Homeಕರ್ನಾಟಕRSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

RSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ ಎಂದು ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡಾ.ಬಸವರಾಜ ಡೋಣೂರ ತಿಳಿಸಿದ್ದಾರೆ.

- Advertisement -
- Advertisement -

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು RSS ಗಣವೇಷ ಧರಿಸಿ, ಲಾಠಿ ಹಿಡಿದು ಪೋಸು ನೀಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪ್ರಾಧ್ಯಾಪಕರು ತಮ್ಮ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಕೇಂದ್ರೀಯ ವಿ.ವಿಯ ಕುಲಸಚಿವರು ಪ್ರಾಧ್ಯಾಪಕರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕರುಗಳಾದ ಸಾರ್ವಜನಿಕ ಆಡಳಿತ ವಿಭಾಗದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು ವಿದ್ಯಾರ್ಥಿಯೊರ್ವ ತೆಗೆದ ಸೆಲ್ಫಿಗೆ ಗಣವೇ‍ಷದಲ್ಲಿ ಲಾಠಿ ಹಿಡಿದು ಪೋಸು ನೀಡಿದ್ದಾರೆ.

ಅದು ಇತ್ತೀಚೆಗೆ ವಿವಿಯ ಆವರಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದ ವೇಳೆ ತೆಗೆದ ಫೋಟೊ ಆಗಿದ್ದು, ಪ್ರಾಧ್ಯಾಪಕರು ಸಹ ಪಥಸಂಚಲನ ಮತ್ತು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಡೋಣೂರರವರು, “ಆ ಫೋಟೊ ವಿಶ್ವವಿದ್ಯಾಲಯದ ಒಳಗೆ ತೆಗೆದುಕೊಂಡ ಫೋಟೊ ಅಲ್ಲ, ಬದಲಿಗೆ ವಿಶ್ವವಿದ್ಯಾಲಯದ ಹೊರಗೆ ತೆಗೆದುಕೊಂಡಿರುವುದರಿಂದ ಅದು ನಮಗೆ ಸಂಬಂಧಿಸಿಲ್ಲ” ಎಂದರು.

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಭಾಗವಹಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅನೇಕ ಧಾರ್ಮಿಕ ಸಂಘಟನೆಗಳು, ಸಂಸ್ಥೆಗಳು ದೇಶದಲ್ಲಿ ಕೆಲಸ ಮಾಡುತ್ತಿವೆ. ನಾವು ವಿಶ್ವವಿದ್ಯಾಲಯದಿಂದ ಕೇಂದ್ರ ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಧಾರ್ಮಿಕ ಕಾರ್ಯಕ್ರಮವಾದ ಹಜ್ ಯಾತ್ರೆಗೆ ಹೋಗುವವರಿಗೆ ರಜೆ ಕೊಟ್ಟು ಕಳಿಸುತ್ತೇವೆ. ಯಾರೋ ತೀರ್ಥಯಾತ್ರೆಗೆ ಹೋಗುವವರಿಗೆ, ಯಾವುದೇ ಸಂಘಟನೆಯ ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಅದು ಸರ್ಕಾರದ ಮಟ್ಟದಲ್ಲಿ ಯೋಚನೆ ಮಾಡಬೇಕೆನೊ” ಎಂದರು.

