Homeಕರ್ನಾಟಕRSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

RSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ ಎಂದು ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡಾ.ಬಸವರಾಜ ಡೋಣೂರ ತಿಳಿಸಿದ್ದಾರೆ.

- Advertisement -
- Advertisement -

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು RSS ಗಣವೇಷ ಧರಿಸಿ, ಲಾಠಿ ಹಿಡಿದು ಪೋಸು ನೀಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪ್ರಾಧ್ಯಾಪಕರು ತಮ್ಮ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಕೇಂದ್ರೀಯ ವಿ.ವಿಯ ಕುಲಸಚಿವರು ಪ್ರಾಧ್ಯಾಪಕರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕರುಗಳಾದ ಸಾರ್ವಜನಿಕ ಆಡಳಿತ ವಿಭಾಗದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು ವಿದ್ಯಾರ್ಥಿಯೊರ್ವ ತೆಗೆದ ಸೆಲ್ಫಿಗೆ ಗಣವೇ‍ಷದಲ್ಲಿ ಲಾಠಿ ಹಿಡಿದು ಪೋಸು ನೀಡಿದ್ದಾರೆ.

ಅದು ಇತ್ತೀಚೆಗೆ ವಿವಿಯ ಆವರಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದ ವೇಳೆ ತೆಗೆದ ಫೋಟೊ ಆಗಿದ್ದು, ಪ್ರಾಧ್ಯಾಪಕರು ಸಹ ಪಥಸಂಚಲನ ಮತ್ತು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಡೋಣೂರರವರು, “ಆ ಫೋಟೊ ವಿಶ್ವವಿದ್ಯಾಲಯದ ಒಳಗೆ ತೆಗೆದುಕೊಂಡ ಫೋಟೊ ಅಲ್ಲ, ಬದಲಿಗೆ ವಿಶ್ವವಿದ್ಯಾಲಯದ ಹೊರಗೆ ತೆಗೆದುಕೊಂಡಿರುವುದರಿಂದ ಅದು ನಮಗೆ ಸಂಬಂಧಿಸಿಲ್ಲ” ಎಂದರು.

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಭಾಗವಹಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅನೇಕ ಧಾರ್ಮಿಕ ಸಂಘಟನೆಗಳು, ಸಂಸ್ಥೆಗಳು ದೇಶದಲ್ಲಿ ಕೆಲಸ ಮಾಡುತ್ತಿವೆ. ನಾವು ವಿಶ್ವವಿದ್ಯಾಲಯದಿಂದ ಕೇಂದ್ರ ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಧಾರ್ಮಿಕ ಕಾರ್ಯಕ್ರಮವಾದ ಹಜ್ ಯಾತ್ರೆಗೆ ಹೋಗುವವರಿಗೆ ರಜೆ ಕೊಟ್ಟು ಕಳಿಸುತ್ತೇವೆ. ಯಾರೋ ತೀರ್ಥಯಾತ್ರೆಗೆ ಹೋಗುವವರಿಗೆ, ಯಾವುದೇ ಸಂಘಟನೆಯ ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಅದು ಸರ್ಕಾರದ ಮಟ್ಟದಲ್ಲಿ ಯೋಚನೆ ಮಾಡಬೇಕೆನೊ” ಎಂದರು.

