Homeಮುಖಪುಟಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಗೆ ಏಳು ವರ್ಷಗಳ ಜೈಲು ಶಿಕ್ಷೆ: ಕೇಂದ್ರ ಸರ್ಕಾರ

ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಗೆ ಏಳು ವರ್ಷಗಳ ಜೈಲು ಶಿಕ್ಷೆ: ಕೇಂದ್ರ ಸರ್ಕಾರ

- Advertisement -
- Advertisement -

ವೈದ್ಯರು, ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ನಡೆಸಿದರ ವಿರುದ್ಧ ಕಠಿಣ ಕಾನೂನು ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಆರು ತಿಂಗಳಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಪ್ರಕಟಿಸಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ಹೆಚ್ಚುತ್ತಿರುವುದನ್ನು ತಡೆಯಲು ಮತ್ತು ವೈದ್ಯರನ್ನು ರಕ್ಷಿಸಲು ಸರ್ಕಾರ ಸುಗ್ರೀವಾಜ್ಞೆಯನ್ನು ತಂದಿದೆ. ದಾಳಿಯನ್ನು ಜಾಮೀನು ರಹಿತ ಅಪರಾಧವನ್ನಾಗಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

“ಈ ಸಾಂಕ್ರಾಮಿಕ ರೋಗದಿಂದ ದೇಶವನ್ನು ಉಳಿಸಲು ಪ್ರಯತ್ನಿಸುತ್ತಿರುವ ಆರೋಗ್ಯ ಕಾರ್ಯಕರ್ತರು ದುರದೃಷ್ಟವಶಾತ್ ದಾಳಿಯನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ಯಾವುದೇ ಹಿಂಸಾಚಾರ ಅಥವಾ ಕಿರುಕುಳದ ಘಟನೆಯನ್ನು ಸಹಿಸಲಾಗುವುದಿಲ್ಲ” ಎಂದು ಜಾವಡೇಕರ್ ಹೇಳಿದರು.

120 ವರ್ಷಗಳಷ್ಟು ಹಳೆಯದಾದ ಸಾಂಕ್ರಾಮಿಕ ಕಾಯ್ದೆಯನ್ನು ತಿದ್ದುಪಡಿ ಮಾಡಿದ್ದೇವೆ. ವೈದ್ಯರು ಅಥವಾ ಆರೋಗ್ಯ ಕಾರ್ಯಕರ್ತರ ಮೇಲಿನ ಯಾವುದೇ ದಾಳಿಯು 1 ಲಕ್ಷದಿಂದ 5 ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು.

“ಈ ಕಾನೂನು ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ಪರಿಚಾರಕರು ಮತ್ತು ಆಶಾ ಕಾರ್ಮಿಕರನ್ನು ರಕ್ಷಿಸುತ್ತದೆ. ಆರೋಗ್ಯ ವೃತ್ತಿಪರರಿಗೆ ವಿಮಾ ರಕ್ಷಣೆಯನ್ನು ವಿಸ್ತರಿಸಲಾಗುವುದು” ಎಂದು ಅವರು ಹೇಳಿದರು.

ಆರೋಗ್ಯ ಕಾರ್ಯಕರ್ತರ ವಾಹನಗಳು ಅಥವಾ ಚಿಕಿತ್ಸಾಲಯಗಳಿಗೆ ಹಾನಿಯಾದರೆ, ಹಾನಿಗೊಳಗಾದ ಆಸ್ತಿಯ ಮಾರುಕಟ್ಟೆ ಮೌಲ್ಯಕ್ಕಿಂತ ಎರಡು ಪಟ್ಟು ಪರಿಹಾರವನ್ನು ಆರೋಪಿಗಳಿಂದ ವಸೂಲಿ ಮಾಡಲಾಗುವುದು ಎಂದು ಹೇಳಿದರು.

ಸುಗ್ರೀವಾಜ್ಞೆಯನ್ನು ತರಲಾಗಿದೆ, ಅಧ್ಯಕ್ಷರ ಅನುಮೋದನೆಯ ನಂತರ ಅದನ್ನು ಜಾರಿಗೆ ತರಲಾಗುವುದು ಎಂದು ಜಾವಡೇಕರ್ ಹೇಳಿದ್ದಾರೆ.


ಇದನ್ನೂ ಓದಿ: ರಕ್ಷಣಾ ಉಪಕರಣ ಕೇಳಿದ ವೈದ್ಯರನ್ನು ದೂಷಿಸುವುದು ಸರಿಯಲ್ಲ: ಪ್ರಧಾನಿಗೆ ಪತ್ರ ಬರೆದ ಏಮ್ಸ್ ವೈದ್ಯರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...