ಧಾರ್ಮಿಕ ಕಾರ್ಯಕ್ರಮಗಳು ಬೇರೆ ಮತ್ತು ಆರ್‌ಎಸ್‌ಎಸ್‌ ಬೇರೆ. ಇದು ಸಮಾಜದಲ್ಲಿ ದ್ವೇಷ ಹರಡುತ್ತಿದೆ, ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂಬ ಆರೋಪವಿರುವಾಗ ಅವರ ಕಾರ್ಯಕ್ರಮಗಳಲ್ಲಿ ಪ್ರಾಧ್ಯಾಪಕರು ಭಾಗವಹಿಸುವುದು ಸೇವಾನಿಯಮಗಳ ಉಲ್ಲಂಘನೆಯಲ್ಲವೆ ಎಂದು ಡಾ.ಬಸವರಾಜ ಡೋಣೂರರವರನ್ನು ಪ್ರಶ್ನಿಸಲಾಯಿತು. ಅದಕ್ಕೆ ಅವರು, “ನನ್ನ ತಿಳಿದಂತೆ ಸೇವಾ ನಿಯಮಗಳ ಉಲ್ಲಂಘನೆಯಾಗುವುದಿಲ್ಲ. ಯಾವುದೇ ಒಂದು ಬ್ಯಾನ್ ಆದ, ದೇಶ ವಿರೋಧಿಯಾದ ಚಟುವಟಿಕೆಗಳಲ್ಲಿ ಭಾಗಿಯಾದ ಸಂಘಟನೆಗಳಿದ್ದರೆ, ಭಯೋತ್ಪಾದಕ ಸಂಘಟನೆಗಳ ಕಾರ್ಯಕ್ರಮಗಳ ಭಾಗವಹಿಸಬಾರದು. ಆರ್‌ಎಸ್‌ಎಸ್‌ ಅಂತಹ ಸಂಘಟನೆ ಎಂಬದು ಆರೋಪವಷ್ಟೆ. ಒಬ್ಬ ಸರ್ಕಾರಿ ನೌಕರನಾಗಿ ನಾನು ಹಾಗೆ ಮಾತನಾಡಲು ಬರುವುದಿಲ್ಲ. ನಮ್ಮ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಆ ಪ್ರಾಧ್ಯಾಪಕರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ” ಎಂದು ಉತ್ತರಿಸಿದ್ದಾರೆ.

ಡಾ. ಬಸವರಾಜ ಡೋಣೂರ

ಈ ಹಿಂದೆಯೂ ಸಹ ಬಸವರಾಜ ಡೋಣೂರವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಲೆಟರ್‌ ಹೆಡ್‌ನಲ್ಲಿ ಆರ್‌ಎಸ್‌ಎಸ್‌ ಸರಸಂಚಾಲಕ ಮೋಹನ್ ಭಾಗವತ್‌ರವರಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೋರುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.

“ನಾನು ಜನವರಿ 08, 2022ರಂದು ನಾಗಪುರ ಜಿಲ್ಲೆಯ ಕವಿಕುಲಗುರು ಕಾಳಿದಾಸ ಸಂಸ್ಕೃತ ವಿವಿ, ರಾಮ್‌ಟೆಕ್‌ಗೆ ಉಪನ್ಯಾಸ ನೀಡಲು ಬರುತ್ತಿದ್ದೇನೆ. ಇದು ಪೂಜನೀಯ ಗೋಳ್ವಾಲ್ಕರ್ ಅವರ ಹುಟ್ಟೂರು ಕೂಡಾ. ಈ ಸಂದರ್ಭದಲ್ಲಿ ಜನವರಿ 08 ಅಥವಾ 09 ರಂದು ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಯಸಿದ್ದೇನೆ. ನೀವು ಸಮಾಜದ ವಿವಿಧ ವಿಭಾಗಗಳನ್ನು ಆರ್‌ಎಸ್‌ಎಸ್‌ ಮೂಲಕ ತಲುಪಲು ದೇಶಾದ್ಯಂತ ಪ್ರಯಾಣ ಮಾಡುತ್ತಾ ಬ್ಯುಸಿಯಾಗಿದ್ದೀರಿ ಎಂಬುದು ನನಗೆ ಗೊತ್ತು. ಆ ಬ್ಯುಸಿಯ ವೇಳಾಪಟ್ಟಿಯಲ್ಲಿ ಬಿಡುವಾದರೆ ನನ್ನ ಅಪಾಯಿಂಟ್‌ಮೆಂಟ್‌ ಅನ್ನು ದೃಢಪಡಿಸಬೇಕೆಂದು ಈ ಮೂಲಕ ವಿನಯ ಮತ್ತು ಕಾತರದಿಂದ ಕೇಳಿಕೊಳ್ಳುತ್ತೇನೆ” ಎಂದು ಪತ್ರದಲ್ಲಿ ಬರೆದಿದ್ದುದ್ದು ಟೀಕೆಗೆ ಕಾರಣವಾಗಿತ್ತು.

ಇದನ್ನೂ ಓದಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...