Homeಮುಖಪುಟಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

ಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

- Advertisement -
- Advertisement -

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಅಥವಾ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ನೆಪದಲ್ಲಿ ಶಿಕ್ಷಣ ತಜ್ಞರು, ಹೋರಾಟಗಾರರು, ಬುದ್ಧಿ ಜೀವಿಗಳು ಮತ್ತು ವಿಮರ್ಶಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಕ್ರಮಕ್ಕೆ ನ್ಯಾಯಾಂಗದ ಮಧ್ಯಸ್ಥಿಕೆ ಮಾತ್ರ ಏಕೈಕ ಪರಿಹಾರ ಎಂದು ದಿ ಸೌತ್ ಫಸ್ಟ್‌ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ನಿನ್ನೆ(ಫೆಬ್ರವರಿ 19, ಸೋಮವಾರ) ಪತ್ರಕರ್ತ ಮತ್ತು ಆಲ್ಟ್ ನ್ಯೂಸ್‌ನ ಸಂಸ್ಥಾಪಕ ಮುಹಮ್ಮದ್ ಝುಬೈರ್ ಅವರು’ ರೈತ ಹೋರಾಟದ ಪರ ಇರುವ ಮತ್ತು ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸುವ ಎಕ್ಸ್‌ ಖಾತೆಗಳನ್ನು ಬ್ಲಾಕ್ ಮಾಡಲಾಗುತ್ತಿದೆ ಎಂದು ಪೋಸ್ಟ್‌ ಹಾಕಿದ್ದರು. ನಿರ್ಬಂಧಿಸಲಾದ ಖಾತೆಗಳನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ಅವರು ಮನವಿ ಮಾಡಿದ್ದರು.

“ಭಾರತದಲ್ಲಿ ರೈತರ ಪ್ರತಿಭಟನೆ ಪರ ಇರುವ ಗ್ರೌಂಡ್ ರಿಪೋರ್ಟರ್‌ಗಳು, ಪ್ರಮುಖ ರೈತ ಸಂಘಟನೆಗಳು ಮತ್ತು ಇತರ ಪ್ರಮುಖರ ಎಕ್ಸ್‌ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಬ್ಲಾಕ್ ಮಾಡಲಾದ ಕೆಲ ಖಾತೆಗಳ ಮಾಹಿತಿ ಇಲ್ಲಿ ಹಂಚಿಕೊಂಡಿದ್ದೇನೆ. ಇವುಗಳಲ್ಲದೆ ಇನ್ನೂ ಹಲವು ಖಾತೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಯವಿಟ್ಟು ಅವುಗಳನ್ನು ಮರು ಸ್ಥಾಪಿಸಿ” ಎಂದು ಝಬೈರ್ ವಿನಂತಿ ಮಾಡಿಕೊಂಡಿದ್ದರು.

@PunYaab, @GaonSavera, @mandeeppunia1,@tractor2twiter_1, @TribalArmy, @Rattan1990, @HansrajMeena, @PandherSarvan ಮತ್ತು @ramanmann1974 ಈ ಎಕ್ಸ್ ಖಾತೆಗಳನ್ನು ಪ್ರಮುಖವಾಗಿ ಬ್ಲಾಕ್ ಮಾಡಲಾಗಿದೆ ಎಂದು ಝುಬೈರ್ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದರು.

ಇಂದು (ಮಂಗಳವಾರ, 20 ಫೆಬ್ರವರಿ) ‘ದಿ ಹಿಂದೂಸ್ತಾನ್ ಟೈಮ್ಸ್’ ವರದಿಯೊಂದನ್ನು ಪ್ರಕಟಿಸಿದ್ದು, “ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ‘ಸಾರ್ವಜನಿಕ ಸುವ್ಯವಸ್ಥೆ’ ಕಾಪಾಡುವ ಕಾರಣ ಹೇಳಿ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ 177 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಲಿಂಕ್‌ಗಳ ವಿರುದ್ಧ ತುರ್ತು ನಿರ್ಬಂಧದ ಆದೇಶ ಹೊರಡಿಸಲು ಸೋಮವಾರ ತೀರ್ಮಾನಿಸಿದೆ” ಎಂದು ಹೇಳಿದೆ.

