Homeಮುಖಪುಟವಾಯುಮಾಲಿನ್ಯ ತಡೆಗೆ ಸುಗ್ರೀವಾಜ್ಞೆ: 5 ವರ್ಷ ಜೈಲು; 1 ಕೋಟಿ ದಂಡ

ವಾಯುಮಾಲಿನ್ಯ ತಡೆಗೆ ಸುಗ್ರೀವಾಜ್ಞೆ: 5 ವರ್ಷ ಜೈಲು; 1 ಕೋಟಿ ದಂಡ

ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.

- Advertisement -
- Advertisement -

ದೇಶದ ರಾಜಧಾನಿ ದೆಹಲಿಯಲ್ಲಿ ಪ್ರತಿ ವರ್ಷವು ಕಾಡುವ ವಾಯುಮಾಲಿನ್ಯ ಸಮಸ್ಯೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸುಗ್ರೀವಾಜ್ಞೆ ಹೊರಡಿಸಿದೆ.

ವಾಯುಮಾಲಿನ್ಯಕ್ಕೆ ಕಾರಣವಾಗುವವರಿಗೆ, ಕಾನೂನಿನಲ್ಲಿರುವ ನಿಯಮಗಳನ್ನು ಉಲ್ಲಂಘಿಸಿದರೆ 5 ವರ್ಷ ಜೈಲು ಶಿಕ್ಷೆ ಹಾಗೂ 1 ಕೋಟಿ ದಂಡ ವಿಧಿಸಲಾಗುತ್ತದೆ ಎಂದು ಕಾನೂನು ಸಚಿವಾಲಯ ಸುಗ್ರೀವಾಜ್ಞೆ ಹೊರಡಿಸಿದೆ.

ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆಯು ಪಂಜಾಬ್‌, ಹರಿಯಾಣ, ರಾಜಸ್ಥಾನ ಹಾಗೂ ಉತ್ತರ ಪ್ರದೇಶ, ದೆಹಲಿ–ಎನ್‌ಸಿಆರ್‌ನ ಸುತ್ತಮುತ್ತಲಿನ ಪ್ರದೇಶಗಳನ್ನು ಒಳಗೊಂಡಿದೆ. ರಾಜ್ಯಗಳಲ್ಲಿ ವಾಯುಮಾಲಿನ್ಯ ತಡೆಗಟ್ಟಲು ಆಯೋಗ ರಚಿಸುವಂತೆ ಆದೇಶಿಸಲಾಗಿದೆ.

ಈ ಆಯೋಗ 18 ಸದಸ್ಯರುಗಳನ್ನು ಒಳಗೊಂಡಿದ್ದು, ಕಾನೂನಿನ ಸೂಕ್ತ ಅನುಷ್ಠಾನದ ಜವಾಬ್ದಾರಿ ಇವರ ಮೇಲಿರಲಿದೆ. 18 ಸದಸ್ಯರ ಪೈಕಿ 10 ಮಂದಿ ಅಧಿಕಾರಿಗಳಿರಲಿದ್ದಾರೆ. ಉಳಿದಂತೆ ತಜ್ಞರು ಮತ್ತು ಹೋರಾಟಗಾರರನ್ನು ಒಳಗೊಂಡಿರುತ್ತದೆ. ಇದಕ್ಕೆ ಎನ್‌ಸಿಆರ್‌ ಪ್ರದೇಶ ಹಾಗೂ ಸುತ್ತಮುತ್ತ ವಾಯುಮಾಲಿನ್ಯಕ್ಕೆ ಕಾರಣವಾಗುವ ಚಟುವಟಿಕೆಗಳನ್ನು ನಿರ್ಬಂಧಿಸುವ ಅಧಿಕಾರ, ಸ್ವಯಂಪ್ರೇರಿತವಾಗಿ ಆದೇಶಗಳನ್ನು ಹೊರಡಿಸುವ ಅಧಿಕಾರ ನೀಡಲಾಗಿದೆ.

ಇದನ್ನೂ ಓದಿ: ಪ್ರವಾಹ: ತೆಲಂಗಾಣ ರಾಜ್ಯಕ್ಕೆ 15 ಕೋಟಿ ರೂ ದೇಣಿಗೆ ನೀಡಲು ಮುಂದಾದ ದೆಹಲಿ ಸರ್ಕಾರ!

ಮೂರು ವರ್ಷಗಳ ಕಾಲಕ್ಕೆ ಸದಸ್ಯರನ್ನು ನೇಮಿಸಲಾಗುತ್ತದೆ. ಈ ಸದಸ್ಯರನ್ನು ಕೇಂದ್ರ ಪರಿಸರ ಸಚಿವರು ಮತ್ತು ಇತರೆ ಮೂರು ಸಚಿವರು ಹಾಗೂ ಕ್ಯಾಬಿನೆಟ್​ನ ಕಾರ್ಯದರ್ಶಿಗಳು ಆಯ್ಕೆ ಮಾಡುತ್ತಾರೆ. ಆಯೋಗದ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿ ಅಥವಾ ರಾಜ್ಯವೊಂದರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದವರು ನಿಭಾಯಿಸಲಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆಯೊಂದನ್ನು ಸಿದ್ಧಪಡಿಸಿರುವುದಾಗಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಿದೆ. ಸುಪ್ರೀಂ ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ.

ಆಯೋಗದ ಆದೇಶಗಳನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಮುಂದೆ ಮಾತ್ರ ಪ್ರಶ್ನಿಸಬಹುದು ಮತ್ತು ಯಾವುದೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ.

ಈ ಹಿಂದೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಂಜಾಬ್‌, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿನ ಕೃಷಿ ತ್ಯಾಜ್ಯ ಸುಡುವುದನ್ನು ನಿಯಂತ್ರಿಸಲು ಹಾಗೂ ಅಗತ್ಯ ಕ್ರಮಗಳ ಕುರಿತು ಅಧ್ಯಯನ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮದನ್ಬಿ.ಲೋಕೂರ್ ನೇತೃತ್ವದಲ್ಲಿ​​ ಸಮಿತಿ ರಚಿಸಿದೆ.


ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...