗಿತ್ತು.

ಇದನ್ನೂ ಓದಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...