ಧಾರ್ಮಿಕ ಕಾರ್ಯಕ್ರಮಗಳು ಬೇರೆ ಮತ್ತು ಆರ್‌ಎಸ್‌ಎಸ್‌ ಬೇರೆ. ಇದು ಸಮಾಜದಲ್ಲಿ ದ್ವೇಷ ಹರಡುತ್ತಿದೆ, ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂಬ ಆರೋಪವಿರುವಾಗ ಅವರ ಕಾರ್ಯಕ್ರಮಗಳಲ್ಲಿ ಪ್ರಾಧ್ಯಾಪಕರು ಭಾಗವಹಿಸುವುದು ಸೇವಾನಿಯಮಗಳ ಉಲ್ಲಂಘನೆಯಲ್ಲವೆ ಎಂದು ಡಾ.ಬಸವರಾಜ ಡೋಣೂರರವರನ್ನು ಪ್ರಶ್ನಿಸಲಾಯಿತು. ಅದಕ್ಕೆ ಅವರು, “ನನ್ನ ತಿಳಿದಂತೆ ಸೇವಾ ನಿಯಮಗಳ ಉಲ್ಲಂಘನೆಯಾಗುವುದಿಲ್ಲ. ಯಾವುದೇ ಒಂದು ಬ್ಯಾನ್ ಆದ, ದೇಶ ವಿರೋಧಿಯಾದ ಚಟುವಟಿಕೆಗಳಲ್ಲಿ ಭಾಗಿಯಾದ ಸಂಘಟನೆಗಳಿದ್ದರೆ, ಭಯೋತ್ಪಾದಕ ಸಂಘಟನೆಗಳ ಕಾರ್ಯಕ್ರಮಗಳ ಭಾಗವಹಿಸಬಾರದು. ಆರ್‌ಎಸ್‌ಎಸ್‌ ಅಂತಹ ಸಂಘಟನೆ ಎಂಬದು ಆರೋಪವಷ್ಟೆ. ಒಬ್ಬ ಸರ್ಕಾರಿ ನೌಕರನಾಗಿ ನಾನು ಹಾಗೆ ಮಾತನಾಡಲು ಬರುವುದಿಲ್ಲ. ನಮ್ಮ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಆ ಪ್ರಾಧ್ಯಾಪಕರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ” ಎಂದು ಉತ್ತರಿಸಿದ್ದಾರೆ.

ಡಾ. ಬಸವರಾಜ ಡೋಣೂರ

ಈ ಹಿಂದೆಯೂ ಸಹ ಬಸವರಾಜ ಡೋಣೂರವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಲೆಟರ್‌ ಹೆಡ್‌ನಲ್ಲಿ ಆರ್‌ಎಸ್‌ಎಸ್‌ ಸರಸಂಚಾಲಕ ಮೋಹನ್ ಭಾಗವತ್‌ರವರಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೋರುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.

“ನಾನು ಜನವರಿ 08, 2022ರಂದು ನಾಗಪುರ ಜಿಲ್ಲೆಯ ಕವಿಕುಲಗುರು ಕಾಳಿದಾಸ ಸಂಸ್ಕೃತ ವಿವಿ, ರಾಮ್‌ಟೆಕ್‌ಗೆ ಉಪನ್ಯಾಸ ನೀಡಲು ಬರುತ್ತಿದ್ದೇನೆ. ಇದು ಪೂಜನೀಯ ಗೋಳ್ವಾಲ್ಕರ್ ಅವರ ಹುಟ್ಟೂರು ಕೂಡಾ. ಈ ಸಂದರ್ಭದಲ್ಲಿ ಜನವರಿ 08 ಅಥವಾ 09 ರಂದು ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಯಸಿದ್ದೇನೆ. ನೀವು ಸಮಾಜದ ವಿವಿಧ ವಿಭಾಗಗಳನ್ನು ಆರ್‌ಎಸ್‌ಎಸ್‌ ಮೂಲಕ ತಲುಪಲು ದೇಶಾದ್ಯಂತ ಪ್ರಯಾಣ ಮಾಡುತ್ತಾ ಬ್ಯುಸಿಯಾಗಿದ್ದೀರಿ ಎಂಬುದು ನನಗೆ ಗೊತ್ತು. ಆ ಬ್ಯುಸಿಯ ವೇಳಾಪಟ್ಟಿಯಲ್ಲಿ ಬಿಡುವಾದರೆ ನನ್ನ ಅಪಾಯಿಂಟ್‌ಮೆಂಟ್‌ ಅನ್ನು ದೃಢಪಡಿಸಬೇಕೆಂದು ಈ ಮೂಲಕ ವಿನಯ ಮತ್ತು ಕಾತರದಿಂದ ಕೇಳಿಕೊಳ್ಳುತ್ತೇನೆ” ಎಂದು ಪತ್ರದಲ್ಲಿ ಬರೆದಿದ್ದುದ್ದು ಟೀಕೆಗೆ ಕಾರಣವಾಗಿತ್ತು.

ಇದನ್ನೂ ಓದಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...