Homeಕರ್ನಾಟಕRSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

RSS ಗಣವೇಷಧಾರಿಗಳಾಗಿ ಲಾಠಿ ಹಿಡಿದ ಕೇಂದ್ರೀಯ ವಿವಿ ಪ್ರಾಧ್ಯಾಪಕರು: ಸಮರ್ಥಿಸಿಕೊಂಡ ಕುಲಸಚಿವರು

ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ ಎಂದು ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡಾ.ಬಸವರಾಜ ಡೋಣೂರ ತಿಳಿಸಿದ್ದಾರೆ.

- Advertisement -
- Advertisement -

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯ ಸಮೀಪ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು RSS ಗಣವೇಷ ಧರಿಸಿ, ಲಾಠಿ ಹಿಡಿದು ಪೋಸು ನೀಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪ್ರಾಧ್ಯಾಪಕರು ತಮ್ಮ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಕೇಂದ್ರೀಯ ವಿ.ವಿಯ ಕುಲಸಚಿವರು ಪ್ರಾಧ್ಯಾಪಕರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರೀಯ ವಿವಿಯ ಸಹಾಯಕ ಪ್ರಾಧ್ಯಾಪಕರುಗಳಾದ ಸಾರ್ವಜನಿಕ ಆಡಳಿತ ವಿಭಾಗದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು ವಿದ್ಯಾರ್ಥಿಯೊರ್ವ ತೆಗೆದ ಸೆಲ್ಫಿಗೆ ಗಣವೇ‍ಷದಲ್ಲಿ ಲಾಠಿ ಹಿಡಿದು ಪೋಸು ನೀಡಿದ್ದಾರೆ.

ಅದು ಇತ್ತೀಚೆಗೆ ವಿವಿಯ ಆವರಣದಲ್ಲಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನದ ವೇಳೆ ತೆಗೆದ ಫೋಟೊ ಆಗಿದ್ದು, ಪ್ರಾಧ್ಯಾಪಕರು ಸಹ ಪಥಸಂಚಲನ ಮತ್ತು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಬಸವರಾಜ ಡೋಣೂರರವರು, “ಆ ಫೋಟೊ ವಿಶ್ವವಿದ್ಯಾಲಯದ ಒಳಗೆ ತೆಗೆದುಕೊಂಡ ಫೋಟೊ ಅಲ್ಲ, ಬದಲಿಗೆ ವಿಶ್ವವಿದ್ಯಾಲಯದ ಹೊರಗೆ ತೆಗೆದುಕೊಂಡಿರುವುದರಿಂದ ಅದು ನಮಗೆ ಸಂಬಂಧಿಸಿಲ್ಲ” ಎಂದರು.

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಭಾಗವಹಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅನೇಕ ಧಾರ್ಮಿಕ ಸಂಘಟನೆಗಳು, ಸಂಸ್ಥೆಗಳು ದೇಶದಲ್ಲಿ ಕೆಲಸ ಮಾಡುತ್ತಿವೆ. ನಾವು ವಿಶ್ವವಿದ್ಯಾಲಯದಿಂದ ಕೇಂದ್ರ ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಧಾರ್ಮಿಕ ಕಾರ್ಯಕ್ರಮವಾದ ಹಜ್ ಯಾತ್ರೆಗೆ ಹೋಗುವವರಿಗೆ ರಜೆ ಕೊಟ್ಟು ಕಳಿಸುತ್ತೇವೆ. ಯಾರೋ ತೀರ್ಥಯಾತ್ರೆಗೆ ಹೋಗುವವರಿಗೆ, ಯಾವುದೇ ಸಂಘಟನೆಯ ಧಾರ್ಮಿಕ ಕಾರ್ಯಕ್ರಮಗಳಿಗೆ ಹೋಗುವವರಿಗೆ ವಿಶ್ವವಿದ್ಯಾನಿಲಯ ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ. ಅದು ಸರ್ಕಾರದ ಮಟ್ಟದಲ್ಲಿ ಯೋಚನೆ ಮಾಡಬೇಕೆನೊ” ಎಂದರು.

