Homeಮುಖಪುಟಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ...

ಹೊಸ ಐಟಿ ನಿಯಮಗಳು ಜಾರಿ : ಹಿರಿಯ ಅಧಿಕಾರಿಗಳಿಗೆ ಮಾತ್ರ ಕಂಟೆಂಟ್ ತೆಗೆದು ಹಾಕಲು ಆದೇಶಿಸುವ ಅಧಿಕಾರ

- Advertisement -
- Advertisement -

ಕೇಂದ್ರ ಸರ್ಕಾರವು 2021ರ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬುಧವಾರ ಬದಲಾಯಿಸಿದೆ. ಈ ಬದಲಾವಣೆಯಿಂದ, ಇಂಟರ್‌ನೆಟ್‌ನಲ್ಲಿ ಹಾಕಲಾದ ವಿಷಯ (ಕಂಟೆಂಟ್) ಅನ್ನು ತೆಗೆದುಹಾಕಲು ಯಾವ ಸರ್ಕಾರಿ ಸಂಸ್ಥೆಗಳು ಅಥವಾ ಅಧಿಕಾರಿಗಳು ಆದೇಶಿಸಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.

ಈ ಹಿಂದಿನ ನಿಯಮದಲ್ಲಿ ಸರ್ಕಾರ ಅಥವಾ ಅದರ ಸಂಸ್ಥೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ವಿಷಯವನ್ನು ತೆಗೆದುಹಾಕಲು ನಿರ್ದೇಶಿಸಬಹುದು ಎಂದು ಹೇಳಲಾಗಿತ್ತು.

ತಿದ್ದುಪಡಿ ನಿಯಮ ಅಥವಾ ಹೊಸ ನಿಯಮದಲ್ಲಿ, ಸಾಮಾಜಿಕ ಮಾಧ್ಯಮ ವೇದಿಕೆಗಳ ವಿಷಯಗಳನ್ನು ತೆಗೆದುಹಾಕಲು ಅಥವಾ ಅದರ ಬಳಕೆಗೆ ನಿರ್ಬಂಧ ವಿಧಿಸಲು ಸಮರ್ಥ ನ್ಯಾಯವ್ಯಾಪ್ತಿಯ ನ್ಯಾಯಾಲಯದ ಆದೇಶದ ಮೂಲಕ ಅಥವಾ ಜಂಟಿ ಕಾರ್ಯದರ್ಶಿ ಅಥವಾ ನಿರ್ದೇಶಕರ ಹುದ್ದೆಗಿಂತ ಕಡಿಮೆಯಿಲ್ಲದ ಸರ್ಕಾರಿ ಅಧಿಕಾರಿಯ ಸೂಚನೆಯ ಮೂಲಕ ನಿರ್ದೇಶಿಸಬಹುದು ಎಂದು ಹೇಳಲಾಗಿದೆ.

ಪೊಲೀಸರಿಂದ ಟೇಕ್-ಡೌನ್ ನೋಟಿಸ್ (ತೆಗೆದು ಹಾಕುವ ಪತ್ರ) ಬಂದರೆ, ಅದನ್ನು ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಹುದ್ದೆಗಿಂತ ಕಡಿಮೆಯಿಲ್ಲದ ಅಧಿಕಾರಿ ಹೊರಡಿಸಿರಬೇಕು. ಅಲ್ಲದೆ, ಅಂತಹ ಸೂಚನೆಗಳು ‘ಲಿಖಿತ ರೂಪದಲ್ಲಿ ತಾರ್ಕಿಕ ಮಾಹಿತಿ’ ಆಗಿರಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

ಮಾರ್ಚ್‌ನಲ್ಲಿ, ಸಾಮಾಜಿಕ ಮಾಧ್ಯಮ ಕಂಪನಿ ಎಕ್ಸ್‌ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ತನ್ನ ವೇದಿಕೆಯಲ್ಲಿ ಪೋಸ್ಟ್ ಮಾಡಲಾದ ವಿಷಯವನ್ನು ತೆಗೆದುಹಾಕಲು ಅಥವಾ ನಿರ್ಬಂಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆದೇಶಗಳನ್ನು ಹೊರಡಿಸುತ್ತಿರುವ ವಿಧಾನವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಕಂಪನಿಯು ತನ್ನ ಅರ್ಜಿಯಲ್ಲಿ, ವಿಷಯವನ್ನು ತೆಗೆದುಹಾಕುವ ಸೂಚನೆಗಳು ಸಾಮಾನ್ಯವಾಗಿ ‘ಸರಿಯಾದ ತಾರ್ಕಿಕತೆಯನ್ನು ಹೊಂದಿರುವುದಿಲ್ಲ’ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಕಾರ್ಯವಿಧಾನಕ್ಕೆ ಅನುಗುಣವಾಗಿಲ್ಲ ಎಂದು ವಾದಿಸಿತ್ತು.

