Homeಮುಖಪುಟಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

ಕೇಂದ್ರದಿಂದ ರೈತಪರ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ: ವರದಿ

- Advertisement -
- Advertisement -

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಅಥವಾ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವ ನೆಪದಲ್ಲಿ ಶಿಕ್ಷಣ ತಜ್ಞರು, ಹೋರಾಟಗಾರರು, ಬುದ್ಧಿ ಜೀವಿಗಳು ಮತ್ತು ವಿಮರ್ಶಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಕ್ರಮಕ್ಕೆ ನ್ಯಾಯಾಂಗದ ಮಧ್ಯಸ್ಥಿಕೆ ಮಾತ್ರ ಏಕೈಕ ಪರಿಹಾರ ಎಂದು ದಿ ಸೌತ್ ಫಸ್ಟ್‌ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ನಿನ್ನೆ(ಫೆಬ್ರವರಿ 19, ಸೋಮವಾರ) ಪತ್ರಕರ್ತ ಮತ್ತು ಆಲ್ಟ್ ನ್ಯೂಸ್‌ನ ಸಂಸ್ಥಾಪಕ ಮುಹಮ್ಮದ್ ಝುಬೈರ್ ಅವರು’ ರೈತ ಹೋರಾಟದ ಪರ ಇರುವ ಮತ್ತು ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸುವ ಎಕ್ಸ್‌ ಖಾತೆಗಳನ್ನು ಬ್ಲಾಕ್ ಮಾಡಲಾಗುತ್ತಿದೆ ಎಂದು ಪೋಸ್ಟ್‌ ಹಾಕಿದ್ದರು. ನಿರ್ಬಂಧಿಸಲಾದ ಖಾತೆಗಳನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ಅವರು ಮನವಿ ಮಾಡಿದ್ದರು.

“ಭಾರತದಲ್ಲಿ ರೈತರ ಪ್ರತಿಭಟನೆ ಪರ ಇರುವ ಗ್ರೌಂಡ್ ರಿಪೋರ್ಟರ್‌ಗಳು, ಪ್ರಮುಖ ರೈತ ಸಂಘಟನೆಗಳು ಮತ್ತು ಇತರ ಪ್ರಮುಖರ ಎಕ್ಸ್‌ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಬ್ಲಾಕ್ ಮಾಡಲಾದ ಕೆಲ ಖಾತೆಗಳ ಮಾಹಿತಿ ಇಲ್ಲಿ ಹಂಚಿಕೊಂಡಿದ್ದೇನೆ. ಇವುಗಳಲ್ಲದೆ ಇನ್ನೂ ಹಲವು ಖಾತೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಯವಿಟ್ಟು ಅವುಗಳನ್ನು ಮರು ಸ್ಥಾಪಿಸಿ” ಎಂದು ಝಬೈರ್ ವಿನಂತಿ ಮಾಡಿಕೊಂಡಿದ್ದರು.

@PunYaab, @GaonSavera, @mandeeppunia1,@tractor2twiter_1, @TribalArmy, @Rattan1990, @HansrajMeena, @PandherSarvan ಮತ್ತು @ramanmann1974 ಈ ಎಕ್ಸ್ ಖಾತೆಗಳನ್ನು ಪ್ರಮುಖವಾಗಿ ಬ್ಲಾಕ್ ಮಾಡಲಾಗಿದೆ ಎಂದು ಝುಬೈರ್ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದರು.

ಇಂದು (ಮಂಗಳವಾರ, 20 ಫೆಬ್ರವರಿ) ‘ದಿ ಹಿಂದೂಸ್ತಾನ್ ಟೈಮ್ಸ್’ ವರದಿಯೊಂದನ್ನು ಪ್ರಕಟಿಸಿದ್ದು, “ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ‘ಸಾರ್ವಜನಿಕ ಸುವ್ಯವಸ್ಥೆ’ ಕಾಪಾಡುವ ಕಾರಣ ಹೇಳಿ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ 177 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಲಿಂಕ್‌ಗಳ ವಿರುದ್ಧ ತುರ್ತು ನಿರ್ಬಂಧದ ಆದೇಶ ಹೊರಡಿಸಲು ಸೋಮವಾರ ತೀರ್ಮಾನಿಸಿದೆ” ಎಂದು ಹೇಳಿದೆ.

