Homeಮುಖಪುಟ'ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌' ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

‘ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

- Advertisement -
- Advertisement -

ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಹುರಿಯತ್ ಕಾನ್ಫರೆನ್ಸ್‌ನ ಅಂಗವಾದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌ನ್ನು (ಜೆಕೆಎನ್‌ಎಫ್) ಐದು ವರ್ಷಗಳ ಅವಧಿಗೆ ನಿಷೇಧಿಸಿ ಕೇಂದ್ರ ಸರಕಾರ ಆದೇಶವನ್ನು ಹೊರಡಿಸಿದೆ.

ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ದೇಶದ ಏಕತೆ, ಸಾರ್ವಭೌಮತೆ ಹಾಗೂ ಭದ್ರತೆಗೆ ಧಕ್ಕೆಯಾಗುವಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ. ನಯೀಮ್ ಅಹ್ಮದ್ ಖಾನ್ ನೇತೃತ್ವದ JKNF ಕಾನೂನು ಬಾಹಿರ ಸಂಘಟನೆಯಾಗಿದ್ದು, ತಕ್ಷಣದಿಂದ ಬರುವಂತೆ ಸಂಘಟನೆಯನ್ನು ನಿಷೇಧಿಸಲಾಗಿದೆ. ಈ ಆದೇಶವು ಐದು ವರ್ಷಗಳ ಅವಧಿಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಭಾರತದಿಂದ ಜಮ್ಮು-ಕಾಶ್ಮೀರವನ್ನು  ಬೇರ್ಪಡಿಸಲು ಯತ್ನ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವುದು, ರಾಷ್ಟ್ರದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಗೆ ಸವಾಲು ಹಾಕಲು ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಭಾರತೀಯರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಭಯೋತ್ಪಾದಕ ಪಡೆಗಳನ್ನು ಬೇರುಸಹಿತ ಕಿತ್ತುಹಾಕಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

JKNF ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ  ಸರಕು ಸಾಗಣೆಗೆ ನೆರವು ಒದಗಿಸುತ್ತಿದ್ದಾರೆ. ಅವರು ಭಯೋತ್ಪಾದಕ ಚಟುವಟಿಕೆಗಳು ಮತ್ತು ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಕಳೆದ ಡಿಸೆಂಬರ್‌ನಲ್ಲಿ  ರಾಷ್ಟ್ರ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ(ಮಸರತ್ ಆಲಂ ಬಣ) ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. “ಮುಸ್ಲಿಂ ಲೀಗ್ ನಿಷೇಧ ಮಾತ್ರವಲ್ಲದೆ, ಈ ಸಂಘಟನೆಯ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967, ಭಾರತೀಯ ದಂಡ ಸಂಹಿತೆಯ 1860, ದಿ ಆರ್ಮ್ಸ್ ಆಕ್ಟ್ 1959 ಮತ್ತು ರಣಬೀರ್ ದಂಡ ಸಂಹಿತೆ 1932 ರ ವಿವಿಧ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿತ್ತು.

ಇದಲ್ಲದೆ ಕಳೆದ ಡಿಸೆಂಬರ್‌ 31ರಂದು  ಜಮ್ಮು-ಕಾಶ್ಮೀರದ ತೆಹ್ರೀಕ್-ಎ-ಹುರಿಯತ್ (ಟಿಇಹೆಚ್) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯವು ಆದೇಶವನ್ನು ಹೊರಡಿಸಿತ್ತು. ತೆಹ್ರೀಕ್-ಇ-ಹುರಿಯತ್ ಜಮ್ಮು-ಕಾಶ್ಮೀರ (ಟಿಹೆಚ್)ನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಈ ಸಂಘಟನೆಯು ಭಾರತದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅಮಿತ್‌ ಶಾ ಹೇಳಿದ್ದರು. ತೆಹ್ರೀಕ್-ಇ-ಹುರಿಯತ್  ಸಂಘಟನೆಯನ್ನು ಸೈಯದ್ ಅಲಿ ಶಾ ಗಿಲಾನಿ ಅವರು ಸ್ಥಾಪಿಸಿದ್ದರು. ಗಿಲಾನಿ ಜಮಾತ್‌-ಎ-ಇಸ್ಲಾಮಿ ಕಾಶ್ಮೀರವನ್ನು ತೊರೆದ ನಂತರ 2004ರ ಆಗಸ್ಟ್‌ 7ರಂದು ಈ ಸಂಘಟನೆಯನ್ನು ಸ್ಥಾಪಿಸಿದ್ದರು. ಅವರ ನಿಧನದ ಬಳಿಕ ಮಸರತ್ ಆಲಂ ಭಟ್ ಅವರು ಉತ್ತರಾಧಿಕಾರಿಯಾದರು. ಭಟ್ ಪ್ರಸ್ತುತ ಜೈಲಿನಲ್ಲಿದ್ದಾರೆ.

ಇದನ್ನು ಓದಿ: ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಮಾಹಿತಿ ಸಲ್ಲಿಸಿದ ಎಸ್ ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...