ಮಾಹಿತಿ ತಂತ್ರಜ್ಞಾನ ನಿಯಮ 3(1)(d) ಅಡಿಯಲ್ಲಿ, ನ್ಯಾಯಾಲಯದ ಆದೇಶ ಅಥವಾ ಸರ್ಕಾರಿ ಅಧಿಸೂಚನೆಯನ್ನು ಸ್ವೀಕರಿಸಿದ 36 ಗಂಟೆಗಳ ಒಳಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ವಿಷಯವನ್ನು ತೆಗೆದುಹಾಕಬೇಕಾಗುತ್ತದೆ.

ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಎಕ್ಸ್ ಅರ್ಜಿಯನ್ನು ವಜಾಗೊಳಿಸಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯವನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಎಕ್ಸ್ ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದೆ.

ವಿವರವಾದ ಕಾರಣವಿಲ್ಲದೆ ಅಧಿಕಾರಿಗಳು ಟೇಕ್-ಡೌನ್ ನೋಟಿಸ್‌ಗಳನ್ನು ಹೊರಡಿಸುತ್ತಿದ್ದಾರೆ. ಅವರ ಆದೇಶವನ್ನು 36 ಗಂಟೆಗಳಲ್ಲಿ ಪಾಲಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಎಕ್ಸ್ ಹೈಕೋರ್ಟ್‌ನಲ್ಲಿ ವಾದಿಸಿತ್ತು.

ಬುಧವಾರದ ಹೊಸ ತಿದ್ದುಪಡಿ ನಿಯಮಗಳ ಜಾರಿ ಮೂಲಕ ಕೇಂದ್ರ ಸರ್ಕಾರವು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಆದೇಶಿಸಿ ನೋಟಿಸ್‌ಗಳನ್ನು ನೀಡುವ ಪರಿಶೀಲನಾ ಕಾರ್ಯವಿಧಾನವನ್ನು ಪರಿಚಯಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕನಿಷ್ಠ ಕಾರ್ಯದರ್ಶಿ ಹಂತದ ಅಧಿಕಾರಿಯನ್ನು ನೇಮಿಸಬೇಕು. ಈ ಅಧಿಕಾರಿಯು ಪ್ರತಿ ತಿಂಗಳು ಆನ್‌ಲೈನ್ ವಿಷಯವನ್ನು ತೆಗೆದುಹಾಕಲು ಕಳುಹಿಸಲಾದ ನೋಟಿಸ್‌ಗಳನ್ನು ಪರಿಶೀಲಿಸಬೇಕು. ಇದರಿಂದಾಗಿ ಈ ನೋಟಿಸ್‌ಗಳು ಅಗತ್ಯವಾಗಿವೆಯೇ, ಸೂಕ್ತವಾಗಿವೆಯೇ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ (ಐಟಿ ಕಾಯ್ದೆ) ಅನುಗುಣವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದೆ.

ಈ ತಿದ್ದುಪಡಿಯ ಪ್ರಕಾರ, ಅಧಿಕಾರಿಗಳು ಕಳುಹಿಸುವ ನೋಟಿಸ್‌ಗಳು, ಕಾನೂನು ಆಧಾರ ಮತ್ತು ಉಲ್ಲೇಖಿಸಲಾದ ಕಾನೂನು ನಿಬಂಧನೆ, ಕಾನೂನುಬಾಹಿರ ಕೃತ್ಯದ ಸ್ವರೂಪ ಮತ್ತು ತೆಗೆದುಹಾಕಬೇಕಾದ ಅಥವಾ ನಿಷ್ಕ್ರಿಯಗೊಳಿಸಬೇಕಾದ ಮಾಹಿತಿಯ ನಿರ್ದಿಷ್ಟ ಯುಆರ್‌ಎಲ್‌ ಗುರುತಿನ ಸಂಖ್ಯೆ ಅಥವಾ ಇತರ ಎಲೆಕ್ಟ್ರಾನಿಕ್ ಸ್ಥಳ, ದಿನಾಂಕ ಅಥವಾ ಸಂನಿವೇಶ ಸಂಪರ್ಕ ಸೇರಿದಂತೆ ಕೆಲವು ವಿಷಯಗಳನ್ನು ಸ್ಪಷ್ಟವಾಗಿ ಒಳಗೊಂಡಿರಬೇಕು.

ಡೀಪ್‌ಫೇಕ್ ದುರುಪಯೋಗ ತಡೆಗಟ್ಟಲು ಎಐ ಮೇಲೆ ನಿಯಂತ್ರಣ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....