Homeಮುಖಪುಟಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

- Advertisement -
- Advertisement -

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.

ಈ ಹಿಂದಿನ ನಿಯಮದಲ್ಲಿ ಸರ್ಕಾರ ಅಥವಾ ಅದರ ಸಂಸ್ಥೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ವಿಷಯವನ್ನು ತೆಗೆದುಹಾಕಲು ನಿರ್ದೇಶಿಸಬಹುದು ಎಂದು ಹೇಳಲಾಗಿತ್ತು.

ತಿದ್ದುಪಡಿ ನಿಯಮ ಅಥವಾ ಹೊಸ ನಿಯಮದಲ್ಲಿ, ಸಾಮಾಜಿಕ ಮಾಧ್ಯಮ ವೇದಿಕೆಗಳ ವಿಷಯಗಳನ್ನು ತೆಗೆದುಹಾಕಲು ಅಥವಾ ಅದರ ಬಳಕೆಗೆ ನಿರ್ಬಂಧ ವಿಧಿಸಲು ಸಮರ್ಥ ನ್ಯಾಯವ್ಯಾಪ್ತಿಯ ನ್ಯಾಯಾಲಯದ ಆದೇಶದ ಮೂಲಕ ಅಥವಾ ಜಂಟಿ ಕಾರ್ಯದರ್ಶಿ ಅಥವಾ ನಿರ್ದೇಶಕರ ಹುದ್ದೆಗಿಂತ ಕಡಿಮೆಯಿಲ್ಲದ ಸರ್ಕಾರಿ ಅಧಿಕಾರಿಯ ಸೂಚನೆಯ ಮೂಲಕ ನಿರ್ದೇಶಿಸಬಹುದು ಎಂದು ಹೇಳಲಾಗಿದೆ.

ಪೊಲೀಸರಿಂದ ಟೇಕ್-ಡೌನ್ ನೋಟಿಸ್ (ತೆಗೆದು ಹಾಕುವ ಪತ್ರ) ಬಂದರೆ, ಅದನ್ನು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿ ಹೊರಡಿಸಿರಬೇಕು. ಅಲ್ಲದೆ, ಅಂತಹ ಸೂಚನೆಗಳು ‘ಲಿಖಿತ ರೂಪದಲ್ಲಿ ತಾರ್ಕಿಕ ಮಾಹಿತಿ’ ಆಗಿರಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

ಮಾರ್ಚ್‌ನಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿ ಎಕ್ಸ್‌ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ತನ್ನ ವೇದಿಕೆಯಲ್ಲಿ ಪೋಸ್ಟ್ ಮಾಡಲಾದ ವಿಷಯವನ್ನು ತೆಗೆದುಹಾಕಲು ಅಥವಾ ನಿರ್ಬಂಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದೇಶಗಳನ್ನು ಹೊರಡಿಸುತ್ತಿರುವ ವಿಧಾನವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಕಂಪನಿಯು ತನ್ನ ಅರ್ಜಿಯಲ್ಲಿ, ವಿಷಯವನ್ನು ತೆಗೆದುಹಾಕುವ ಸೂಚನೆಗಳು ಸಾಮಾನ್ಯವಾಗಿ ‘ಸರಿಯಾದ ತಾರ್ಕಿಕತೆಯನ್ನು ಹೊಂದಿರುವುದಿಲ್ಲ’ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಕಾರ್ಯವಿಧಾನಕ್ಕೆ ಅನುಗುಣವಾಗಿಲ್ಲ ಎಂದು ವಾದಿಸಿತ್ತು.

ಮಾಹಿತಿ ತಂತ್ರಜ್ಞಾನ ನಿಯಮ 3(1)(d) ಅಡಿಯಲ್ಲಿ, ನ್ಯಾಯಾಲಯದ ಆದೇಶ ಅಥವಾ ಸರ್ಕಾರಿ ಅಧಿಸೂಚನೆಯನ್ನು ಸ್ವೀಕರಿಸಿದ 36 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ವಿಷಯವನ್ನು ತೆಗೆದುಹಾಕಬೇಕಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಎಕ್ಸ್ ಅರ್ಜಿಯನ್ನು ವಜಾಗೊಳಿಸಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯವನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಎಕ್ಸ್ ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದೆ.

ವಿವರವಾದ ಕಾರಣವಿಲ್ಲದೆ ಅಧಿಕಾರಿಗಳು ಟೇಕ್-ಡೌನ್ ನೋಟಿಸ್‌ಗಳನ್ನು ಹೊರಡಿಸುತ್ತಿದ್ದಾರೆ. ಅವರ ಆದೇಶವನ್ನು 36 ಗಂಟೆಗಳಲ್ಲಿ ಪಾಲಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಎಕ್ಸ್ ಹೈಕೋರ್ಟ್‌ನಲ್ಲಿ ವಾದಿಸಿತ್ತು.

ಬುಧವಾರದ ಹೊಸ ತಿದ್ದುಪಡಿ ನಿಯಮಗಳ ಜಾರಿ ಮೂಲಕ ಕೇಂದ್ರ ಸರ್ಕಾರವು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಆದೇಶಿಸಿ ನೋಟಿಸ್‌ಗಳನ್ನು ನೀಡುವ ಪರಿಶೀಲನಾ ಕಾರ್ಯವಿಧಾನವನ್ನು ಪರಿಚಯಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ಕಾರ್ಯದರ್ಶಿ ಹಂತದ ಅಧಿಕಾರಿಯನ್ನು ನೇಮಿಸಬೇಕು. ಈ ಅಧಿಕಾರಿಯು ಪ್ರತಿ ತಿಂಗಳು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಕಳುಹಿಸಲಾದ ನೋಟಿಸ್‌ಗಳನ್ನು ಪರಿಶೀಲಿಸಬೇಕು. ಇದರಿಂದಾಗಿ ಈ ನೋಟಿಸ್‌ಗಳು ಅಗತ್ಯವಾಗಿವೆಯೇ, ಸೂಕ್ತವಾಗಿವೆಯೇ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ (ಐಟಿ ಕಾಯ್ದೆ) ಅನುಗುಣವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದೆ.

ಈ ತಿದ್ದುಪಡಿಯ ಪ್ರಕಾರ, ಅಧಿಕಾರಿಗಳು ಕಳುಹಿಸುವ ನೋಟಿಸ್‌ಗಳು, ಕಾನೂನು ಆಧಾರ ಮತ್ತು ಉಲ್ಲೇಖಿಸಲಾದ ಕಾನೂನು ನಿಬಂಧನೆ, ಕಾನೂನುಬಾಹಿರ ಕೃತ್ಯದ ಸ್ವರೂಪ ಮತ್ತು ತೆಗೆದುಹಾಕಬೇಕಾದ ಅಥವಾ ನಿಷ್ಕ್ರಿಯಗೊಳಿಸಬೇಕಾದ ಮಾಹಿತಿಯ ನಿರ್ದಿಷ್ಟ ಯುಆರ್‌ಎಲ್‌ ಗುರುತಿನ ಸಂಖ್ಯೆ ಅಥವಾ ಇತರ ಎಲೆಕ್ಟ್ರಾನಿಕ್ ಸ್ಥಳ, ದಿನಾಂಕ ಅಥವಾ ಸಂನಿವೇಶ ಸಂಪರ್ಕ ಸೇರಿದಂತೆ ಕೆಲವು ವಿಷಯಗಳನ್ನು ಸ್ಪಷ್ಟವಾಗಿ ಒಳಗೊಂಡಿರಬೇಕು.

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...