Homeಮುಖಪುಟಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

- Advertisement -
- Advertisement -

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.

ಈ ಹಿಂದಿನ ನಿಯಮದಲ್ಲಿ ಸರ್ಕಾರ ಅಥವಾ ಅದರ ಸಂಸ್ಥೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ವಿಷಯವನ್ನು ತೆಗೆದುಹಾಕಲು ನಿರ್ದೇಶಿಸಬಹುದು ಎಂದು ಹೇಳಲಾಗಿತ್ತು.

ತಿದ್ದುಪಡಿ ನಿಯಮ ಅಥವಾ ಹೊಸ ನಿಯಮದಲ್ಲಿ, ಸಾಮಾಜಿಕ ಮಾಧ್ಯಮ ವೇದಿಕೆಗಳ ವಿಷಯಗಳನ್ನು ತೆಗೆದುಹಾಕಲು ಅಥವಾ ಅದರ ಬಳಕೆಗೆ ನಿರ್ಬಂಧ ವಿಧಿಸಲು ಸಮರ್ಥ ನ್ಯಾಯವ್ಯಾಪ್ತಿಯ ನ್ಯಾಯಾಲಯದ ಆದೇಶದ ಮೂಲಕ ಅಥವಾ ಜಂಟಿ ಕಾರ್ಯದರ್ಶಿ ಅಥವಾ ನಿರ್ದೇಶಕರ ಹುದ್ದೆಗಿಂತ ಕಡಿಮೆಯಿಲ್ಲದ ಸರ್ಕಾರಿ ಅಧಿಕಾರಿಯ ಸೂಚನೆಯ ಮೂಲಕ ನಿರ್ದೇಶಿಸಬಹುದು ಎಂದು ಹೇಳಲಾಗಿದೆ.

ಪೊಲೀಸರಿಂದ ಟೇಕ್-ಡೌನ್ ನೋಟಿಸ್ (ತೆಗೆದು ಹಾಕುವ ಪತ್ರ) ಬಂದರೆ, ಅದನ್ನು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿ ಹೊರಡಿಸಿರಬೇಕು. ಅಲ್ಲದೆ, ಅಂತಹ ಸೂಚನೆಗಳು ‘ಲಿಖಿತ ರೂಪದಲ್ಲಿ ತಾರ್ಕಿಕ ಮಾಹಿತಿ’ ಆಗಿರಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

ಮಾರ್ಚ್‌ನಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿ ಎಕ್ಸ್‌ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ತನ್ನ ವೇದಿಕೆಯಲ್ಲಿ ಪೋಸ್ಟ್ ಮಾಡಲಾದ ವಿಷಯವನ್ನು ತೆಗೆದುಹಾಕಲು ಅಥವಾ ನಿರ್ಬಂಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದೇಶಗಳನ್ನು ಹೊರಡಿಸುತ್ತಿರುವ ವಿಧಾನವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಕಂಪನಿಯು ತನ್ನ ಅರ್ಜಿಯಲ್ಲಿ, ವಿಷಯವನ್ನು ತೆಗೆದುಹಾಕುವ ಸೂಚನೆಗಳು ಸಾಮಾನ್ಯವಾಗಿ ‘ಸರಿಯಾದ ತಾರ್ಕಿಕತೆಯನ್ನು ಹೊಂದಿರುವುದಿಲ್ಲ’ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಕಾರ್ಯವಿಧಾನಕ್ಕೆ ಅನುಗುಣವಾಗಿಲ್ಲ ಎಂದು ವಾದಿಸಿತ್ತು.

ಮಾಹಿತಿ ತಂತ್ರಜ್ಞಾನ ನಿಯಮ 3(1)(d) ಅಡಿಯಲ್ಲಿ, ನ್ಯಾಯಾಲಯದ ಆದೇಶ ಅಥವಾ ಸರ್ಕಾರಿ ಅಧಿಸೂಚನೆಯನ್ನು ಸ್ವೀಕರಿಸಿದ 36 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ವಿಷಯವನ್ನು ತೆಗೆದುಹಾಕಬೇಕಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಎಕ್ಸ್ ಅರ್ಜಿಯನ್ನು ವಜಾಗೊಳಿಸಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯವನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಎಕ್ಸ್ ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದೆ.

ವಿವರವಾದ ಕಾರಣವಿಲ್ಲದೆ ಅಧಿಕಾರಿಗಳು ಟೇಕ್-ಡೌನ್ ನೋಟಿಸ್‌ಗಳನ್ನು ಹೊರಡಿಸುತ್ತಿದ್ದಾರೆ. ಅವರ ಆದೇಶವನ್ನು 36 ಗಂಟೆಗಳಲ್ಲಿ ಪಾಲಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಎಕ್ಸ್ ಹೈಕೋರ್ಟ್‌ನಲ್ಲಿ ವಾದಿಸಿತ್ತು.

ಬುಧವಾರದ ಹೊಸ ತಿದ್ದುಪಡಿ ನಿಯಮಗಳ ಜಾರಿ ಮೂಲಕ ಕೇಂದ್ರ ಸರ್ಕಾರವು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಆದೇಶಿಸಿ ನೋಟಿಸ್‌ಗಳನ್ನು ನೀಡುವ ಪರಿಶೀಲನಾ ಕಾರ್ಯವಿಧಾನವನ್ನು ಪರಿಚಯಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ಕಾರ್ಯದರ್ಶಿ ಹಂತದ ಅಧಿಕಾರಿಯನ್ನು ನೇಮಿಸಬೇಕು. ಈ ಅಧಿಕಾರಿಯು ಪ್ರತಿ ತಿಂಗಳು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಕಳುಹಿಸಲಾದ ನೋಟಿಸ್‌ಗಳನ್ನು ಪರಿಶೀಲಿಸಬೇಕು. ಇದರಿಂದಾಗಿ ಈ ನೋಟಿಸ್‌ಗಳು ಅಗತ್ಯವಾಗಿವೆಯೇ, ಸೂಕ್ತವಾಗಿವೆಯೇ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ (ಐಟಿ ಕಾಯ್ದೆ) ಅನುಗುಣವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದೆ.

ಈ ತಿದ್ದುಪಡಿಯ ಪ್ರಕಾರ, ಅಧಿಕಾರಿಗಳು ಕಳುಹಿಸುವ ನೋಟಿಸ್‌ಗಳು, ಕಾನೂನು ಆಧಾರ ಮತ್ತು ಉಲ್ಲೇಖಿಸಲಾದ ಕಾನೂನು ನಿಬಂಧನೆ, ಕಾನೂನುಬಾಹಿರ ಕೃತ್ಯದ ಸ್ವರೂಪ ಮತ್ತು ತೆಗೆದುಹಾಕಬೇಕಾದ ಅಥವಾ ನಿಷ್ಕ್ರಿಯಗೊಳಿಸಬೇಕಾದ ಮಾಹಿತಿಯ ನಿರ್ದಿಷ್ಟ ಯುಆರ್‌ಎಲ್‌ ಗುರುತಿನ ಸಂಖ್ಯೆ ಅಥವಾ ಇತರ ಎಲೆಕ್ಟ್ರಾನಿಕ್ ಸ್ಥಳ, ದಿನಾಂಕ ಅಥವಾ ಸಂನಿವೇಶ ಸಂಪರ್ಕ ಸೇರಿದಂತೆ ಕೆಲವು ವಿಷಯಗಳನ್ನು ಸ್ಪಷ್ಟವಾಗಿ ಒಳಗೊಂಡಿರಬೇಕು.

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...