ಧಾರ್ಮಿಕ ಕಾರ್ಯಕ್ರಮಗಳು ಬೇರೆ ಮತ್ತು ಆರ್‌ಎಸ್‌ಎಸ್‌ ಬೇರೆ. ಇದು ಸಮಾಜದಲ್ಲಿ ದ್ವೇಷ ಹರಡುತ್ತಿದೆ, ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂಬ ಆರೋಪವಿರುವಾಗ ಅವರ ಕಾರ್ಯಕ್ರಮಗಳಲ್ಲಿ ಪ್ರಾಧ್ಯಾಪಕರು ಭಾಗವಹಿಸುವುದು ಸೇವಾನಿಯಮಗಳ ಉಲ್ಲಂಘನೆಯಲ್ಲವೆ ಎಂದು ಡಾ.ಬಸವರಾಜ ಡೋಣೂರರವರನ್ನು ಪ್ರಶ್ನಿಸಲಾಯಿತು. ಅದಕ್ಕೆ ಅವರು, “ನನ್ನ ತಿಳಿದಂತೆ ಸೇವಾ ನಿಯಮಗಳ ಉಲ್ಲಂಘನೆಯಾಗುವುದಿಲ್ಲ. ಯಾವುದೇ ಒಂದು ಬ್ಯಾನ್ ಆದ, ದೇಶ ವಿರೋಧಿಯಾದ ಚಟುವಟಿಕೆಗಳಲ್ಲಿ ಭಾಗಿಯಾದ ಸಂಘಟನೆಗಳಿದ್ದರೆ, ಭಯೋತ್ಪಾದಕ ಸಂಘಟನೆಗಳ ಕಾರ್ಯಕ್ರಮಗಳ ಭಾಗವಹಿಸಬಾರದು. ಆರ್‌ಎಸ್‌ಎಸ್‌ ಅಂತಹ ಸಂಘಟನೆ ಎಂಬದು ಆರೋಪವಷ್ಟೆ. ಒಬ್ಬ ಸರ್ಕಾರಿ ನೌಕರನಾಗಿ ನಾನು ಹಾಗೆ ಮಾತನಾಡಲು ಬರುವುದಿಲ್ಲ. ನಮ್ಮ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಆ ಪ್ರಾಧ್ಯಾಪಕರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಲು ಬರುವುದಿಲ್ಲ” ಎಂದು ಉತ್ತರಿಸಿದ್ದಾರೆ.

ಡಾ. ಬಸವರಾಜ ಡೋಣೂರ

ಈ ಹಿಂದೆಯೂ ಸಹ ಬಸವರಾಜ ಡೋಣೂರವರು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಲೆಟರ್‌ ಹೆಡ್‌ನಲ್ಲಿ ಆರ್‌ಎಸ್‌ಎಸ್‌ ಸರಸಂಚಾಲಕ ಮೋಹನ್ ಭಾಗವತ್‌ರವರಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೋರುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು.

“ನಾನು ಜನವರಿ 08, 2022ರಂದು ನಾಗಪುರ ಜಿಲ್ಲೆಯ ಕವಿಕುಲಗುರು ಕಾಳಿದಾಸ ಸಂಸ್ಕೃತ ವಿವಿ, ರಾಮ್‌ಟೆಕ್‌ಗೆ ಉಪನ್ಯಾಸ ನೀಡಲು ಬರುತ್ತಿದ್ದೇನೆ. ಇದು ಪೂಜನೀಯ ಗೋಳ್ವಾಲ್ಕರ್ ಅವರ ಹುಟ್ಟೂರು ಕೂಡಾ. ಈ ಸಂದರ್ಭದಲ್ಲಿ ಜನವರಿ 08 ಅಥವಾ 09 ರಂದು ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಯಸಿದ್ದೇನೆ. ನೀವು ಸಮಾಜದ ವಿವಿಧ ವಿಭಾಗಗಳನ್ನು ಆರ್‌ಎಸ್‌ಎಸ್‌ ಮೂಲಕ ತಲುಪಲು ದೇಶಾದ್ಯಂತ ಪ್ರಯಾಣ ಮಾಡುತ್ತಾ ಬ್ಯುಸಿಯಾಗಿದ್ದೀರಿ ಎಂಬುದು ನನಗೆ ಗೊತ್ತು. ಆ ಬ್ಯುಸಿಯ ವೇಳಾಪಟ್ಟಿಯಲ್ಲಿ ಬಿಡುವಾದರೆ ನನ್ನ ಅಪಾಯಿಂಟ್‌ಮೆಂಟ್‌ ಅನ್ನು ದೃಢಪಡಿಸಬೇಕೆಂದು ಈ ಮೂಲಕ ವಿನಯ ಮತ್ತು ಕಾತರದಿಂದ ಕೇಳಿಕೊಳ್ಳುತ್ತೇನೆ” ಎಂದು ಪತ್ರದಲ್ಲಿ ಬರೆದಿದ್ದುದ್ದು ಟೀಕೆಗೆ ಕಾರಣವಾಗಿತ್ತು.

ಇದನ್ನೂ ಓದಿ: RSS ಮುಖ್ಯಸ್ಥರಿಗೆ ಕಲಬುರಗಿ ಕೇಂದ್ರೀಯ ವಿವಿ ರಿಜಿಸ್ಟ್ರಾರ್ ಡೋಣೂರರ ಪತ್ರ: ಅಕ್ರಮ ನೇಮಕಾತಿ ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...