ಒಟ್ಟು 35 ಫೇಸ್‌ಬುಕ್ ಲಿಂಕ್‌ಗಳು, 35 ಫೇಸ್‌ಬುಕ್ ಪ್ರೊಫೈಲ್‌ಗಳು, 14 ಇನ್‌ಸ್ಟಾಗ್ರಾಮ್ ಖಾತೆಗಳು, 42 ಎಕ್ಸ್ ಹ್ಯಾಂಡಲ್‌ಗಳು ಮತ್ತು ಒಂದು ಸ್ನ್ಯಾಪ್‌ಚಾಟ್ ಮತ್ತು ಒಂದು ರೆಡ್ಡಿಟ್ ಖಾತೆಗಳ ವಿರುದ್ಧ ಸೋಮವಾರ ನಿರ್ಬಂಧ ಆದೇಶ ಹೊರಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಐಟಿ ಕಾಯ್ದೆಯ ಸೆಕ್ಷನ್ 69ಎ ಜಾರಿ ಕುರಿತ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಮೆಟಾ ಮತ್ತು ಎಕ್ಸ್ ಪ್ರತಿನಿಧಿಗಳು, ಸಂಪೂರ್ಣ ಖಾತೆಗಳನ್ನು ನಿರ್ಬಂಧಿಸುವ ಬದಲು, ವಿಷಯದೊಂದಿಗೆ ನಿರ್ದಿಷ್ಟ URLಗಳನ್ನು ನಿರ್ಬಂಧಿಸಬೇಕು ಎಂದು ಹೇಳಿರುವುದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಮಿತಿ, “ಖಾತೆ ಸಕ್ರಿಯವಾಗಿದ್ದರೆ, ಸಾರ್ವಜನಿಕ ಅಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ವಿಷಯವನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಬಹುದು” ಎಂದು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಯಾರ ಖಾತೆಗಳನ್ನು ಬ್ಲಾಕ್ ಮಾಡಲಿದ್ದಾರೆ ಎಂಬುವುದರ ಮಾಹಿತಿ ಗೌಪ್ಯವಾಗಿರುವುದರಿಂದ, ಅದರ ಪಟ್ಟಿ ಪಡೆಯುವುದು ಸುಲಭವಲ್ಲ. 2009ರ ಸಾಮಾಜಿಕ ಖಾತೆಗಳನ್ನು ನಿರ್ಬಂಧಿಸುವ ನಿಯಮಗಳು ಗೌಪ್ಯತೆಯ ಷರತ್ತನ್ನು ಹೊಂದಿವೆ. ಅದು ಹೆಚ್ಚು ಕಡಿಮೆ ಯಾವಾಗಲೂ ಅನ್ವಯಿಸುತ್ತದೆ. ಈ ಹಿಂದೆ ಎಕ್ಸ್‌ ಲುಮೆನ್ ಡೇಟಾಬೇಸ್ ಮೂಲಕ ಕನಿಷ್ಠ ಬ್ಲಾಕ್ ಆದ URLಗಳನ್ನು ಬಹಿರಂಗಪಡಿಸುತ್ತಿತ್ತು. ಆದರೆ, ಏಪ್ರಿಲ್ 2023ರಲ್ಲಿ ಅದನ್ನು ನಿಲ್ಲಿಸಿದೆ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ತಿಳಿಸಿದೆ.

ಇದನ್ನೂ ಓದಿ : MSP ಕುರಿತು ಕಾನೂನು ತರಲು ಪ್ರಧಾನಿ ಅಧಿವೇಶನ ಕರೆಯಲಿ: ರೈತ ಮುಖಂಡರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...