Homeಮುಖಪುಟಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

- Advertisement -
- Advertisement -

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.

ಈ ಹಿಂದಿನ ನಿಯಮದಲ್ಲಿ ಸರ್ಕಾರ ಅಥವಾ ಅದರ ಸಂಸ್ಥೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ವಿಷಯವನ್ನು ತೆಗೆದುಹಾಕಲು ನಿರ್ದೇಶಿಸಬಹುದು ಎಂದು ಹೇಳಲಾಗಿತ್ತು.

ತಿದ್ದುಪಡಿ ನಿಯಮ ಅಥವಾ ಹೊಸ ನಿಯಮದಲ್ಲಿ, ಸಾಮಾಜಿಕ ಮಾಧ್ಯಮ ವೇದಿಕೆಗಳ ವಿಷಯಗಳನ್ನು ತೆಗೆದುಹಾಕಲು ಅಥವಾ ಅದರ ಬಳಕೆಗೆ ನಿರ್ಬಂಧ ವಿಧಿಸಲು ಸಮರ್ಥ ನ್ಯಾಯವ್ಯಾಪ್ತಿಯ ನ್ಯಾಯಾಲಯದ ಆದೇಶದ ಮೂಲಕ ಅಥವಾ ಜಂಟಿ ಕಾರ್ಯದರ್ಶಿ ಅಥವಾ ನಿರ್ದೇಶಕರ ಹುದ್ದೆಗಿಂತ ಕಡಿಮೆಯಿಲ್ಲದ ಸರ್ಕಾರಿ ಅಧಿಕಾರಿಯ ಸೂಚನೆಯ ಮೂಲಕ ನಿರ್ದೇಶಿಸಬಹುದು ಎಂದು ಹೇಳಲಾಗಿದೆ.

ಪೊಲೀಸರಿಂದ ಟೇಕ್-ಡೌನ್ ನೋಟಿಸ್ (ತೆಗೆದು ಹಾಕುವ ಪತ್ರ) ಬಂದರೆ, ಅದನ್ನು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿ ಹೊರಡಿಸಿರಬೇಕು. ಅಲ್ಲದೆ, ಅಂತಹ ಸೂಚನೆಗಳು ‘ಲಿಖಿತ ರೂಪದಲ್ಲಿ ತಾರ್ಕಿಕ ಮಾಹಿತಿ’ ಆಗಿರಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

ಮಾರ್ಚ್‌ನಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿ ಎಕ್ಸ್‌ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ತನ್ನ ವೇದಿಕೆಯಲ್ಲಿ ಪೋಸ್ಟ್ ಮಾಡಲಾದ ವಿಷಯವನ್ನು ತೆಗೆದುಹಾಕಲು ಅಥವಾ ನಿರ್ಬಂಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದೇಶಗಳನ್ನು ಹೊರಡಿಸುತ್ತಿರುವ ವಿಧಾನವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಕಂಪನಿಯು ತನ್ನ ಅರ್ಜಿಯಲ್ಲಿ, ವಿಷಯವನ್ನು ತೆಗೆದುಹಾಕುವ ಸೂಚನೆಗಳು ಸಾಮಾನ್ಯವಾಗಿ ‘ಸರಿಯಾದ ತಾರ್ಕಿಕತೆಯನ್ನು ಹೊಂದಿರುವುದಿಲ್ಲ’ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಕಾರ್ಯವಿಧಾನಕ್ಕೆ ಅನುಗುಣವಾಗಿಲ್ಲ ಎಂದು ವಾದಿಸಿತ್ತು.

ಮಾಹಿತಿ ತಂತ್ರಜ್ಞಾನ ನಿಯಮ 3(1)(d) ಅಡಿಯಲ್ಲಿ, ನ್ಯಾಯಾಲಯದ ಆದೇಶ ಅಥವಾ ಸರ್ಕಾರಿ ಅಧಿಸೂಚನೆಯನ್ನು ಸ್ವೀಕರಿಸಿದ 36 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ವಿಷಯವನ್ನು ತೆಗೆದುಹಾಕಬೇಕಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಎಕ್ಸ್ ಅರ್ಜಿಯನ್ನು ವಜಾಗೊಳಿಸಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯವನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಎಕ್ಸ್ ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದೆ.

ವಿವರವಾದ ಕಾರಣವಿಲ್ಲದೆ ಅಧಿಕಾರಿಗಳು ಟೇಕ್-ಡೌನ್ ನೋಟಿಸ್‌ಗಳನ್ನು ಹೊರಡಿಸುತ್ತಿದ್ದಾರೆ. ಅವರ ಆದೇಶವನ್ನು 36 ಗಂಟೆಗಳಲ್ಲಿ ಪಾಲಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಎಕ್ಸ್ ಹೈಕೋರ್ಟ್‌ನಲ್ಲಿ ವಾದಿಸಿತ್ತು.

ಬುಧವಾರದ ಹೊಸ ತಿದ್ದುಪಡಿ ನಿಯಮಗಳ ಜಾರಿ ಮೂಲಕ ಕೇಂದ್ರ ಸರ್ಕಾರವು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಆದೇಶಿಸಿ ನೋಟಿಸ್‌ಗಳನ್ನು ನೀಡುವ ಪರಿಶೀಲನಾ ಕಾರ್ಯವಿಧಾನವನ್ನು ಪರಿಚಯಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ಕಾರ್ಯದರ್ಶಿ ಹಂತದ ಅಧಿಕಾರಿಯನ್ನು ನೇಮಿಸಬೇಕು. ಈ ಅಧಿಕಾರಿಯು ಪ್ರತಿ ತಿಂಗಳು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಕಳುಹಿಸಲಾದ ನೋಟಿಸ್‌ಗಳನ್ನು ಪರಿಶೀಲಿಸಬೇಕು. ಇದರಿಂದಾಗಿ ಈ ನೋಟಿಸ್‌ಗಳು ಅಗತ್ಯವಾಗಿವೆಯೇ, ಸೂಕ್ತವಾಗಿವೆಯೇ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ (ಐಟಿ ಕಾಯ್ದೆ) ಅನುಗುಣವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದೆ.

ಈ ತಿದ್ದುಪಡಿಯ ಪ್ರಕಾರ, ಅಧಿಕಾರಿಗಳು ಕಳುಹಿಸುವ ನೋಟಿಸ್‌ಗಳು, ಕಾನೂನು ಆಧಾರ ಮತ್ತು ಉಲ್ಲೇಖಿಸಲಾದ ಕಾನೂನು ನಿಬಂಧನೆ, ಕಾನೂನುಬಾಹಿರ ಕೃತ್ಯದ ಸ್ವರೂಪ ಮತ್ತು ತೆಗೆದುಹಾಕಬೇಕಾದ ಅಥವಾ ನಿಷ್ಕ್ರಿಯಗೊಳಿಸಬೇಕಾದ ಮಾಹಿತಿಯ ನಿರ್ದಿಷ್ಟ ಯುಆರ್‌ಎಲ್‌ ಗುರುತಿನ ಸಂಖ್ಯೆ ಅಥವಾ ಇತರ ಎಲೆಕ್ಟ್ರಾನಿಕ್ ಸ್ಥಳ, ದಿನಾಂಕ ಅಥವಾ ಸಂನಿವೇಶ ಸಂಪರ್ಕ ಸೇರಿದಂತೆ ಕೆಲವು ವಿಷಯಗಳನ್ನು ಸ್ಪಷ್ಟವಾಗಿ ಒಳಗೊಂಡಿರಬೇಕು.

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...