ಒಟ್ಟು 35 ಫೇಸ್‌ಬುಕ್ ಲಿಂಕ್‌ಗಳು, 35 ಫೇಸ್‌ಬುಕ್ ಪ್ರೊಫೈಲ್‌ಗಳು, 14 ಇನ್‌ಸ್ಟಾಗ್ರಾಮ್ ಖಾತೆಗಳು, 42 ಎಕ್ಸ್ ಹ್ಯಾಂಡಲ್‌ಗಳು ಮತ್ತು ಒಂದು ಸ್ನ್ಯಾಪ್‌ಚಾಟ್ ಮತ್ತು ಒಂದು ರೆಡ್ಡಿಟ್ ಖಾತೆಗಳ ವಿರುದ್ಧ ಸೋಮವಾರ ನಿರ್ಬಂಧ ಆದೇಶ ಹೊರಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವ ಐಟಿ ಕಾಯ್ದೆಯ ಸೆಕ್ಷನ್ 69ಎ ಜಾರಿ ಕುರಿತ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಮೆಟಾ ಮತ್ತು ಎಕ್ಸ್ ಪ್ರತಿನಿಧಿಗಳು, ಸಂಪೂರ್ಣ ಖಾತೆಗಳನ್ನು ನಿರ್ಬಂಧಿಸುವ ಬದಲು, ವಿಷಯದೊಂದಿಗೆ ನಿರ್ದಿಷ್ಟ URLಗಳನ್ನು ನಿರ್ಬಂಧಿಸಬೇಕು ಎಂದು ಹೇಳಿರುವುದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಮಿತಿ, “ಖಾತೆ ಸಕ್ರಿಯವಾಗಿದ್ದರೆ, ಸಾರ್ವಜನಿಕ ಅಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ವಿಷಯವನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಬಹುದು” ಎಂದು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಯಾರ ಖಾತೆಗಳನ್ನು ಬ್ಲಾಕ್ ಮಾಡಲಿದ್ದಾರೆ ಎಂಬುವುದರ ಮಾಹಿತಿ ಗೌಪ್ಯವಾಗಿರುವುದರಿಂದ, ಅದರ ಪಟ್ಟಿ ಪಡೆಯುವುದು ಸುಲಭವಲ್ಲ. 2009ರ ಸಾಮಾಜಿಕ ಖಾತೆಗಳನ್ನು ನಿರ್ಬಂಧಿಸುವ ನಿಯಮಗಳು ಗೌಪ್ಯತೆಯ ಷರತ್ತನ್ನು ಹೊಂದಿವೆ. ಅದು ಹೆಚ್ಚು ಕಡಿಮೆ ಯಾವಾಗಲೂ ಅನ್ವಯಿಸುತ್ತದೆ. ಈ ಹಿಂದೆ ಎಕ್ಸ್‌ ಲುಮೆನ್ ಡೇಟಾಬೇಸ್ ಮೂಲಕ ಕನಿಷ್ಠ ಬ್ಲಾಕ್ ಆದ URLಗಳನ್ನು ಬಹಿರಂಗಪಡಿಸುತ್ತಿತ್ತು. ಆದರೆ, ಏಪ್ರಿಲ್ 2023ರಲ್ಲಿ ಅದನ್ನು ನಿಲ್ಲಿಸಿದೆ ಎಂದು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ತಿಳಿಸಿದೆ.

ಇದನ್ನೂ ಓದಿ : MSP ಕುರಿತು ಕಾನೂನು ತರಲು ಪ್ರಧಾನಿ ಅಧಿವೇಶನ ಕರೆಯಲಿ: ರೈತ ಮುಖಂಡರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...